ಹಿರಿಯ ಪೋಲೀಸ್ ಅಧಿಕಾರಿಗಳು ಜೆಡಿಎಸ್ ತೆಕ್ಕೆಗೆ

ಹಿರಿಯ ಮೂವರು ನಿವೃತ್ತ ಪೋಲೀಸ್ ಅಧಿಕಾರಿಗಳು ಜೆಡಿಎಸ್ ಪಕ್ಷವನ್ನು ಸೇರಲಿದ್ದಾರೆ. ಕ್ರಿಮಿನಲ್ ಗಳಿಗೆ ಸಿಂಹಸ್ವಪ್ನ ಮತ್ತು ದಕ್ಷ ಪೋಲೀಸ್ ಅಧಿಕಾರಿಗಳಾದ ಅಶೋಕ್ ಕುಮಾರ್, ಸುಭಾಶ್ ಭರಣಿ ಮತ್ತು ಸೌದಾಗರ್ ಈ ಮೂವರು ಪೋಲೀಸ್ ಅಧಿಕಾರಿಗಳು ಜೆಡಿಎಸ್ ಸೇರಲಿದ್ದಾರೆ.
ಶನಿವಾರ (ಸೆ 15) ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬರುವ ಭಾನುವಾರ (ಸೆ 23) ನಗರದ ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ನಿವೃತ್ತ ಪೋಲೀಸ್ ಅಧಿಕಾರಿಗಳು ನಮ್ಮ ಪಕ್ಷ ಸೇರಲಿದ್ದಾರೆ ಎಂದು ಸ್ಪಷ್ಟ ಪಡಿಸಿದ್ದಾರೆ.
ನಮ್ಮ ಪಕ್ಷ ತೊರೆದು ಯಾರೂ ಬೇರೆ ಪಕ್ಷಕ್ಕೆ ಸೇರುತ್ತಿಲ್ಲ. ಇದರ ಬಗ್ಗೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುತ್ತಿದ್ದೇನೆ. ನಮ್ಮ ಪಕ್ಷದ ಸಮಾವೇಶದಲ್ಲಿ ಅವರೆಲ್ಲರೂ ಭಾಗವಹಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಮಾಡಿರುವ ಕೆಲಸಗಳೆಲ್ಲಾ ನಮಗೆ ತಿಳಿದಿದೆ. ಅವರಿಂದ ನಮ್ಮ ಪಕ್ಷ ಕಲಿಯಬೇಕಾಗಿರುವುದು ಏನೂ ಇಲ್ಲ. ಮಹಿಳೆಗೆ ಮರ್ಯಾದೆ ಕೊಡುವುದನ್ನು ಆಯನೂರು ಕಲಿಯಲಿ.
ರಾಜ್ಯದ ಜನರ ಹಿತದೃಷ್ಟಿ ನಮಗೆ ಮುಖ್ಯ. ಅಧಿಕಾರಕ್ಕಾಗಿ ಹೊಗಳು ಭಟ್ಟರ ಕೆಲಸ ಮಾಡುವ ಜಾಯಮಾನ ನಮ್ಮದಲ್ಲ. ಅಧಿಕಾರಕ್ಕಾಗಿ ಆಯನೂರು ಏನು ಮಾಡಿದರು ಎನ್ನುವುದು ನಮಗೆ ತಿಳಿದಿದೆ ಸುಮ್ಮನೆ ನಮ್ಮನ್ನು ಕೆಣಕದಿರಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಬಿಜೆಪಿ ರಾಜ್ಯ ಸಭಾ ಸದಸ್ಯ ಆಯನೂರು ಮಂಜುನಾಥ್ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪಾದಧೂಳಿಗೂ ಸಮರಲ್ಲ ಎಂದು ಜೆಡಿಸ್ ಯುವ ಘಟಕ ಅಧ್ಯಕ್ಷ ಮಧು ಬಂಗಾರಪ್ಪ ಕಿಡಿಕಾರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications