ಗೃಹ ಸಚಿವ ಶಿಂಧೆ ಆಣಿಮುತ್ತಿಗೆ ಬೆಚ್ಚಿದ ಬಿಜೆಪಿ

ಪುಣೆ, ಸೆ.16: ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಆಣಿಮುತ್ತಿಗಳನ್ನು ಕೇಳಿಸಿಕೊಂಡ ವಿಪಕ್ಷ ಬಿಜೆಪಿ ಕ್ಷಣಕಾಲ ಬೆಚ್ಚಿ ನಂತರ ಸಿಡಿದೆದ್ದಿದೆ.
'ಜನರಿಗೆ ನೆನಪಿನ ಶಕ್ತಿ ತೀರಾ ಕಡಿಮೆ. ಈ ಹಿಂದೆ ಬೋಫೋರ್ಸ್ ಹಗರಣವನ್ನು ಮರೆತಂತೆ ಈಗ ಕಲ್ಲಿದ್ದಲು ಹಗರಣವನ್ನು ಮರೆತುಬಿಡುತ್ತಾರೆ' ಎಂದು ಬೇಜವ್ದಾರಿ ಹೇಳಿಕೆ ನೀಡಿರುವ ಶಿಂಧೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಬೋಫೋರ್ಸ್ ಹಗರಣ ಬೆಳಕಿಗೆ ಬಂದಾಗ ದೇಶದಲ್ಲಿ ಅಲ್ಲೋಲ-ಕಲ್ಲೋಲವಾಗುತ್ತದೆ. ದೊಡ್ಡ ದೊಡ್ಡ ತಲೆಗಳು ಉದುರಿ ಬೀಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಜನರ ಮನಸ್ಸಿನಿಂದ ಕಾಲಕ್ರಮೇಣ ಮಾಸಿ ಹೋಗಿದೆ.
ಈಗ ಅದೇ ರೀತಿ ಕಲ್ಲಿದ್ದಲು ಹಗರಣ ಕೂಡಾ ಜನರ ನೆನಪಿಗೆ ಬರುವುದಿಲ್ಲ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಚಿವ ಶಿಂಧೆ ಹೇಳಿದ್ದಾರೆ.
ಒಂದು ಕೈನಿಂದ ಕಲ್ಲಿದ್ದಲು ತೊಳೆದುಕೊಂಡರೆ ಇನ್ನೊಂದು ಕೈ ತನ್ನಿಂದ ತಾನೇ ಶುದ್ಧವಾಗುತ್ತೆ ಅಲ್ವಾ ಎಂದು ಮಾರ್ಮಿಕವಾಗಿ ನುಡಿದಿರುವ ಶಿಂಧೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಗೃಹ ಸಚಿವ ಶಿಂಧೆ ಅವರು ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ತೆಗೆದುಕೊಂಡು ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಅದರೆ, ಇನ್ನೂ ತಮ್ಮ ಮಾತು ಮುಂದುವರೆಸಿದ ಶಿಂಧೆ, ಬಿಜೆಪಿ ನೇತೃತ್ವದ ಎನ್ ಡಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದ ಪೆಟ್ರೋಲ್ ಬಂಕ್ ಹಗರಣ ಈಗ ಏನಾಗಿದೆ ಎಂದು ಶಿಂಧೆ ಪ್ರಶ್ನಿಸಿದ್ದಾರೆ.
ಕಲ್ಲಿದ್ದಲು ಹಗರಣ, ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರೀಟೈಲ್ ಕ್ಷೇತ್ರದಲ್ಲಿ ಎಫ್ ಡಿಐ, ಯುಪಿಎ ಆರ್ಥಿಕ ನೀತಿ ದೇಶಕ್ಕೆ ಪೂರಕವಾಗಿದೆ ಎಂದು ಶಿಂಧೆ ಸಮರ್ಥಿಸಿಕೊಂಡರು.
ಮಧ್ಯಂತರ ಚುನಾವಣೆ ಹಾಗೂ ಮನಮೋಹನ್ ಸಿಂಗ್ ಸಚಿವ ಸಂಪುಟ ವಿಸ್ತರಣೆ, ರಾಹುಲ್ ಗಾಂಧಿ ಸಂಪುಟ ಪ್ರವೇಶದ ಬಗ್ಗೆ ಶಿಂಧೆ ಯಾವುದೇ ಉತ್ತರ ನೀಡದೆ ನುಣಚಿಕೊಂಡರು.ಸಿಎಜಿ ವರದಿಯಂತೆ ಕಲ್ಲಿದ್ದಲು ಹಗರಣದ ಮೊತ್ತ 185,591 ಕೋಟಿ ರು ದಾಟುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications