ಬಳ್ಳಾರಿಯಲ್ಲಿ ಮರುಎಣಿಕೆ ಫಿವರ್: ಬಾಜಿ ಜೋರು

ಆದರೆ ಚುನಾವಣೆಯ ಮರು ಫಲಿತಾಂಶಕ್ಕೆ ಇನ್ನೂ ಒಂದು ವಾರವಿರುವಾಗಲೇ ಬಳ್ಳಾರಿಯಾದ್ಯಂತ ಮರುಎಣಿಕೆ ಜ್ವರ ಜೋರಾಗಿಯೇ ಕಾಣಿಸಿಕೊಂಡಿದೆ. ಶಾಂತಾ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುತ್ತಾರೋ ಅಥವಾ ಅವರ ಪ್ರತಿಸ್ಪರ್ಧಿಯಾಗಿ ಸೋತಿದ್ದ ಕಾಂಗ್ರೆಸ್ಸಿನ ಎನ್.ವೈ. ಹನುಮಂತಪ್ಪ ಅವರು ಗೆಲುವಿನ ನಗೆ ಬೀರುತ್ತಾರೋ ಎಂಬುದರ ಬಗ್ಗೆ ಬಾಜಿ ಆಟ ಜೋರಾಗಿಯೇ ನಡೆಯುತ್ತಿದೆ.
ಗೋವಾ ಪ್ರವಾಸವೂ ಉಂಟು : ಶಾಂತಾ ಪರ ಬಿಎಸ್ಆರ್ ಕಾಂಗ್ರೆಸ್ ಮತ್ತು ಎನ್.ವೈ. ಹನುಮಂತಪ್ಪ ಅವರ ಪರ ಕಾಂಗ್ರೆಸ್ ಕಾರ್ಯಕರ್ತರು ಕಳೆದ ವಾರದಿಂದಲೇ ಭರ್ಜರಿ ಬಾಜಿ ಆಟಕ್ಕೆ ಇಳಿದಿದ್ದಾರೆ. ಕೆಲವರು ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಹಣ ಗಳಿಸುವ ಉದ್ದೇಶದಿಂದ ಹಣ ಹೂಡುತ್ತಿದ್ದಾರೆ. ಕೆಲವರು ಬಡ್ಡಿಗೆ ಹಣ ತಂದು ಬೆಟ್ಟಿಂಗ್ ಕಟ್ಟುತ್ತಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಬೆಟ್ಟಿಂಗ್ ಗೆ ಹಣವಷ್ಟೇ ಮಾನದಂಡವಾಗಿಲ್ಲ. ಸೋತರೆ ಇಂತಿಷ್ಟು ಗ್ರಾಂ ಬಂಗಾರ, ಗುಂಡು ಪಾರ್ಟಿ, ಗೋವಾ ಪ್ರವಾಸ ಅಂತೆಲ್ಲ ಬೇಡಿಕೆಗಳ ಆಧಾರದಲ್ಲಿ ಬೆಟ್ಟಿಂಗ್ ಶುರುವಾಗಿದೆ. ಬಳ್ಳಾರಿ ಸುತ್ತಮುತ್ತಲ ಹಳ್ಳಿ ಜನರೂ ಬೆಟ್ಟಿಂಗ್ ನಿಂದ ದೂರುಳಿದಿಲ್ಲ.
ಹದಿನಾರೇ ಸುತ್ತು ಬಾಕಿ: ಕಾಂಗ್ರೆಸ್ ಕಾರ್ಯಕರ್ತರ ಪ್ರಕಾರ ತಮ್ಮ ಅಭ್ಯರ್ಥಿ ಹನುಮಂತಪ್ಪ ಅವರು 16ನೇ ಸುತ್ತಿನ ಮತ ಎಣಿಕೆವರೆಗೂ ಭಾರಿ ಅಂತರದೊಂದಿಗೆ ಮುನ್ನಡೆಯಲ್ಲಿದ್ದರು. ಹಾಗಾಗಿ ಈ ಬಾರಿಯೂ ಮರು ಎಣಿಕೆ ವೇಳೆಯಲ್ಲಿ 16 ನೇ ಸುತ್ತಿನಲ್ಲಿ ಹನುಮಂತಪ್ಪ ಅವರೇ ಲೀಡ್ ಕಾಯ್ದುಕೊಂಡರೆ ಜಯ ಅವರದೇ ಎಂದು ಖಚಿತ ದನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೇಳುತ್ತಿದ್ದಾರೆ.
ವಿಶೇಷ ವ್ಯವಸ್ಥೆ: ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ 2009ರಲ್ಲಿ ನಡೆದಿದ್ದ ಚುನಾವಣಾ ಮತಗಳನ್ನು ನಾನಾ ಕೋರ್ಟುಗಳ ಆದೇಶದ ಹಿನ್ನೆಲೆಯಲ್ಲಿ ಸೆ. 15ರಂದು ನಗರದ ಮಹಾಬಲೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮರು ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಮತ್ರತು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.
ಮತಗಳ ಮರು ಎಣಿಕೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಅಲ್ಲದೆ, ಸೆ. 12ರಿಂದ 16ರವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಸೆ. 15ರಂದು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಶನಿವಾರ 10.30ಕ್ಕೆ ಮರು ಮತ ಎಣಿಕೆ ಕಾರ್ಯ ಆರಂಭಗೊಂಡು ಮಧ್ಯಾಹ್ನ 2ರ ಒಳಗೆ ಮುಗಿಯಲಿದೆ. ಎಣಿಕೆಗಾಗಿ 98 ಟೇಬಲ್ ಇರಿಸಿದ್ದು, 330 ಸಿಬ್ಬಂದಿ ನೆರತವಾಗಲಿದ್ದಾರೆ. ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ಚುನಾವಣಾ ಆಯೋಗ ನೇಮಿಸಿದೆ. ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಆಗಮಿಸಲಿದ್ದಾರೆ.
ಏನಿದು ತಕರಾರು: 2009ರ ಎಪ್ರಿಲ್ 23ರಂದು ಬಳ್ಳಾರಿ ಲೋಕಸಭಾ ಚುನಾವಣೆಗೆ ಮತದಾನ ನಡೆದಿದ್ದು, 2009ರ ಮೇ 16ರಂದು ಮತ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಜಯಗಳಿಸಿದ್ದಾರೆಂದು ಪ್ರಕಟಿಸಲಾಗಿತ್ತು. ಆದರೆ, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಚಂದ್ರೇಗೌಡ ಮತ್ತಿತರು ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆಗೆ ನಡೆಸಿದ ನ್ಯಾಯಾಲಯ ಸಂಸದೆ ಜೆ.ಶಾಂತಾ ಅವರನ್ನು ಅನರ್ಹಗೊಳಿಸಿ ಮತಗಳ ಮರು ಎಣಿಕೆಗೆ ಆದೇಶ ಮಾಡಿತ್ತು. ಈ ಮಧ್ಯೆ ಸಂಸದೆ ಜೆ. ಶಾಂತಾ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೆ.ಶಾಂತಾ ಮನವಿಯನ್ನು ತಿರಸ್ಕರಿಸಿ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ಆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸೆ. 15ರಂದು ಮರು ಎಣಿಕೆ ನಡೆಸಲು ಬಳ್ಳಾರಿ ಜಿಲ್ಲಾಡಳಿತಕ್ಕೆ ಸೂಚಿಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications