ಬಳ್ಳಾರಿ ಮರುಎಣಿಕೆ: ಜೋಳದರಾಶಿ ಶಾಂತಾಗೆ ಜಯ
ಬಳ್ಳಾರಿ, ಸೆ. 15: ಬಳ್ಳಾರಿ ನಗರ ಸಂಸದೀಯ ಕ್ಷೇತ್ರಕ್ಕೆ ನಡೆದಿದ್ದ ಮತದಾನದ ಮರುಎಣಿಕೆಯಲ್ಲಿ ಬಿಜೆಪಿಯ ಜೋಳದರಾಶಿ ಶಾಂತಾ ಭರ್ಜರಿ ಜಯ ದಾಖಲಿಸಿದ್ದಾರೆ. ಆದರೆ ಫಲಿತಾಂಶವಿನ್ನೂ ಅಧಿಕೃತವಾಗಿ ಹೈಕೋರ್ಟಿನಲ್ಲಿ ಘೋಷಣೆಯಾಗಬೇಕಿದೆ.

ಈ ಹಿನ್ನೆಲೆಯಲ್ಲಿ ಮಾತನಾಡಿರುವ ಶಾಂತಾ ಅವರು 'ನನ್ನ ವಿರುದ್ಧ ವೃಥಾ ಆರೋಪ ಮಾಡಿದ್ದರು. ಆದರೆ ಸತ್ಯವೆಂಬುದು ಎಂದೆಂದಿಗೂ ಒಂದೇ. ಅದನ್ನು ಬದಲಾಯಿಸಲು ಯಾರಿದಂಲೂ ಆಗದು' ಎಂದು ವಿಜಯದ ನಗೆ ಬೀರಿದ್ದಾರೆ.
'ರೆಡ್ಡಿ ರಿಪಬ್ಲಿಕ್ ಆಫ್ ಬಳ್ಳಾರಿ' ಎಂದು ಅವಮಾನಿಸಿದ್ದರು. ಆದರೆ ಅದು ಸತ್ಯಕ್ಕೆ ದೂರ ಎಂದು 'ಪಬ್ಲಿಕ್ ಆಫ್ ಬಳ್ಳಾರಿ' ಮತ್ತೊಮ್ಮೆ ಘಂಟಾಘೋಷವಾಗಿ ಹೇಳಿದ್ದಾರೆ ಎಂದು ಶಾಂತಾ ಸಂತಸ ವ್ಯಕ್ತಪಡಿಸಿದ್ದಾರೆ. ಶಾಂತಾ ತಮ್ಮ ಆಯ್ಕೆಯನ್ನು ಖಚಿತಪಡಿಸುತ್ತಿದ್ದಂತೆ ಬಳ್ಳಾರಿಯಾದ್ಯಂತ ಅವರ ಅಭಿಮಾನಿಗಳು ಮತ್ತು ಬಿಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ.
ಮರು ಮತ ಎಣಿಕೆ ಫಲಿತಾಂಶ ಹೀಗಿದೆ:
ಶಾಂತಾ: 4,02,213 ಮತಗಳು
ಹನುಮಂತಪ್ಪ: 3,99,970 ಮತಗಳು
ಹತಾಶ ಹನುಮಂತಪ್ಪ: ಶಾಂತಾ ಅವರೆದುರು ಕಾಂಗ್ರೆಸ್ಸಿನ ಎನ್.ವೈ. ಹನುಮಂತಪ್ಪ ಪರಾಭವಗೊಂಡಿದ್ದಾರೆ. ಇದನ್ನು ಖುದ್ದು ಹನುಮಂತಪ್ಪ ಖಚಿತಪಡಿಸಿದ್ದು, ಮತ ಎಣಿಕೆ ಕೇಂದ್ರದಿಂದ ಹತಾಶರಾಗಿ ಹೊರನಡೆದಿದ್ದಾರೆ. ಇದರೊಂದಿಗೆ ಬಿಜೆಪಿಯ ಜೆ. ಶಾಂತಾ ಅವರು ಸಂಸದೆಯಾಗಿ ಮುಂದುವರಿಯುವುದು ಖಾತ್ರಿಯಾಗಿದೆ.
ಮೂಲಗಳ ಪ್ರಕಾರ ಎಣಿಕೆ ಕಾರ್ಯ ಎಲ್ಲವೂ ಮುಗಿದಿದ್ದು, ಚುನಾವಣಾಧಿಕಾರಿ ಫಲಿತಾಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹೈಕೋರ್ಟಿನಿಂದ ಅಂತಿಮ ಅನುಮೋದನೆ ಪಡೆದು ಅಧಿಕೃತವಾಗಿ ಫಲಿತಾಂಶ ಘೋಷಣೆ ಮಾಡುವುದಷ್ಟೇ ಬಾಕಿಯಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications