'ದಂಡುಪಾಳ್ಯ ಅಧಿಪತಿ' ಕು.ಸ್ವಾಮಿ ಕಿಂಗ್ಮೇಕರ್ ಅಂತೆ

ಇಂತಿಪ್ಪ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮುಂದಿನ ಚುನಾವಣೆಗೆ ಭರದ ಸಿದ್ಧತೆ ನಡೆಸಿದ್ದಾರೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಈ ಮಧ್ಯೆ, ಎಲ್ಲ 224 ಕ್ಷೇತ್ರಗಳಲ್ಲೂ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ನ ಮತ್ತೊಬ್ಬ ದಂಡನಾಯಕ ದೇವೇಗೌಡರು ಇತ್ತೀಚೆಗೆ ಹೇಳಿದ್ದು ನೆನಪು. ಅಂದರೆ ಮುಂದಿನ ವಿಧಾನ ಸಭೆ ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ಏಕಪಕ್ಷವಾಗಿ ಹೊರಹೊಮ್ಮಲಿದೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು.
ಕುಮಾರಸಂಭವವೂ ಅದೇ ಅಂಕಿ-ಸಂಖ್ಯೆಗಳನ್ನು ಹೇಳುತ್ತಿತ್ತು. ನೋಡ್ತಿರಿ ಬಹುಮತ ನಮ್ಮದೇ ಎಂದು ಕುಮಾರಸ್ವಾಮಿ ತೊಡೆತಟ್ಟುತ್ತಿದ್ದರು. ಆದರೆ ಯಾಕೋ ಕುಮಾರಸ್ವಾಮಿಯವರು ಇತ್ತೀಚೆಗೆ ತಾವು ಹೇಳಿದ್ದ ಮಾತುಗಳನ್ನು ತಾವೇ ನುಂಗುತ್ತಿದ್ದಾರೆ.
ಜೆಡಿಎಸ್ ಶತಕದ ಗಡಿ ದಾಟುವುದಿಲ್ಲ: 'ರಾಜ್ಯದಲ್ಲಿ ಅತಿ ಶೀಘ್ರ ವಿಧಾನಸಭೆಗೆ ಚುನಾಚಣೆ ನಡೆಯಲಿದ್ದು, ಜೆಡಿಎಸ್ 60-75 ಸ್ಥಾನಗಳನ್ನು ಗೆಲ್ಲಲಿದೆ. ಆಡಳಿತದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ' ಎಂದು ಮೊನ್ನೆ ಗಂಗಾವತಿಯಲ್ಲಿ ಬೆಚ್ಚಿಬಿದ್ದವರಂತೆ ಹೇಳಿದ್ದಾರೆ. ಆದರೆ ಬಹುಮತದ ಮಾತನ್ನಾಡುತ್ತಿದ್ದ ಕುಮಾರಸ್ವಾಮಿಯವರು ದಿಢೀರನೆ ಕಿಂಗ್ ಮೇಕರ್ ಆಗಿ ಪರಿವರ್ತನೆಗೊಳ್ಳಲು ಕಾರಣವಾಗಿದ್ದಾರೂ ಏನು? ಎಂದು ಸ್ವತಃ ಪಕ್ಷದ ಕಾರ್ಯಕರ್ತರೇ ಬೆಚ್ಚಿಬಿದ್ದಿದ್ದಾರೆ. ಹಾಗಾದರೆ ಜೆಡಿಎಸ್ ಮುಂದಿನ ಚುನಾವಣೆಯಲ್ಲಿ ನೂರರ ಗಡಿ ದಾಟಲ್ಲವೋ? ಎಂದು ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾರೆ.
'ಪಕ್ಷದ ಭವಿಷ್ಯ ಇಷ್ಟೇ ಕಣ್ಣಣ್ಣೋ': ಅದೂ ಪಕ್ಷದ ಹಕ್ಕ-ಬುಕ್ಕ ಎನಿಸಿಕೊಂಡಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮತ್ತು ಶಾಸಕರಾದ ಜಮೀರ್ ಅಹಮದ್ ಖಾನ್ ಅವರೆದುರೇ 'ಪಕ್ಷದ ಭವಿಷ್ಯ ಇಷ್ಟೇ ಕಣ್ಣಣ್ಣೋ' ಎಂದು ಕುಮಾರಸ್ವಾಮಿ ಸಾರಿ ಹೇಳಿದ್ದು ರಾಜಕೀಯ ಪಂಡಿತರನ್ನು ಆಶ್ಚರ್ಯದ ಮಡುವಿಗೆ ತಳ್ಳಿದೆ.
'ಅಯ್ಯನೋರು' ಹೇಳಿದಂತೆ 'ದಂಡುಪಾಳ್ಯ ಸೇನಾಧಿಪತಿ' ಆಗಿಯೋ ಅಥವಾ 'ದಂಡುಪಾಳ್ಯದ ಕ್ವೀನ್'ಅನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿಯೋ ಅಂತೂ ಚುನಾವಣೆಯಲ್ಲಿ ನೂರರ ಗಡಿ ದಾಟುವ ಮಾತನ್ನಾಡದ ಕುಮಾರಸ್ವಾಮಿ, ಕಾರ್ಯಕರ್ತರನ್ನು ಹೀಗೇಕೆ ನಿರಾಶೆಯ ಮಡುವಿಗೆ ತಳ್ಳಿದರು? ಎಂಬುದು ಅರ್ಥವಾಗುತ್ತಿಲ್ಲ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications