ಎಚ್ಡಿಕೆಯನ್ನು ತರಾಟೆಗೆ ತೆಗೆದುಕೊಂಡ ನ್ಯಾ ಸುಧೀಂದ್ರರಾವ್

ಥಣಿಸಂದ್ರದಲ್ಲಿ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಲೋಕಾಯುಕ್ತ ಕೋರ್ಟಿಗೆ ಎಚ್ ಡಿ ಕುಮಾರಸ್ವಾಮಿ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿತ್ತು. ಆದರೆ ಅನಾರೋಗ್ಯದ ನೆಪವೊಡ್ಡಿ ಅವರು ಕೋರ್ಟಿಗೆ ಗೈರು ಹಾಜರಾದರು. ಪ್ರಕರಣದ ವಿಚಾರಣೆಯನ್ನು ಸೆ. 20ಕ್ಕೆ ಮುಂದೂಡಲಾಗಿದೆ.
ಆದರೆ ಅವರಿಗೆ ಮೆಡಿಕಲ್ ಸರ್ಟಿಫಿಕೇಟ್ ಕೊಟ್ಟ ವೈದ್ಯರನ್ನು ನ್ಯಾ ಸುಧೀಂದ್ರರಾವ್ ಅವರು ತರಾಟೆಗೆ ತೆಗೆದುಕೊಂಡರು. ಗಮನಾರ್ಹವೆಂದರೆ ಕಳೆದ ಬಾರಿಯ ವಿಚಾರಣೆಯ ವೇಳೆಯೂ ಎಚ್ ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ ಕೋರ್ಟಿಗೆ ಬಂದಿರಲಿಲ್ಲ.
ಆಗ, ನ್ಯಾಯಾಧೀಶರು ಹೀಗೆ ಸುಳ್ಳು ಕಾರಣ ಕೊಟ್ಟು ಗೈರು ಹಾಜರಾದರೆ ಜಾಮೀನುರಹಿತ ವಾರಂಟ್ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಮಂಗಳವಾರವೂ ಅದು ಪುನರಾವರ್ತನೆಯಾಯಿತು.
ಕುಮಾರಸ್ವಾಮಿ ಪರ ವಕೀಲರು ಎಂದಿನಂತೆ 'ಅನಾರೋಗ್ಯದಿಂದಾಗಿ ತಮ್ಮ ಕಕ್ಷಿದಾರರು ಜಾಹರಾಘಲು ಸಾಧ್ಯವಾಗಿಲ್ಲ' ಎಂದು ರಾಗವೆಳೆದರು. ಜತೆಗೆ, ವೈದ್ಯ ಮಹಾಶಯರು ನೀಡಿದ್ದ ಮೆಡಿಕಲ್ ಸರ್ಟಿಫಿಕೇಟನ್ನೂ ಸಬ್ಮಿಟ್ ಮಾಡಿದರು.
ಮೆಡಿಕಲ್ ಸರ್ಟಿಫಿಕೇಟನ್ನು ನೋಡಿದ ನ್ಯಾ ಎನ್ ಕೆ ಸುಧೀಂದ್ರರಾವ್ ಅವರಿಗೆ ಅದೆಲ್ಲಿತ್ತೋ ಸಿಟ್ಟು ಕಿಡಿಕಿಡಿಯಾದರು. ಅಸಲಿಗೆ ಕುಮಾರಸ್ವಾಮಿ ಯಾವ ದಿನಾಂಕದಿಂದ ಯಾವ ದಿನಾಂಕದವರೆಗೆ ಚಿಕಿತ್ಸೆ ಪಡೆದಿದ್ದರು ಎಂಬುದನ್ನೇ ವೈದ್ಯ ಮಹಾಶಯರು ನಮೂದಿಸಿರಲಿಲ್ಲ.
ಇದರಿಂದ ತೀವ್ರವಾಗಿ ಅಸಮಾಧಾನಗೊಂಡ ನ್ಯಾ ಸುಧೀಂದ್ರರಾವ್ ಅವರು 'ಯಾರ್ರೀ ಡಾಕ್ಟರು, ಆರೋಗ್ಯ ಸರಿಯಿಲ್ಲ ಎಂದು ವರದಿ ಕೊಟ್ಟಿದ್ದಾರೆ. ಆದರೆ ಯಾವ ದಿನ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದನ್ನೇ ಬರೆದಿಲ್ಲ' ಎಂದು ತರಾಟೆಗೆ ತೆಗೆದುಕೊಂಡು ನೋಟಿಸ್ ಜಾರಿ ಮಾಡಲೂ ಮುಂದಾದರು.
ಎಲ್ಲೋ ಕಣ್ತಪ್ಪಿನಿಂದ ಪ್ರಮಾದವಾಗಿದೆ ಎಂದು ಕುಮಾರಸ್ವಾಮಿ ಪರ ವಕೀಲರು ಸ್ಪಷ್ಟನೆ ನೀಡಿದರು. ಆಗ ವಕೀಲರ ಮೇಲೂ ಗರಂ ಆದ ನ್ಯಾ ಸುಧೀಂದ್ರರಾವ್ ಅವರು 'ವೈದ್ಯರ ಪರ ವಕಾಲತ್ತು ವಹಿಸಬೇಕಿದ್ದರೆ ಇನ್ನೊಂದು ಅರ್ಜಿ ಹಾಕಿಕೊಳ್ಳಿ' ಎಂದು ತರಾಟೆಗೆ ತೆಗೆದುಕೊಂಡಾಗ ವಕೀಲರು ಸುಸ್ತೋ ಸುಸ್ತು!
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications