ವಿದೇಶ ಪ್ರವಾಸಕ್ಕೆ ಹೋಗಿದ್ದು ಯಾವುದೇ ಅನಾಚಾರಕ್ಕಲ್ಲ

ನಾವು ಸಾರ್ವಜನಿಕ ಜೀವನದಲ್ಲಿ ಬದುಕುತ್ತಿರುವವರು. ಹಾಗಾಗಿ ಸಾರ್ವಜನಿಕರ ಹಣ ಉಪಯೋಗಿಸಿಕೊಳ್ಳಲು ನಮಗೆ ಅಧಿಕಾರವಿದೆ. ನಾನು ಪ್ರವಾಸಕ್ಕೆ ಹೊರಟಾಗ ನನ್ನ ಕ್ಷೇತ್ರದಲ್ಲಿ ಬರಗಾಲವಿರಲಿಲ್ಲ. ಈಗಲೂ ಅಲ್ಲಿ ಅಂತ ಬರಗಾಲವೇನೂ ಇಲ್ಲ ಎಂದು ಪಾಟೀಲ್ ಹೇಳಿದ್ದಾರೆ.
ನಮ್ಮ ಪ್ರವಾಸಕ್ಕೆ ಮೂರು ತಿಂಗಳ ಕೆಳಗೆ ಸಿದ್ದತೆ ನಡೆಸಲಾಗಿತ್ತು. ಪ್ರವಾಸ ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಾಸ್ ಬಂದಿದ್ದರೆ ಹಣ ವಾಪಾಸ್ ಬರುತ್ತಿರಲಿಲ್ಲ. ಪ್ರವಾಸದ ಮಧ್ಯೆ ವಾಪಾಸ್ ಬರಲು ಸಿಎಂ ನೀಡಿದ ಆದೇಶದ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ ಎಂದು ಪಾಟೀಲ್ ಟಿವಿ9 ಚಕ್ರವ್ಯೂಹ (ಭಾನುವಾರ ಸೆ 16) ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.
ನಮ್ಮ ವಿದೇಶ ಪ್ರವಾಸದ ಬಗ್ಗೆ ಯಡಿಯೂರಪ್ಪ ಅವರಿಗೆ ಮಾತನಾಡುವ ನೈತಿಕತೆಯಿಲ್ಲ. ನಮ್ಮ ಕ್ಷೇತ್ರದ ಪಕ್ಕದ ಊರಿನಲ್ಲಿ ಐವತ್ತು ಲಕ್ಷ ರೂಪಾಯಿ ಖರ್ಚು ಮಾಡಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಆ ಕಾರ್ಯಕ್ರಮದ ಉದ್ದಕ್ಕೂ ನನ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನು ಬಿ ಸಿ ಪಾಟೀಲ್ ಇದ್ದೀನಿ. ಇಂಥವರನ್ನು ನಾನು ನನ್ನ ರಾಜಕೀಯ ವೃತ್ತಿ ಜೀವನದಲ್ಲಿ ಕ್ಯಾರೇ ಮಾಡೋಲ್ಲ. ಆ ಸಮಾರಂಭದಲ್ಲಿ ಹಾರ ಹಾಕಲು ಬಂದ ಪಕ್ಷದ ಕಾರ್ಯಕರ್ತನೊಬ್ಬನಿಗೆ ಯಡಿಯೂರಪ್ಪ ಕಪಾಳಮೋಕ್ಷ ಮಾಡಿ ಕಳುಹಿಸಿದ್ದಾರೆ. ಇವರೆಂಥಾ ಜನನಾಯಕರು ಎಂದು ಪಾಟೇಲ್ ಕಿಡಿಕಾರಿದ್ದಾರೆ.
ಮೂರುವರೆ ವರ್ಷ ಮುಖ್ಯಮಂತ್ರಿಯಾದರು, ಈಗ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿ ಬೇರೆ ರೀತಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಕ್ಷೇತ್ರ ಅಭಿವೃದ್ದಿಗೆ ಹಣ ಬಿಡುಗಡೆ ಮಾಡಲು ಮಲತಾಯಿ ಧೋರಣೆ ಅನುಸರಿಸುತ್ತಿರುವವರು ಯಡಿಯೂರಪ್ಪನವರು. ನನ್ನ ಬಗ್ಗೆ ಮಾತನಾಡದೆ ಅವರು ಸುಮ್ಮನಿದ್ದರೆ ಒಳಿತು ಎಂದು ಪಾಟೇಲ್ ಎಚ್ಚರಿಸಿದ್ದಾರೆ.
ನಮ್ಮ ಪಕ್ಷದ ಅಧ್ಯಕ್ಷರಾದ ಪರಮೇಶ್ವರ್ ಒಳ್ಳೆಯವರು. ಆದರೆ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕೆನ್ನುವ ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಇನ್ನೆರಡು ದಿನದೊಳಗಾಗಿ ನಾವು ದೆಹಲಿ ಪ್ರವಾಸ ಕೈಗೊಂಡು ಹೈಕಮಾಂಡ್ ಅವರಿಗೆ ಮತ್ತೆ ಮನವಿ ಸಲ್ಲಿಸಲಿದ್ದೇವೆ ಎಂದು ಬಿ ಸಿ ಪಾಟೀಲ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕಾರ್ಯಕ್ರಮದ ಬಹುಪಾಲನ್ನು ಯಡಿಯೂರಪ್ಪ ಅವರನ್ನು ತರಾಟೆ ತೆಗೆದುಕೊಳ್ಳಲು ಮೀಸಲಿಟ್ಟ ಪಾಟೀಲರು ವಿದೇಶ ಪ್ರವಾಸದಲ್ಲಿ ಅದೇನು ಅಧ್ಯಯನ ನಡೆಸಿದರೆಂದು ಹೇಳದೆ ಇದ್ದದ್ದು ದುರಂತ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications