ಬಿಬಿಎಂಪಿ ಕಸ ವಾಹನ ಭೀಕರ ಡಿಕ್ಕಿ: ಒಂದು ಸಾವು

ಮಹಾದೇವಪುರದ ಮಂಡೂರು ಸಮೀಪ ಕಸ ವಿಲೇವಾರಿ ಘಟಕಕ್ಕೆ ಕಸ ಸಾಗಿಸುವಾಗ ಮೇಡಹಳ್ಳಿ ಸೇತುವೆಯ ಬಳಿ ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಲಾರಿ ಚಾಲಕ ಪಂಚಾಲಯ್ಯ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಲಾರಿಯಲ್ಲಿದ್ದ ಇನ್ನೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ಎರಡೂ ಲಾರಿಗಳ ಮುಂಭಾಗ ತೀವ್ರವಾಗಿ ನುಜ್ಜುಗುಜ್ಜಾಗಿದೆ.
ಅಪಘಾತಕ್ಕೀಡಾದ ಈ ಲಾರಿಗಳು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಗೆ ಸೇರಿದ ಲಾರಿಗಳಾಗಿವೆ ಎನ್ನಲಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯರಾಂ ಹೆಚ್ಚುವರಿ ಪೊಲೀಸ್ ಆಯುಕ್ತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.












Click it and Unblock the Notifications