ಈ ಕೆಲಸವನ್ನು ಪ್ರಧಾನಿ ಮೊದಲೇ ಮಾಡಬೇಕಿತ್ತು

ದೇಶದ ಆರ್ಥಿಕ ಸ್ಥಿತಿ ಏರುಪೇರಾಗುತ್ತಿರುವುದು ಹೊಸದೇನಲ್ಲ. ಆದರೆ, ಈಗಿನ ಪರಿಸ್ಥಿತಿ ತೀರ ಕ್ಲಿಷ್ಟಕರವಾಗಿದೆ. 1991ರಲ್ಲಿ ಭಾರದ ಎದುರಿಸುತ್ತಿದ್ದ ಆರ್ಥಿಕ ಬಿಕ್ಕಟ್ಟನ್ನು ದೇಶ ಇಂದು ಎದುರಿಸುತ್ತಿದೆ ಎಂದು ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ಶುಕ್ರವಾರ ದೇಶವನ್ನುದ್ದೇಶಿಸಿ ಹೇಳಿದ್ದಾರೆ. ಸಿಂಗ್ ಅವರು ದೇಶದ ಆರ್ಥಿಕತೆಯ ಹರಿಕಾರ ಎಂಬುದನ್ನು ಯಾರೂ ಅಲ್ಲಗಳೆಯಲಾರರು. ಆದರೆ, ಮೇಲಿನಂಥ ಪ್ರಶ್ನೆಗಳಿಗೆ ಉತ್ತರಗಳನ್ನು ನೇರವಾಗಿ ಶ್ರೀಸಾಮಾನ್ಯನ ಎದಿರು ನೀಡಲು ಪ್ರಧಾನಿ ಯಾವತ್ತಾದರೂ ಯತ್ನಿಸಿದ್ದರಾ?
ಇಲ್ಲವೇ ಇಲ್ಲ. ಆದರೂ, ಕಾಂಗ್ರೆಸ್ ನೇತೃತ್ವದ ಅಂಗಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಕೇಂದ್ರ ಆರ್ಥಿಕ ನೀತಿಯ ವಿರುದ್ಧ ಸಿಡಿದೆದ್ದ ಮೇಲೆ ಅನಿವಾರ್ಯವಾಗಿ ಪ್ರಧಾನಿ, ಭಾರತದ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ತಾವು ತೆಗೆದುಕೊಂಡಿರುವ ಕ್ರಮಗಳನ್ನು ಸಮರ್ಥಿಸಿಕೊಂಡು ಭಾಷಣ ಮಾಡಿದ್ದಾರೆ. ಈ ಕೆಲಸವನ್ನು ಪ್ರಧಾನಿ ಬಂದ್ಗಿಂತ ಮೊದಲೇ ಮಾಡಿದ್ದರೆ ವಿರೋಧ ಪಕ್ಷದ ಬಾಯನ್ನಾದರೂ ಮುಚ್ಚಿಸಬಹುದಿತ್ತು.
ವಸ್ತುಸ್ಥಿತಿ ಏನೇ ಇರಲಿ, ದೇಶ ಅರ್ಥಿಕವಾಗಿ ಸಂಕಷ್ಟದಲ್ಲಿರುವುದನ್ನು ವಿರೋಧ ಪಕ್ಷಗಳು ಕೂಡ ಅಲ್ಲಗಳೆಯುವುದಿಲ್ಲ. ಆದರೆ, ಒಂದೆಡೆ 2ಜಿ ತರಂಗಗುಚ್ಛ, ಕೋಲ್ ಗೇಟ್, ಕಾಮನ್ವೆಲ್ತ್ನಂತಹ ಕೋಟಿ ಕೋಟಿ ಮೌಲ್ಯದ ಹಗರಣಗಳು ನಡೆಯುತ್ತಿರುವಾಗ, ಶ್ರೀಸಾಮಾನ್ಯನ ಮೇಲೆ ಬೆಲೆ ಏರಿಕೆಯ ಹೊರೆ ಹೇರುವುದು ಯಾವ ನ್ಯಾಯ ಎಂದು ವಿರೋಧಪಕ್ಷಗಳು ಕೂಗು ಎಬ್ಬಿಸಿವೆ. ಇವಕ್ಕೆಲ್ಲ ಪ್ರಧಾನಿಯವರು ಶುಕ್ರವಾರ ದೂರದರ್ಶನದ ಮುಖಾಂತರ ಮಾಡಿದ ಭಾಷಣದಲ್ಲಿ ತಕ್ಕ ಉತ್ತರ ಕೊಟ್ಟಿದ್ದಾರೆ.
ಪ್ರಧಾನಿಯಾದ ಮೇಲೆ ಇಂಥ ಭಾಷಣ ಮಾಡಿದ್ದು ಎಷ್ಟನೇ ಬಾರಿ? ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನು ಉದ್ದೇಶಿಸುವುದನ್ನು ಹೊರತುಪಡಿಸಿದರೆ, 2008ರ ನವೆಂಬಲ್ 26ರಂದು ಮುಂಬೈನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯ ನಂತರ, ಉಗ್ರರ ದಾಳಿಯನ್ನು ಖಂಡಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೇಲೆ ಪ್ರಧಾನಿ ಯಾವತ್ತೂ ಇಂಥ ಭಾಷಣ ಮಾಡಿರಲಿಲ್ಲ. ಜನರನ್ನು ಉದ್ದೇಶಿಸಿ ದೇಶದ ಸ್ಥಿತಿಗತಿಯ ಬಗ್ಗೆ ವಿವರಣೆ ನೀಡಲು ಪ್ರಧಾನಿಗೇನು ತೊಂದರೆ?
ಹಾಗೆ ನೋಡಿದರೆ, ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಪ್ರತಿ ಭಾನುವಾರ ಜನರ ಮುಂದೆ ತಮ್ಮ ಮತ್ತು ದೇಶದ ಸುಖ ದುಃಖಗಳನ್ನು ಹೇಳಿಕೊಂಡು ಹಗುರಾಗುತ್ತಾರೆ. ಇದನ್ನು ಯುಟ್ಯೂಬ್, ಶ್ವೇತಭವನದ ವೆಬ್ ಸೈಟ್ ಮುಖಾಂತರ ಅಮೆರಿಕಾದ ಜನರೆಲ್ಲ ಕೇಳುತ್ತಾರೆ. ನಮ್ಮ ಭಾರತದ ಪ್ರಧಾನಿಯ ಬಗೆಗಿನ ಟೀಕೆಯೆಂದರೆ, ಅವರು ಶ್ರೀಸಾಮಾನ್ಯರೊಂದಿಗೆ ಬೆರೆಯುವುದಿಲ್ಲ, ಜನತಾ ದರ್ಶನ ಮಾಡುವುದಿಲ್ಲ, ಇನ್ನು ಗ್ರಾಮ್ಯ ವಾಸವಂತೂ ದೂರವೇ ಉಳಿಯಿತು. ಆದರೆ, ಕನಿಷ್ಠಪಕ್ಷ ಜನರನ್ನು ಆಗಾಗ ಉದ್ದೇಶಿಸಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿತಿಗಳನ್ನು ವಸ್ತುನಿಷ್ಠವಾಗಿ ಜನರಿಗೆ ತಿಳಿಸಿಕೊಡಲಿ ಎಂಬುದೇ ಜನಸಾಮಾನ್ಯರ ಆಶಯ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications