ಎಚ್ಡಿಕೆಯನ್ನು ತರಾಟೆಗೆ ತೆಗೆದುಕೊಂಡ ನ್ಯಾ ಸುಧೀಂದ್ರರಾವ್

ಥಣಿಸಂದ್ರದಲ್ಲಿ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಲೋಕಾಯುಕ್ತ ಕೋರ್ಟಿಗೆ ಎಚ್ ಡಿ ಕುಮಾರಸ್ವಾಮಿ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿತ್ತು. ಆದರೆ ಅನಾರೋಗ್ಯದ ನೆಪವೊಡ್ಡಿ ಅವರು ಕೋರ್ಟಿಗೆ ಗೈರು ಹಾಜರಾದರು. ಪ್ರಕರಣದ ವಿಚಾರಣೆಯನ್ನು ಸೆ. 20ಕ್ಕೆ ಮುಂದೂಡಲಾಗಿದೆ.
ಆದರೆ ಅವರಿಗೆ ಮೆಡಿಕಲ್ ಸರ್ಟಿಫಿಕೇಟ್ ಕೊಟ್ಟ ವೈದ್ಯರನ್ನು ನ್ಯಾ ಸುಧೀಂದ್ರರಾವ್ ಅವರು ತರಾಟೆಗೆ ತೆಗೆದುಕೊಂಡರು. ಗಮನಾರ್ಹವೆಂದರೆ ಕಳೆದ ಬಾರಿಯ ವಿಚಾರಣೆಯ ವೇಳೆಯೂ ಎಚ್ ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ ಕೋರ್ಟಿಗೆ ಬಂದಿರಲಿಲ್ಲ.
ಆಗ, ನ್ಯಾಯಾಧೀಶರು ಹೀಗೆ ಸುಳ್ಳು ಕಾರಣ ಕೊಟ್ಟು ಗೈರು ಹಾಜರಾದರೆ ಜಾಮೀನುರಹಿತ ವಾರಂಟ್ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಮಂಗಳವಾರವೂ ಅದು ಪುನರಾವರ್ತನೆಯಾಯಿತು.
ಕುಮಾರಸ್ವಾಮಿ ಪರ ವಕೀಲರು ಎಂದಿನಂತೆ 'ಅನಾರೋಗ್ಯದಿಂದಾಗಿ ತಮ್ಮ ಕಕ್ಷಿದಾರರು ಜಾಹರಾಘಲು ಸಾಧ್ಯವಾಗಿಲ್ಲ' ಎಂದು ರಾಗವೆಳೆದರು. ಜತೆಗೆ, ವೈದ್ಯ ಮಹಾಶಯರು ನೀಡಿದ್ದ ಮೆಡಿಕಲ್ ಸರ್ಟಿಫಿಕೇಟನ್ನೂ ಸಬ್ಮಿಟ್ ಮಾಡಿದರು.
ಮೆಡಿಕಲ್ ಸರ್ಟಿಫಿಕೇಟನ್ನು ನೋಡಿದ ನ್ಯಾ ಎನ್ ಕೆ ಸುಧೀಂದ್ರರಾವ್ ಅವರಿಗೆ ಅದೆಲ್ಲಿತ್ತೋ ಸಿಟ್ಟು ಕಿಡಿಕಿಡಿಯಾದರು. ಅಸಲಿಗೆ ಕುಮಾರಸ್ವಾಮಿ ಯಾವ ದಿನಾಂಕದಿಂದ ಯಾವ ದಿನಾಂಕದವರೆಗೆ ಚಿಕಿತ್ಸೆ ಪಡೆದಿದ್ದರು ಎಂಬುದನ್ನೇ ವೈದ್ಯ ಮಹಾಶಯರು ನಮೂದಿಸಿರಲಿಲ್ಲ.
ಇದರಿಂದ ತೀವ್ರವಾಗಿ ಅಸಮಾಧಾನಗೊಂಡ ನ್ಯಾ ಸುಧೀಂದ್ರರಾವ್ ಅವರು 'ಯಾರ್ರೀ ಡಾಕ್ಟರು, ಆರೋಗ್ಯ ಸರಿಯಿಲ್ಲ ಎಂದು ವರದಿ ಕೊಟ್ಟಿದ್ದಾರೆ. ಆದರೆ ಯಾವ ದಿನ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದನ್ನೇ ಬರೆದಿಲ್ಲ' ಎಂದು ತರಾಟೆಗೆ ತೆಗೆದುಕೊಂಡು ನೋಟಿಸ್ ಜಾರಿ ಮಾಡಲೂ ಮುಂದಾದರು.
ಎಲ್ಲೋ ಕಣ್ತಪ್ಪಿನಿಂದ ಪ್ರಮಾದವಾಗಿದೆ ಎಂದು ಕುಮಾರಸ್ವಾಮಿ ಪರ ವಕೀಲರು ಸ್ಪಷ್ಟನೆ ನೀಡಿದರು. ಆಗ ವಕೀಲರ ಮೇಲೂ ಗರಂ ಆದ ನ್ಯಾ ಸುಧೀಂದ್ರರಾವ್ ಅವರು 'ವೈದ್ಯರ ಪರ ವಕಾಲತ್ತು ವಹಿಸಬೇಕಿದ್ದರೆ ಇನ್ನೊಂದು ಅರ್ಜಿ ಹಾಕಿಕೊಳ್ಳಿ' ಎಂದು ತರಾಟೆಗೆ ತೆಗೆದುಕೊಂಡಾಗ ವಕೀಲರು ಸುಸ್ತೋ ಸುಸ್ತು!
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications