ಮೊಬೈಲಿನಲ್ಲಿ ಬ್ಲೂಫಿಲಂ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸದರಿ ಕಾಲೇಜು ವಿದ್ಯಾರ್ಥಿ ಹರ್ಷಿತ್ ಪರೀಕ್ಷಾ ಕೊಠಡಿಯಲ್ಲಿ ಮೊಬೈಲಿನಲ್ಲಿ ಬ್ಲೂ ಫಿಲಂ ವೀಕ್ಷಿಸುತ್ತಿದ್ದ ಎಂಬುದಾಗಿ ಉಪನ್ಯಾಸಕರು ಹಾಗೂ ಕಾಲೇಜಿನ ಶಿಸ್ತು ಸಮಿತಿ ಪ್ರಚಾರ ನಡೆಸಿದ್ದ ಕಾರಣಕ್ಕಾಗಿ ಮನನೊಂದ ದ್ವಿತೀಯ ಬಿಕಾಂ ವಿದ್ಯಾರ್ಥಿ ಯಾಲದಾಳು ಹರ್ಷಿತ್ (19) ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದ್ದಾರೆ.
ಸೆ. 6ರಂದು ಕಾಲೇಜು ಕೊಠಡಿಯಲ್ಲಿ internals (ಆಂತರಿಕ ಪರೀಕ್ಷೆ) ನಡೆಯುತ್ತಿದ್ದಾಗ ವಿದ್ಯಾರ್ಥಿ ಹರ್ಷಿತ್ ಮೊಬೈಲಿನಲ್ಲಿ ಬ್ಲೂ ಫಿಲಂ ವೀಕ್ಷಿಸುತ್ತಿದ್ದಾಗ ಮೊಬೈಲ್ ರಿಂಗಣಿಸಿದೆ. ಕೊಠಡಿಯಲ್ಲಿದ್ದ ಉಪನ್ಯಾಸಕರು ಮೊಬೈಲನ್ನು ವಶಪಡಿಸಿಕೊಂಡಿದ್ದಾರೆ. ಆಗ ವಿದ್ಯಾರ್ಥಿ ಹರ್ಷಿತ್ ಬ್ಲೂ ಫಿಲಂ ವೀಕ್ಷಿಸುತ್ತಿರುವುದು ಬೆಳಕಿಗೆ ಬಂತು ಎನ್ನಲಾಗಿದೆ.
ಬ್ಲೂ ಫಿಲಂ ವೀಕ್ಷಿಸಿದ ಕಾರಣಕ್ಕಾಗಿ ಕೆಲವು ಉಪನ್ಯಾಸಕರು ಹರ್ಷಿತನನ್ನು ತರಾಟೆಗೆ ತೆಗೆದುಕೊಂಡಿದ್ದರು. ಕಾಲೇಜಿನ ಶಿಸ್ತು ಸಮಿತಿ ಸಹ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿತ್ತು. ಇದರಿಂದ ನೊಂದ ಹರ್ಷಿತ ಸೆ. 6ರಂದು ಕಾಲೇಜಿಗೆಂದು ಹೊರಟವನು, ಬಳಿಕ ಕಾಣೆಯಾಗಿದ್ದ. ಸೆ. 9ರಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಸೆ. 11 ರಂದು ಮನೆಯ ಸಮೀಪದಲ್ಲೇ ಇರುವ ತೋಟದಲ್ಲಿ ಹರ್ಷಿತನ ಶವ ಪತ್ತೆಯಾಗಿದೆ.
ಆತ ವಿಷ ಸೇವಿಸಿ ಸಾವಿಗೆ ಶರಣಾಗಿದ್ದು, ಈ ಸಾವಿಗೆ ತಾನೇ ಕಾರಣ ಎಂದು ಮರಣ ಪತ್ರದಲ್ಲಿ ಬರೆದಿಟ್ಟಿದ್ದಾನೆ. ಇದರ ಜತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ 6 ತಿಂಗಳ ಹಿಂದೆ ಮೃತಪಟ್ಟಿದ್ದೂ ಹರ್ಷಿತನನ್ನು ಬಾಧಿಸಿದೆ. ಇದನ್ನು ಆತ ಮರಣ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications