ಸೋನಿಯಾ ಕೈ ಹಿಡಿಯಲು ಮಾಯಾವತಿ ಸಿದ್ಧ?

545 ಸದಸ್ಯರ ಲೋಕಸಭೆಯಲ್ಲಿ ಬಹುಮತಕ್ಕೆ 272 ಮತಗಳು ಬೇಕಾಗುತ್ತದೆ. ಯುಪಿಎಗೆ ಇನ್ನೂ 21 ಸದಸ್ಯರ ಬೆಂಬಲ ಬೇಕಿದೆ.
ಸಮಾಜವಾದಿ ಪಕ್ಷ (22) ಅಥವಾ ಬಹುಜನ ಸಮಾಜವಾದಿ ಪಕ್ಷ (21) ಹಾಗೂ ಇನ್ನಿತರರ ಬಾಹ್ಯ ಬೆಂಬಲದಿಂದ ಯುಪಿಎ ಅಗತ್ಯ ಮತ ಪಡೆದು ರಾಜ್ಯಭಾರ ಮುಂದುವರೆಸುವ ನಿರೀಕ್ಷೆ ಹೆಚ್ಚಾಗಿದೆ.
ಈ ಪೈಕಿ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಅವರು ಗುರುವಾರ(ಸೆ.20) ಯುಪಿಎ ಆರ್ಥಿಕ ನೀತಿ, ಚಿಲ್ಲರೆ ಮಾರುಕಟ್ಟೆಯಲ್ಲಿ ಎಫ್ ಡಿಐ, ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಸಿಲಿಂಡರ್ ಮಿತಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಆದರೆ, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಿಲೆಂಡರ್ ಮಿತಿ 9 ರಿಂದ 12ಕ್ಕೆ ಏರಿಸಲು ಯುಪಿಎ ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಸೋನಿಯಾ ಗಾಂಧಿ ಆವರು ಓಕೆ ಎಂದಿದ್ದಾರೆ ಎಂಬ ಸುದ್ದಿಯಿದೆ.
ಮಮತಾ ಅವರ ಸಹಾಯ ಹಸ್ತ ಭದ್ರ ಪಡಿಸಿಕೊಳ್ಳುವ ಸಂಧಾನ ಪ್ರಕ್ರಿಯೆ ನಡುವೇ ಮಯಾವತಿ ಜೊತೆ ಕೂಡಾ ಡೀಲ್ ಕುದುರಿಸುವ ಕಾರ್ಯ ಶುರುವಾಗಿದೆ.
ಮಧ್ಯಂತರ ಚುನಾವಣೆ ನಮಗೆ ಬೇಡವೇ ಬೇಡ ಎಂದಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು, ಯುಪಿಎ ಆಫರ್ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಅಲ್ಲದೆ, ಬಿಜೆಪಿ ನೇತೃತ್ವದ ಎನ್ ಡಿಎ, ಜೆಡಿಯು, ಎಡಪಕ್ಷಗಳು ಗುರುವಾರ ನಡೆಸಿರುವ ಭಾರತ್ ಬಂದ್ ಗೆ ಬಿಎಸ್ಪಿ ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಯುಪಿಎಗೆ ಬಿಎಸ್ ಪಿ ಬಾಹ್ಯ ಬೆಂಬಲ ನೀಡಿ ಸರ್ಕಾರದ ಆಯಸ್ಸು ಹೆಚ್ಚಿಸಲಿದೆ.
ಯುಪಿಎಗೆ ಬೆಂಬಲ ನೀಡುವ ಬಗ್ಗೆ ಅಕ್ಟೋಬರ್ 7 ರಂದು ಪಕ್ಷದ ಕಾರ್ಯಕರ್ತರ ನಡುವೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಬಹುಜನ ಸಮಾಜಪಕ್ಷದ ವಕ್ತಾರರು ಹೇಳಿದ್ದಾರೆ.
ಡೀಸೆಲ್ ಬೆಲೆ ಏರಿಕೆ, ಎಲ್ಪಿಜಿ ಸಬ್ಸಿಡಿ ಕಡಿತ, ಬಹು ಬ್ರ್ಯಾಂಡ್ ರೀಟೈಲ್ ಮಾರುಕಟ್ಟೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಬಗ್ಗೆ ಯುಪಿಎ ತಳೆದಿರುವ ನೀತಿಯನ್ನು ಪುನರ್ ಪರಿಶೀಲಿಸುವಂತೆ ಯುಪಿಎ ಸರ್ಕಾರಕ್ಕೆ ಮಮತಾ ಅವರು 72 ಗಂಟೆಗಳ ಡೆಡ್ ಲೈನ್ ನೀಡಿದ್ದರು.
ಮಮತಾ ನೀಡಿದ್ದ ಗುಡುವು ಮುಗಿದರೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದ ಕಾರಣ. ಮಂಗಳವಾರ ಮಮತಾ ತಮ್ಮ ಪಕ್ಷದ ಸದಸ್ಯರೊಡನೆ ಚರ್ಚಿಸಿ ಯುಪಿಎಗೆ ನೀಡಿರುವ ಬೆಂಬಲ ವಾಪಸ್ ಪಡೆಯುವ ಕಠಿಣ ನಿರ್ಧಾರ ಪ್ರಕಟಿಸಿದ್ದಾರೆ.
ಕೇಂದ್ರ ಸರ್ಕಾರದಲ್ಲಿ 6 ಜನ ಸಚಿವ(1 ಕ್ಯಾಬಿನೆಟ್ ದರ್ಜೆ, 5 ರಾಜ್ಯ ಸಚಿವರು)ರೂ ಸೇರಿದಂತೆ ಒಟ್ಟು 19 ಜನ ಸಂಸದರನ್ನು ಹೊಂದಿರುವ ಟಿಎಂಸಿ ಯುಪಿಎಯಿಂದ ಹೊರಬರುವ ನಿರ್ಧಾರ ಪ್ರಕಟಿಸಿರುವುದರಿಂದ ಕೇಂದ್ರ ಸರ್ಕಾರ ತೀವ್ರ ಇಕ್ಕಟ್ಟಿನಲ್ಲಿ ಸಿಲುಕಲಿದೆ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications