ಲಾರಿ ಮುಷ್ಕರ:ಬೆಲೆಯೇರಿಕೆಯ ಬಿಸಿಗೆ ಸಜ್ಜಾಗಿ

ಈ ನಡುವೆ ಕಳೆದ ಕೆಲ ವರ್ಷಗಳಿಂದ ಒಂದಲ್ಲಾ ಒಂದು ನೆಪ ಇಟ್ಟುಕೊಂಡು ಮುಷ್ಕರ ನಡೆಸುತ್ತಿರುವ ಲಾರಿಗಳು ಗಣೇಶ ಹಬ್ಬದ ದಿನವಾದ ಸೆಪ್ಟಂಬರ್ 19ರಿಂದ ಮತ್ತೆ ಮುಷ್ಕರ ಹೂಡಲಿವೆ. ಕಾರಣ, ಡಿಸೇಲ್ ಬೆಲೆ ಏರಿಕೆ.
ಕೇಂದ್ರ ಸರಕಾರ ಏಕಾಏಕಿ ಡಿಸೇಲ್ ಬೆಲೆಯನ್ನು ಲೀಟರ್ ವೊಂದಕ್ಕೆ ಆರು ರೂಪಾಯಿ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಒಕ್ಕೂಟ ಸೇರಿದಂತೆ ಎಲ್ಲಾ ಸರಕು ಸಾಗಾಣಿಕೆ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿವೆ.
ಸೆ 18ರಂದು ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಮುಂಬೈನಲ್ಲಿ ಸಭೆ ಸೇರಿ ಉದ್ದೇಶಿತ ಮುಷ್ಕರದ ರೂಪುರೇಷೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಈಗಾಗಲೇ ಟೋಲ್ ಸಂಗ್ರಹ, ಚಾಲಕರ ಕೊರತೆಯಿಂದಾಗಿ ನಾನಾ ಸಮಸ್ಯೆಗಳನ್ನು ನಾವು ಎದುರಿಸುತ್ತಿದ್ದೇವೆ. ಇಂಥ ಪರಿಸ್ಥಿತಿಯಲ್ಲಿ ಡೀಸೆಲ್ ಬೆಲೆಯೇರಿಕೆ ನಮ್ಮನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿ ಹಾಕಲಿವೆ.
ಹಾಗಾಗಿ ನಮಗೆ ಮುಷ್ಕರ ನಡೆಸದೆ ಬೇರೆ ದಾರಿ ಇಲ್ಲ ಎಂದು ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸರಕಾರ ಈ ಕೂಡಲೇ ಬೆಲೆಯನ್ನು ವಾಪಾಸ್ ಪಡೆಯಬೇಕು. ಸೆ 18ರೊಳಗೆ ವಾಪಾಸ್ ಪಡೆಯದಿದ್ದಲ್ಲಿ 19ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ನಮಗೆ ಅನಿವಾರ್ಯವಾಗಲಿದೆ ಎಂದು ಷಣ್ಮುಗಪ್ಪ ಹೇಳಿದ್ದಾರೆ.
ಲಾರಿ ಮುಷ್ಕರದಿಂದ ದೈನಂದಿನ ಜೀವನಕ್ಕೆ ಅಗತ್ಯವಾದ ತರಕಾರಿ, ಹೂವು, ಹಣ್ಣು, ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯವಾಗಲಿವೆ. ಮರಳು ಲಾರಿಗಳು ಕೂಡ ಬೆಂಬಲ ಸೂಚಿಸಿರುವುದರಿಂದ ಕಟ್ಟಡ ನಿರ್ಮಾಣಕ್ಕೂ ತೊಂದರೆಯಾಗಲಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications