ರಾತ್ರಿ ರೈಲಿಗೆ ಗ್ರೀನ್ ಸಿಗ್ನಲ್:ಹೆಗ್ಡೆ ಶ್ರಮಕ್ಕೆ ಸಂದ ಜಯ

ಅಂತೂ ಇಂತೂ ಕರಾವಳಿ ಭಾಗದ ಜನರ ಕೂಗಿಗೆ ರೈಲ್ವೆ ಮಂಡಳಿ ಸ್ಪಂದಿಸಿದ್ದು, ಇದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಜಯಪ್ರಕಾಶ್ ಹೆಗ್ಡೆ ಅವರ ಅವಿರತ ಶ್ರಮಕ್ಕೆ ಸಂದ ಜಯ ಅಂದರೆ ತಪ್ಪಾಗಲಾರದು.
ಉಪಚುನಾವಣೆಯಲ್ಲಿ ಆಯ್ಕೆಯಾದ ನಂತರ ಪಟ್ಟು ಬಿಡದೆ ರೈಲ್ವೆ ಇಲಾಖೆ ಮೇಲೆ ನಿರಂತರ ಒತ್ತಡ ಹೇರಿ ಕಾರ್ಯ ಸಾಧಿಸುವಲ್ಲಿ ಜಯಪ್ರಕಾಶ್ ಹೆಗ್ಡೆ ಯಶಸ್ಸು ಸಾಧಿಸಿದ್ದಾರೆ.
ನೈಋತ್ಯ ರೈಲ್ವೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಹೆಗ್ಡೆ ಉಪಚುನಾವಣೆಯ ಸಮಯದಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಸುವಲ್ಲಿ ಸಫಲರಾಗಿದ್ದರೆ.
ಬೆಂಗಳೂರಿನಿಂದ ಮಂಗಳೂರಿಗೆ ಈಗಿರುವ 17 ಬೋಗಿ ರೈಲು ಸಂಚಾರವನ್ನು 24 ಬೋಗಿಗೆ ಏರಿಸಲು ರೈಲ್ವೆ ಇಲಾಖೆ ಒಪ್ಪಿದೆ. ಇದರಲ್ಲಿ ಮಂಗಳೂರಿನಿಂದ 12 ಬೋಗಿಗಳು ಉಡುಪಿ, ಕಾರವಾರದತ್ತ ಉಳಿದ ಬೋಗಿಗಳು ಕಣ್ಣೂರಿನತ್ತ ಸಂಚರಿಸಲಿವೆ.
ರೈಲ್ವೆ ಇಲಾಖೆಯು ಶಿರಾಡಿ ಘಾಟ್ ನಲ್ಲಿ ಇತ್ತೀಚಿಗೆ 24 ಬೋಗಿಗಳ ಪ್ರಾಯೋಗಿಕ ರೈಲು ಸಂಚಾರ ನಡೆಸಿತ್ತು. ರೈಲ್ವೆ ಸುರಕ್ಷತಾ ವಿಭಾಗ 24 ಬೋಗಿಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿ ಇಲಾಖೆಗೆ ತನ್ನ ವರದಿ ಸಲ್ಲಿಸಿದೆ.
2007ರಲ್ಲಿ ಆರಂಭಗೊಂಡಿದ್ದ ಬೆಂಗಳೂರು - ಮಂಗಳೂರು ರಾತ್ರಿ ರೈಲನ್ನು ಕೇರಳದ ಸಂಸದರ ಮತ್ತು ಕೇಂದ್ರ ಸಚಿವರ ಒತ್ತಡದ ಮೇರೆಗೆ ಕಾರವಾರದ ಬದಲು ಕಣ್ಣೂರಿಗೆ ವಿಸ್ತರಣೆ ಮಾಡಿತ್ತು.
ಇನ್ನು ಕೆಲವೇ ವಾರಗಳಲ್ಲಿ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮೂಲಕ ಕಾರವಾರಕ್ಕೆ ರಾತ್ರಿ ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಿಂದ ಮಂಗಳೂರು, ಉಡುಪಿ ಮೂಲಕ ಕಾರವಾರಕ್ಕೆ ಹೋಗುವ ಹಗಲು ರೈಲನ್ನು ರದ್ದು ಗೊಳಿಸಿ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಹೈಕೋರ್ಟ್ ಸೋಮವಾರ (ಸೆ 17) ರೈಲ್ವೆ ಇಲಾಖೆಗೆ ಆದೇಶಿಸಿತ್ತು.
ಈ ಭಾಗದ ಜನತೆಯ ಬಹುದಿನದ ಕನಸು ಸಾಕಾರಗೊಳ್ಳುವುದಕ್ಕೆ ಭಗೀರಥ ಪ್ರಯತ್ನ ನಡೆಸಿದ ಸಂಸದ ಜಯಪ್ರಕಾಶ್ ಹೆಗ್ಡೆ ಮತ್ತು ಜನತೆಯ ಕೂಗಿಗೆ ಸ್ಪಂದಿಸಿದ ರೈಲ್ವೆ ಇಲಾಖೆಗೆ ಕರಾವಳಿ ಜನ ಅಭಿನಂದನೆ ಸಲ್ಲಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications