ಡೀಸೆಲ್ ಬೆಲೆಏರಿಕೆಗೆ ಹೆಬ್ಬೆರಳೆತ್ತಿದ ಪ್ರಧಾನಿ ಸಿಂಗ್

ಕೇಂದ್ರ ಸರಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದು, ಸಂಕಷ್ಟದಲ್ಲಿರುವ ದೇಶದ ಆರ್ಥಿಕ ಪರಿಸ್ಥಿತಿ, ಪ್ರಸ್ತುತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಚೇತರಿಕೆ ಕಾಣುವ ವಿಶ್ವಾಸವಿದೆ, ಹಣದುಬ್ಬರ ನಿಯಂತ್ರಣಕ್ಕೆ ಬರಲಿದೆ ಎಂದು ಅವರು ಹೇಳಿರುವುದು ವಿರೋಧ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ಸನ್ನು ಮತ್ತಷ್ಟು ಕೆರಳಿಸುವ ಸಾಧ್ಯತೆಯಿದೆ.
12ನೇ ಪಂಚವಾರ್ಷಿಕ ಯೋಜನೆಯ ದಾಖಲಾತಿಯನ್ನು ಅನುಮತಿ ನೀಡಲು ಶನಿವಾರ ಕರೆಯಲಾಗಿದ್ದ ಯೋಜನಾ ಆಯೋಗದ ಸಭೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ, "ಡೀಸೆಲ್ ಬೆಲೆಯನ್ನು ಏರಿಸಿ ಕೇಂದ್ರ ಸರಕಾರ ದೇಶದ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ" ಎಂದರು.
ಭಾರತ ಇಂಧನ ಕೊರತೆ ಎದುರಿಸುತ್ತಿರುವುದನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ ಮನಮೋಹನ ಸಿಂಗ್ ಅವರು, ದೇಶದ ಇಂಧನ ನೀತಿಯನ್ನು ಮರುಪರಿಶೀಲಿಸುವ ಅಗತ್ಯವಿದೆ. ನಾವು ಇಂಧನ ಕೊರತೆ ಎದುರಿಸುತ್ತಿದ್ದೇವೆ, ಆಮದು ಅವಲಂಬನೆ ಹೆಚ್ಚಾಗುತ್ತಿದೆ. ಇಂಧನ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಮಿತವ್ಯಯವಾಗಿ ಬಳಸುವ ನಿಟ್ಟಿನಲ್ಲಿ ನಾವು ಚಿಂತಿಸಬೇಕಿದೆ ಎಂದು ನುಡಿದರು.
ಸೆಪ್ಟೆಂಬರ್ 13ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಡೀಸೆಲ್ ಬೆಲೆಯನ್ನು ಲೀಟರಿಗೆ 5 ರು.ನಷ್ಟು ಸರಕಾರ ಏರಿಸಿದೆ. ಗೃಹ ಅಡುಗೆ ಅನಿಲ ಸಿಲಿಂಡರ್ ಬಳಕೆಯನ್ನು ಕೂಡ ವರ್ಷಕ್ಕೆ 6ಕ್ಕೆ ಮಿತಿಗೊಳಿಸಿದೆ. ಪೆಟ್ರೋಲ್ ಬೆಲೆ ಏರಿಕೆಗೆ ಕೂಡ ಸಮ್ಮತಿ ನೀಡುವ ಲಕ್ಷಣಗಳಿವೆ. ಈ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ ಅನಿರ್ದಿಷ್ಟ ಕಾಲ ಮುಷ್ಕರ ಹೂಡುವುದಾಗಿ ಕರ್ನಾಟಕದ ಲಾರಿ ಮಾಲಿಕರ ಸಂಘ ಬೆದರಿಕೆಯೊಡ್ಡಿದೆ.
ಪ್ರವೇಶ ತೆರಿಗೆ ಕರ್ನಾಟಕದಲ್ಲಿ ಅಧಿಕವಿರುವುದರಿಂದ ಬೆಲೆ ಏರಿಕೆಯ ಪ್ರಮಾಣವೂ ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಅಧಿಕವಾಗಿದೆ. ಪ್ರಸ್ತುತ, ಬೆಂಗಳೂರಿನಲ್ಲಿ ಡೀಸೆಲ್ ಬೆಲೆ 6.13 ರು.ನಷ್ಟು ಏರಿಕೆಯಾಗಿದ್ದು, ಲೀಟರಿಗೆ 51.24 ರು. ಬೆಲೆಗೆ ಮಾರಾಟವಾಗುತ್ತಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications