ಗೃಹ ಸಚಿವ ಶಿಂಧೆ ಆಣಿಮುತ್ತಿಗೆ ಬೆಚ್ಚಿದ ಬಿಜೆಪಿ

ಪುಣೆ, ಸೆ.16: ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಆಣಿಮುತ್ತಿಗಳನ್ನು ಕೇಳಿಸಿಕೊಂಡ ವಿಪಕ್ಷ ಬಿಜೆಪಿ ಕ್ಷಣಕಾಲ ಬೆಚ್ಚಿ ನಂತರ ಸಿಡಿದೆದ್ದಿದೆ.
'ಜನರಿಗೆ ನೆನಪಿನ ಶಕ್ತಿ ತೀರಾ ಕಡಿಮೆ. ಈ ಹಿಂದೆ ಬೋಫೋರ್ಸ್ ಹಗರಣವನ್ನು ಮರೆತಂತೆ ಈಗ ಕಲ್ಲಿದ್ದಲು ಹಗರಣವನ್ನು ಮರೆತುಬಿಡುತ್ತಾರೆ' ಎಂದು ಬೇಜವ್ದಾರಿ ಹೇಳಿಕೆ ನೀಡಿರುವ ಶಿಂಧೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಬೋಫೋರ್ಸ್ ಹಗರಣ ಬೆಳಕಿಗೆ ಬಂದಾಗ ದೇಶದಲ್ಲಿ ಅಲ್ಲೋಲ-ಕಲ್ಲೋಲವಾಗುತ್ತದೆ. ದೊಡ್ಡ ದೊಡ್ಡ ತಲೆಗಳು ಉದುರಿ ಬೀಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಜನರ ಮನಸ್ಸಿನಿಂದ ಕಾಲಕ್ರಮೇಣ ಮಾಸಿ ಹೋಗಿದೆ.
ಈಗ ಅದೇ ರೀತಿ ಕಲ್ಲಿದ್ದಲು ಹಗರಣ ಕೂಡಾ ಜನರ ನೆನಪಿಗೆ ಬರುವುದಿಲ್ಲ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಚಿವ ಶಿಂಧೆ ಹೇಳಿದ್ದಾರೆ.
ಒಂದು ಕೈನಿಂದ ಕಲ್ಲಿದ್ದಲು ತೊಳೆದುಕೊಂಡರೆ ಇನ್ನೊಂದು ಕೈ ತನ್ನಿಂದ ತಾನೇ ಶುದ್ಧವಾಗುತ್ತೆ ಅಲ್ವಾ ಎಂದು ಮಾರ್ಮಿಕವಾಗಿ ನುಡಿದಿರುವ ಶಿಂಧೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಗೃಹ ಸಚಿವ ಶಿಂಧೆ ಅವರು ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ತೆಗೆದುಕೊಂಡು ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಅದರೆ, ಇನ್ನೂ ತಮ್ಮ ಮಾತು ಮುಂದುವರೆಸಿದ ಶಿಂಧೆ, ಬಿಜೆಪಿ ನೇತೃತ್ವದ ಎನ್ ಡಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದ ಪೆಟ್ರೋಲ್ ಬಂಕ್ ಹಗರಣ ಈಗ ಏನಾಗಿದೆ ಎಂದು ಶಿಂಧೆ ಪ್ರಶ್ನಿಸಿದ್ದಾರೆ.
ಕಲ್ಲಿದ್ದಲು ಹಗರಣ, ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರೀಟೈಲ್ ಕ್ಷೇತ್ರದಲ್ಲಿ ಎಫ್ ಡಿಐ, ಯುಪಿಎ ಆರ್ಥಿಕ ನೀತಿ ದೇಶಕ್ಕೆ ಪೂರಕವಾಗಿದೆ ಎಂದು ಶಿಂಧೆ ಸಮರ್ಥಿಸಿಕೊಂಡರು.
ಮಧ್ಯಂತರ ಚುನಾವಣೆ ಹಾಗೂ ಮನಮೋಹನ್ ಸಿಂಗ್ ಸಚಿವ ಸಂಪುಟ ವಿಸ್ತರಣೆ, ರಾಹುಲ್ ಗಾಂಧಿ ಸಂಪುಟ ಪ್ರವೇಶದ ಬಗ್ಗೆ ಶಿಂಧೆ ಯಾವುದೇ ಉತ್ತರ ನೀಡದೆ ನುಣಚಿಕೊಂಡರು.ಸಿಎಜಿ ವರದಿಯಂತೆ ಕಲ್ಲಿದ್ದಲು ಹಗರಣದ ಮೊತ್ತ 185,591 ಕೋಟಿ ರು ದಾಟುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications