ಕಾವೇರಿ: ಪ್ರಧಾನಿ ಸಿಂಗ್ ನಿಲುವಿಗೆ ದೇವೇಗೌಡ ಕಿಡಿಕಿಡಿ

ಶುಕ್ರವಾರ ಬೆಳಗ್ಗೆ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ವಸ್ತುಸ್ಥಿತಿ ಅರಿಯದೆ ಪ್ರಧಾನಿ ಸಿಂಗ್ ಇಂತಹ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ರಧಾನಿ ಮನಮೋಹನ್ ಸಿಂಗ್ ಪ್ರಕಟಿಸಿರುವ 'ರಾಜಕೀಯ ನಿರ್ಧಾರವನ್ನು' ಸರ್ವಥಾ ಒಪ್ಪಲಾಗದು ಎಂದು ದೇವೇಗೌಡ ಸ್ಪಷ್ಟ ನುಡಿಗಳಲ್ಲಿ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಮೂರು ಬೆಳೆ ಬೆಳೆಯಲಾಗುತ್ತದೆ. ಆದರೆ ಕರ್ನಾಟಕದಲ್ಲಿ ಎರಡು ಬೆಳೆ ಬೆಳೆಯಲಾಗುತ್ತದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಪರಿಸ್ಥಿತಿಯ ಅವಲೋಕನಕ್ಕೆ ಎರಡು ರಾಜ್ಯಗಳಿಗೂ ಸಮಿತಿಯನ್ನು ಕಳುಹಿಸಬೇಕಿತ್ತು.
ಈ ಬಗ್ಗೆ ಪ್ರಧಾನಿ ಸಿಂಗ್ ವಾಸ್ತವಾಂಶ ತಿಳಿಯಬೇಕಿತ್ತು. ಆದರೆ ದಿಲ್ಲಿಯಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ವಾಸ್ತವವನ್ನು ಪರಿಗಣಿಸಿಲ್ಲ. ವಾಸ್ತವ ತಿಳಿದಿದ್ದರೆ ಪ್ರಧಾನಿ ಈ ನಿರ್ಧಾರ ಪ್ರಕಟಿಸುತ್ತಿರಲಿಲ್ಲ ಎಂದು ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ ಅವಲೋಕಿಸಿದರೆ ಪ್ರಧಾನಿಯ ನಿರ್ಧಾರಕ್ಕೆ ಮಣೆಹಾಕಲು ಸಾಧ್ಯವಾಗದು. ಕಳೆದ 40 ವರ್ಷಗಳಲ್ಲಿ ಕರ್ನಾಟಕ ಇಂತಹ ಭೀಕರ ಬರವನ್ನು ಎದುರಿಸಿರಲಿಲ್ಲ. 155 ತಾಲೂಕುಗಳು ಭೀಕರ ಬರದಿಂದ ತತ್ತರಿಸಿವೆ. ಬೆಂಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಅಂತಹುದರಲ್ಲಿ ಪ್ರಧಾನಿಯ ನ್ಯಾಯಸಮ್ಮತವಲ್ಲದ ನಿರ್ದೇಶನವನ್ನು ಪರಿಗಣಿಸುವುದಾದರೂ ಹೇಗೆ? ಎಂದು ಅವರು ಕಿಡಿಕಾರಿದರು.
ಎಲ್ಲ ಕನ್ನಡ ಪರ ಸಂಘಟನೆಗಳು ಚಳವಳಿಗೆ ಕೈಜೋಡಿಸಬೇಕು:
ಈ ಮಧ್ಯೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣ ಗೌಡರು 'ಪ್ರಧಾನಿಯ ಕಾವೇರಿ ನದಿ ನೀರು ಹಂಚಿಕೆ ನೀತಿ'ಯನ್ನು ಬಲವಾಗಿ ಖಂಡಿಸಿದ್ದಾರೆ. ಇದು ರಾಜ್ಯದ ಜನತೆಗೆ ಪ್ರಧಾನಿ ಎಸಗಿದ ದ್ರೋಹ. ಈ ಅನ್ಯಾಯವನ್ನು ಖಂಡಿಸಿ ಚಳವಳಿ ಹಮ್ಮಿಕೊಳ್ಳಲಾಗುವುದು. ಇದರ ವ್ಯಾಪ್ತಿಯನ್ನು ವಿಸ್ತರಿಸಿ, ಇಡೀ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದಿದ್ದಾರೆ.
ಈ ನಿಟ್ಟಿನಲ್ಲಿ, ಎಲ್ಲ ಕನ್ನಡ ಪರ ಸಂಘಟನೆಗಳು ಚಳವಳಿಗೆ ಕೈಜೋಡಿಸಬೇಕು ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣ ಗೌಡರು ಕರೆ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications