ಪ್ರಧಾನಿ ಸಿಂಗ್ ವಿರುದ್ಧ ರೊಚ್ಚಿಗೆದ್ದು ಅಂಗಿ ಬಿಚ್ಚಿದ

ಭಾರತ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ವಿಷಯವನ್ನು ದೇಶದ ಮುಂದಿಡುವ ಉದ್ದೇಶದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರಿಗೆ ಭಾಷಣ ಆರಂಭಿಸುವ ಮುನ್ನ ಒಂದು ಆಘಾತ ಕಾದಿತ್ತು. ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ತನ್ನ ಅಂಗಿಯನ್ನು ಬಿಚ್ಚಿ ಕುರ್ಚಿಯ ಮೇಲೆ ನಿಂತುಕೊಂಡು ಪ್ರಧಾನಿಯ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದ.
ಕೂಡಲೆ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿಗಳು, 'ಪ್ರಧಾನಿ ವಾಪಸ್ ಹೋಗಿ' ಎಂದು ಕೂಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊರಗೆ ಕರೆದುಕೊಂಡು ಹೋದರು. ಈ ಘಟನೆ ಪ್ರಧಾನಿಗೆ ಒದಗಿಸಿರುವ ಭದ್ರತೆಯ ಕುರಿತಂತೆ ಪ್ರಶ್ನೆಗಳೇಳುವಂತೆ ಮಾಡಿದೆ. ಆತನನ್ನು ದೆಹಲಿ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಘಟನೆಯಿಂದ ವಿಚಲಿತರಾಗದ ಪ್ರಧಾನಿ ಮನಮೋಹನ ಸಿಂಗ್ ಅವರು, ಭಾರತ 1991ರಲ್ಲಿ ಎದುರಿಸಿದ್ದ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಈಗ ಎದುರಿಸುತ್ತಿದೆ. ದುಡ್ಡು ಗಿಡದಲ್ಲಿ ಹುಟ್ಟುವುದಿಲ್ಲ. ಆಂತರಿಕವಾಗಿ ಮತ್ತು ಜಾಗತಿಕವಾಗಿ ಬಂಡವಾಳ ಹರಿದುಬರಲು ನಾವು ಕೆಲವೊಂದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ. ಇದಕ್ಕೆ ನಾಡಿನ ಜನತೆ ಸಿದ್ಧರಾಗಿರಬೇಕು ಎಂದು ಭಾಷಣದಲ್ಲಿ ಹೇಳಿದ್ದಾರೆ.
ಸಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಮೊದಲೇನಲ್ಲ. 2009ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಅಹ್ಮದಾಬಾದಿನಲ್ಲಿ ಪ್ರಧಾನಿ ಮನಮೋಹನ ಸಿಂಗ್ ಅವರ ಮೇಲೆ, ಬಹಿರಂಗ ಪ್ರಚಾರ ಸಭೆಯಲ್ಲಿ ನಾಗರಿಕನೋರ್ವ ಬೂಟನ್ನು ಎಸೆದು ತನ್ನ ಆಕ್ರೋಶ ವ್ಯಕ್ತಪಡಿಸಿದ್ದ. ಅದು ಅವರಿಗೆ ತಾಗದೆ ಬಳಿಯಿಂದ ಹಾರಿಹೋಗಿತ್ತು.
2010ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ವಿರುದ್ಧ ಭಿನ್ನಮತದ ದಂಗೆ ಎದ್ದಿದ್ದಾಗ ಅವರಿಗೆ ವಿಶ್ವಾಸಮತ ಯಾಚಿಸಬೇಕೆಂದು ರಾಜ್ಯಪಾಲರು ಆದೇಶ ನೀಡಿದ್ದರು. ಆಗ ಅಮಾನತುಗೊಂಡಿದ್ದ ಭಿನ್ನಮತೀಯರಲ್ಲಿ ಒಬ್ಬರಾದ ಗೂಳಿಹಟ್ಟಿ ಶೇಖರ್ ತಾವು ಹಾಕಿಕೊಂಡ ಅಂಗಿಯನ್ನು ಹರಿದು ಚಿಂದಿಚಿಂದಿ ಮಾಡಿ ವಿಧಾನಸಭೆಗೆ ಅವಮಾನ ಮಾಡಿದ್ದರು.
ಮೇಲಿಂದ ಮೇಲೆ ದೇಶ ಉದ್ದೇಶಿಸಿ ಸಿಂಗ್ ಮಾತನಾಡಲಿ : ಮುಂಬೈನಲ್ಲಿ ಉಗ್ರರ ದಾಳಿ ನಡೆದ ನಂತರ ದೇಶದ ಜನತೆಯನ್ನು ಉದ್ದೇಶಿಸಿ ದೂರದರ್ಶನದ ಮುಖಾಂತರ ಭಾಷಣ ಮಾಡಿದ ಮೇಲೆ ಪ್ರಧಾನಿ ಸಿಂಗ್ ಅವರು ದೇಶವನ್ನುದ್ದೇಶಿಸಿ ಮಾತನಾಡುತ್ತಿರುವುದು ಇದೇ ಮೊದಲು. ದೇಶದ ಜನತೆಯಲ್ಲಿ ಧೈರ್ಯ ತುಂಬಲು, ಆರ್ಥಿಕ ಸ್ಥಿತಿಗತಿಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಪ್ರಧಾನಿ ಮೇಲಿಂದ ಮೇಲೆ ಹೀಗೆ ಭಾಷಣ ಏಕೆ ಮಾಡಬಾರದು ಎಂಬ ಮಾತು ಕೇಳಿಬಂದಿದೆ.
ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರತಿ ಭಾನುವಾರ ಜನತೆಯನ್ನು ಉದ್ದೇಶಿಸಿ ಮಾತನಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಅಮೆರಿಕದ ಅಧ್ಯಕ್ಷರೇ ಹೀಗಿರುವಾಗ ಭಾರತದ ಪ್ರಧಾನಿ ಕೂಡ, ಕನಿಷ್ಠ ಪಕ್ಷ ತಿಂಗಳಿಗೊಮ್ಮೆಯಾದರೂ ಜನತೆಯನ್ನು ಉದ್ದೇಶಿಸಿ ಮಾತನಾಡಲಿ ಎಂಬ ಆಶಯ ಕೂಡ ವ್ಯಕ್ತಪಡಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications