ಪ್ರಧಾನಿ ಸಿಂಗ್ ವಿರುದ್ಧ ರೊಚ್ಚಿಗೆದ್ದು ಅಂಗಿ ಬಿಚ್ಚಿದ

ಭಾರತ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ವಿಷಯವನ್ನು ದೇಶದ ಮುಂದಿಡುವ ಉದ್ದೇಶದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರಿಗೆ ಭಾಷಣ ಆರಂಭಿಸುವ ಮುನ್ನ ಒಂದು ಆಘಾತ ಕಾದಿತ್ತು. ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ತನ್ನ ಅಂಗಿಯನ್ನು ಬಿಚ್ಚಿ ಕುರ್ಚಿಯ ಮೇಲೆ ನಿಂತುಕೊಂಡು ಪ್ರಧಾನಿಯ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದ.
ಕೂಡಲೆ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿಗಳು, 'ಪ್ರಧಾನಿ ವಾಪಸ್ ಹೋಗಿ' ಎಂದು ಕೂಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊರಗೆ ಕರೆದುಕೊಂಡು ಹೋದರು. ಈ ಘಟನೆ ಪ್ರಧಾನಿಗೆ ಒದಗಿಸಿರುವ ಭದ್ರತೆಯ ಕುರಿತಂತೆ ಪ್ರಶ್ನೆಗಳೇಳುವಂತೆ ಮಾಡಿದೆ. ಆತನನ್ನು ದೆಹಲಿ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಘಟನೆಯಿಂದ ವಿಚಲಿತರಾಗದ ಪ್ರಧಾನಿ ಮನಮೋಹನ ಸಿಂಗ್ ಅವರು, ಭಾರತ 1991ರಲ್ಲಿ ಎದುರಿಸಿದ್ದ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಈಗ ಎದುರಿಸುತ್ತಿದೆ. ದುಡ್ಡು ಗಿಡದಲ್ಲಿ ಹುಟ್ಟುವುದಿಲ್ಲ. ಆಂತರಿಕವಾಗಿ ಮತ್ತು ಜಾಗತಿಕವಾಗಿ ಬಂಡವಾಳ ಹರಿದುಬರಲು ನಾವು ಕೆಲವೊಂದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ. ಇದಕ್ಕೆ ನಾಡಿನ ಜನತೆ ಸಿದ್ಧರಾಗಿರಬೇಕು ಎಂದು ಭಾಷಣದಲ್ಲಿ ಹೇಳಿದ್ದಾರೆ.
ಸಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಮೊದಲೇನಲ್ಲ. 2009ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಅಹ್ಮದಾಬಾದಿನಲ್ಲಿ ಪ್ರಧಾನಿ ಮನಮೋಹನ ಸಿಂಗ್ ಅವರ ಮೇಲೆ, ಬಹಿರಂಗ ಪ್ರಚಾರ ಸಭೆಯಲ್ಲಿ ನಾಗರಿಕನೋರ್ವ ಬೂಟನ್ನು ಎಸೆದು ತನ್ನ ಆಕ್ರೋಶ ವ್ಯಕ್ತಪಡಿಸಿದ್ದ. ಅದು ಅವರಿಗೆ ತಾಗದೆ ಬಳಿಯಿಂದ ಹಾರಿಹೋಗಿತ್ತು.
2010ರಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪನವರ ವಿರುದ್ಧ ಭಿನ್ನಮತದ ದಂಗೆ ಎದ್ದಿದ್ದಾಗ ಅವರಿಗೆ ವಿಶ್ವಾಸಮತ ಯಾಚಿಸಬೇಕೆಂದು ರಾಜ್ಯಪಾಲರು ಆದೇಶ ನೀಡಿದ್ದರು. ಆಗ ಅಮಾನತುಗೊಂಡಿದ್ದ ಭಿನ್ನಮತೀಯರಲ್ಲಿ ಒಬ್ಬರಾದ ಗೂಳಿಹಟ್ಟಿ ಶೇಖರ್ ತಾವು ಹಾಕಿಕೊಂಡ ಅಂಗಿಯನ್ನು ಹರಿದು ಚಿಂದಿಚಿಂದಿ ಮಾಡಿ ವಿಧಾನಸಭೆಗೆ ಅವಮಾನ ಮಾಡಿದ್ದರು.
ಮೇಲಿಂದ ಮೇಲೆ ದೇಶ ಉದ್ದೇಶಿಸಿ ಸಿಂಗ್ ಮಾತನಾಡಲಿ : ಮುಂಬೈನಲ್ಲಿ ಉಗ್ರರ ದಾಳಿ ನಡೆದ ನಂತರ ದೇಶದ ಜನತೆಯನ್ನು ಉದ್ದೇಶಿಸಿ ದೂರದರ್ಶನದ ಮುಖಾಂತರ ಭಾಷಣ ಮಾಡಿದ ಮೇಲೆ ಪ್ರಧಾನಿ ಸಿಂಗ್ ಅವರು ದೇಶವನ್ನುದ್ದೇಶಿಸಿ ಮಾತನಾಡುತ್ತಿರುವುದು ಇದೇ ಮೊದಲು. ದೇಶದ ಜನತೆಯಲ್ಲಿ ಧೈರ್ಯ ತುಂಬಲು, ಆರ್ಥಿಕ ಸ್ಥಿತಿಗತಿಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಪ್ರಧಾನಿ ಮೇಲಿಂದ ಮೇಲೆ ಹೀಗೆ ಭಾಷಣ ಏಕೆ ಮಾಡಬಾರದು ಎಂಬ ಮಾತು ಕೇಳಿಬಂದಿದೆ.
ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರತಿ ಭಾನುವಾರ ಜನತೆಯನ್ನು ಉದ್ದೇಶಿಸಿ ಮಾತನಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಅಮೆರಿಕದ ಅಧ್ಯಕ್ಷರೇ ಹೀಗಿರುವಾಗ ಭಾರತದ ಪ್ರಧಾನಿ ಕೂಡ, ಕನಿಷ್ಠ ಪಕ್ಷ ತಿಂಗಳಿಗೊಮ್ಮೆಯಾದರೂ ಜನತೆಯನ್ನು ಉದ್ದೇಶಿಸಿ ಮಾತನಾಡಲಿ ಎಂಬ ಆಶಯ ಕೂಡ ವ್ಯಕ್ತಪಡಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications