ಈ ಕೆಲಸವನ್ನು ಪ್ರಧಾನಿ ಮೊದಲೇ ಮಾಡಬೇಕಿತ್ತು

ದೇಶದ ಆರ್ಥಿಕ ಸ್ಥಿತಿ ಏರುಪೇರಾಗುತ್ತಿರುವುದು ಹೊಸದೇನಲ್ಲ. ಆದರೆ, ಈಗಿನ ಪರಿಸ್ಥಿತಿ ತೀರ ಕ್ಲಿಷ್ಟಕರವಾಗಿದೆ. 1991ರಲ್ಲಿ ಭಾರದ ಎದುರಿಸುತ್ತಿದ್ದ ಆರ್ಥಿಕ ಬಿಕ್ಕಟ್ಟನ್ನು ದೇಶ ಇಂದು ಎದುರಿಸುತ್ತಿದೆ ಎಂದು ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ಶುಕ್ರವಾರ ದೇಶವನ್ನುದ್ದೇಶಿಸಿ ಹೇಳಿದ್ದಾರೆ. ಸಿಂಗ್ ಅವರು ದೇಶದ ಆರ್ಥಿಕತೆಯ ಹರಿಕಾರ ಎಂಬುದನ್ನು ಯಾರೂ ಅಲ್ಲಗಳೆಯಲಾರರು. ಆದರೆ, ಮೇಲಿನಂಥ ಪ್ರಶ್ನೆಗಳಿಗೆ ಉತ್ತರಗಳನ್ನು ನೇರವಾಗಿ ಶ್ರೀಸಾಮಾನ್ಯನ ಎದಿರು ನೀಡಲು ಪ್ರಧಾನಿ ಯಾವತ್ತಾದರೂ ಯತ್ನಿಸಿದ್ದರಾ?
ಇಲ್ಲವೇ ಇಲ್ಲ. ಆದರೂ, ಕಾಂಗ್ರೆಸ್ ನೇತೃತ್ವದ ಅಂಗಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಕೇಂದ್ರ ಆರ್ಥಿಕ ನೀತಿಯ ವಿರುದ್ಧ ಸಿಡಿದೆದ್ದ ಮೇಲೆ ಅನಿವಾರ್ಯವಾಗಿ ಪ್ರಧಾನಿ, ಭಾರತದ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ತಾವು ತೆಗೆದುಕೊಂಡಿರುವ ಕ್ರಮಗಳನ್ನು ಸಮರ್ಥಿಸಿಕೊಂಡು ಭಾಷಣ ಮಾಡಿದ್ದಾರೆ. ಈ ಕೆಲಸವನ್ನು ಪ್ರಧಾನಿ ಬಂದ್ಗಿಂತ ಮೊದಲೇ ಮಾಡಿದ್ದರೆ ವಿರೋಧ ಪಕ್ಷದ ಬಾಯನ್ನಾದರೂ ಮುಚ್ಚಿಸಬಹುದಿತ್ತು.
ವಸ್ತುಸ್ಥಿತಿ ಏನೇ ಇರಲಿ, ದೇಶ ಅರ್ಥಿಕವಾಗಿ ಸಂಕಷ್ಟದಲ್ಲಿರುವುದನ್ನು ವಿರೋಧ ಪಕ್ಷಗಳು ಕೂಡ ಅಲ್ಲಗಳೆಯುವುದಿಲ್ಲ. ಆದರೆ, ಒಂದೆಡೆ 2ಜಿ ತರಂಗಗುಚ್ಛ, ಕೋಲ್ ಗೇಟ್, ಕಾಮನ್ವೆಲ್ತ್ನಂತಹ ಕೋಟಿ ಕೋಟಿ ಮೌಲ್ಯದ ಹಗರಣಗಳು ನಡೆಯುತ್ತಿರುವಾಗ, ಶ್ರೀಸಾಮಾನ್ಯನ ಮೇಲೆ ಬೆಲೆ ಏರಿಕೆಯ ಹೊರೆ ಹೇರುವುದು ಯಾವ ನ್ಯಾಯ ಎಂದು ವಿರೋಧಪಕ್ಷಗಳು ಕೂಗು ಎಬ್ಬಿಸಿವೆ. ಇವಕ್ಕೆಲ್ಲ ಪ್ರಧಾನಿಯವರು ಶುಕ್ರವಾರ ದೂರದರ್ಶನದ ಮುಖಾಂತರ ಮಾಡಿದ ಭಾಷಣದಲ್ಲಿ ತಕ್ಕ ಉತ್ತರ ಕೊಟ್ಟಿದ್ದಾರೆ.
ಪ್ರಧಾನಿಯಾದ ಮೇಲೆ ಇಂಥ ಭಾಷಣ ಮಾಡಿದ್ದು ಎಷ್ಟನೇ ಬಾರಿ? ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನು ಉದ್ದೇಶಿಸುವುದನ್ನು ಹೊರತುಪಡಿಸಿದರೆ, 2008ರ ನವೆಂಬಲ್ 26ರಂದು ಮುಂಬೈನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯ ನಂತರ, ಉಗ್ರರ ದಾಳಿಯನ್ನು ಖಂಡಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೇಲೆ ಪ್ರಧಾನಿ ಯಾವತ್ತೂ ಇಂಥ ಭಾಷಣ ಮಾಡಿರಲಿಲ್ಲ. ಜನರನ್ನು ಉದ್ದೇಶಿಸಿ ದೇಶದ ಸ್ಥಿತಿಗತಿಯ ಬಗ್ಗೆ ವಿವರಣೆ ನೀಡಲು ಪ್ರಧಾನಿಗೇನು ತೊಂದರೆ?
ಹಾಗೆ ನೋಡಿದರೆ, ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಪ್ರತಿ ಭಾನುವಾರ ಜನರ ಮುಂದೆ ತಮ್ಮ ಮತ್ತು ದೇಶದ ಸುಖ ದುಃಖಗಳನ್ನು ಹೇಳಿಕೊಂಡು ಹಗುರಾಗುತ್ತಾರೆ. ಇದನ್ನು ಯುಟ್ಯೂಬ್, ಶ್ವೇತಭವನದ ವೆಬ್ ಸೈಟ್ ಮುಖಾಂತರ ಅಮೆರಿಕಾದ ಜನರೆಲ್ಲ ಕೇಳುತ್ತಾರೆ. ನಮ್ಮ ಭಾರತದ ಪ್ರಧಾನಿಯ ಬಗೆಗಿನ ಟೀಕೆಯೆಂದರೆ, ಅವರು ಶ್ರೀಸಾಮಾನ್ಯರೊಂದಿಗೆ ಬೆರೆಯುವುದಿಲ್ಲ, ಜನತಾ ದರ್ಶನ ಮಾಡುವುದಿಲ್ಲ, ಇನ್ನು ಗ್ರಾಮ್ಯ ವಾಸವಂತೂ ದೂರವೇ ಉಳಿಯಿತು. ಆದರೆ, ಕನಿಷ್ಠಪಕ್ಷ ಜನರನ್ನು ಆಗಾಗ ಉದ್ದೇಶಿಸಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿತಿಗಳನ್ನು ವಸ್ತುನಿಷ್ಠವಾಗಿ ಜನರಿಗೆ ತಿಳಿಸಿಕೊಡಲಿ ಎಂಬುದೇ ಜನಸಾಮಾನ್ಯರ ಆಶಯ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications