ವಿದೇಶ ಪ್ರವಾಸಕ್ಕೆ ಹೋಗಿದ್ದು ಯಾವುದೇ ಅನಾಚಾರಕ್ಕಲ್ಲ

ನಾವು ಸಾರ್ವಜನಿಕ ಜೀವನದಲ್ಲಿ ಬದುಕುತ್ತಿರುವವರು. ಹಾಗಾಗಿ ಸಾರ್ವಜನಿಕರ ಹಣ ಉಪಯೋಗಿಸಿಕೊಳ್ಳಲು ನಮಗೆ ಅಧಿಕಾರವಿದೆ. ನಾನು ಪ್ರವಾಸಕ್ಕೆ ಹೊರಟಾಗ ನನ್ನ ಕ್ಷೇತ್ರದಲ್ಲಿ ಬರಗಾಲವಿರಲಿಲ್ಲ. ಈಗಲೂ ಅಲ್ಲಿ ಅಂತ ಬರಗಾಲವೇನೂ ಇಲ್ಲ ಎಂದು ಪಾಟೀಲ್ ಹೇಳಿದ್ದಾರೆ.
ನಮ್ಮ ಪ್ರವಾಸಕ್ಕೆ ಮೂರು ತಿಂಗಳ ಕೆಳಗೆ ಸಿದ್ದತೆ ನಡೆಸಲಾಗಿತ್ತು. ಪ್ರವಾಸ ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಾಸ್ ಬಂದಿದ್ದರೆ ಹಣ ವಾಪಾಸ್ ಬರುತ್ತಿರಲಿಲ್ಲ. ಪ್ರವಾಸದ ಮಧ್ಯೆ ವಾಪಾಸ್ ಬರಲು ಸಿಎಂ ನೀಡಿದ ಆದೇಶದ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ ಎಂದು ಪಾಟೀಲ್ ಟಿವಿ9 ಚಕ್ರವ್ಯೂಹ (ಭಾನುವಾರ ಸೆ 16) ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.
ನಮ್ಮ ವಿದೇಶ ಪ್ರವಾಸದ ಬಗ್ಗೆ ಯಡಿಯೂರಪ್ಪ ಅವರಿಗೆ ಮಾತನಾಡುವ ನೈತಿಕತೆಯಿಲ್ಲ. ನಮ್ಮ ಕ್ಷೇತ್ರದ ಪಕ್ಕದ ಊರಿನಲ್ಲಿ ಐವತ್ತು ಲಕ್ಷ ರೂಪಾಯಿ ಖರ್ಚು ಮಾಡಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಆ ಕಾರ್ಯಕ್ರಮದ ಉದ್ದಕ್ಕೂ ನನ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನು ಬಿ ಸಿ ಪಾಟೀಲ್ ಇದ್ದೀನಿ. ಇಂಥವರನ್ನು ನಾನು ನನ್ನ ರಾಜಕೀಯ ವೃತ್ತಿ ಜೀವನದಲ್ಲಿ ಕ್ಯಾರೇ ಮಾಡೋಲ್ಲ. ಆ ಸಮಾರಂಭದಲ್ಲಿ ಹಾರ ಹಾಕಲು ಬಂದ ಪಕ್ಷದ ಕಾರ್ಯಕರ್ತನೊಬ್ಬನಿಗೆ ಯಡಿಯೂರಪ್ಪ ಕಪಾಳಮೋಕ್ಷ ಮಾಡಿ ಕಳುಹಿಸಿದ್ದಾರೆ. ಇವರೆಂಥಾ ಜನನಾಯಕರು ಎಂದು ಪಾಟೇಲ್ ಕಿಡಿಕಾರಿದ್ದಾರೆ.
ಮೂರುವರೆ ವರ್ಷ ಮುಖ್ಯಮಂತ್ರಿಯಾದರು, ಈಗ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿ ಬೇರೆ ರೀತಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಕ್ಷೇತ್ರ ಅಭಿವೃದ್ದಿಗೆ ಹಣ ಬಿಡುಗಡೆ ಮಾಡಲು ಮಲತಾಯಿ ಧೋರಣೆ ಅನುಸರಿಸುತ್ತಿರುವವರು ಯಡಿಯೂರಪ್ಪನವರು. ನನ್ನ ಬಗ್ಗೆ ಮಾತನಾಡದೆ ಅವರು ಸುಮ್ಮನಿದ್ದರೆ ಒಳಿತು ಎಂದು ಪಾಟೇಲ್ ಎಚ್ಚರಿಸಿದ್ದಾರೆ.
ನಮ್ಮ ಪಕ್ಷದ ಅಧ್ಯಕ್ಷರಾದ ಪರಮೇಶ್ವರ್ ಒಳ್ಳೆಯವರು. ಆದರೆ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕೆನ್ನುವ ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಇನ್ನೆರಡು ದಿನದೊಳಗಾಗಿ ನಾವು ದೆಹಲಿ ಪ್ರವಾಸ ಕೈಗೊಂಡು ಹೈಕಮಾಂಡ್ ಅವರಿಗೆ ಮತ್ತೆ ಮನವಿ ಸಲ್ಲಿಸಲಿದ್ದೇವೆ ಎಂದು ಬಿ ಸಿ ಪಾಟೀಲ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕಾರ್ಯಕ್ರಮದ ಬಹುಪಾಲನ್ನು ಯಡಿಯೂರಪ್ಪ ಅವರನ್ನು ತರಾಟೆ ತೆಗೆದುಕೊಳ್ಳಲು ಮೀಸಲಿಟ್ಟ ಪಾಟೀಲರು ವಿದೇಶ ಪ್ರವಾಸದಲ್ಲಿ ಅದೇನು ಅಧ್ಯಯನ ನಡೆಸಿದರೆಂದು ಹೇಳದೆ ಇದ್ದದ್ದು ದುರಂತ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications