ಈ ಭಾನುವಾರ ಬೆಂಗಳೂರಿನಲ್ಲಿ ಮದ್ಯಮಾರಾಟ ಬಂದ್

ಹಿಂದೂ ಪರ ಸಂಘಟನೆಗಳ ಮೆರವಣಿಗೆಯ ಹಿನ್ನಲೆಯಲ್ಲಿ ನಗರದ ಪೂರ್ವ ಭಾಗವಾದ ಶಿವಾಜಿನಗರ, ಭಾರತೀನಗರ ಮತ್ತು ಕಮರ್ಷಿಯಲ್ ಸ್ಟ್ರೀಟ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿರುತ್ತದೆ.
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ RBNMS ಶಾಲಾ ಮೈದಾನದ ನಾಗದೇವಾಲಯದಿಂದ ಸುಮಾರು 40 ಗಣೇಶನ ವಿಗ್ರಹಗಳ ಭವ್ಯ ವಿಸರ್ಜನಾ ಮೆರವಣಿಗೆಯನ್ನು ಸುಭಾಷ್ ಚಂದ್ರ ಬೋಸ್ ವೆಲ್ ಫೇರ್ ಅಸೋಸಿಯೇಷನ್ ಮುಂದಾಳುತ್ವದಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಆಯೋಜಿಸಿವೆ.
ಈ ಸಾಮೂಹಿಕ ವಿಸರ್ಜನಾ ಮೆರವಣಿಗೆ ಪೂರ್ವ ಭಾಗದ ವೀರಪಿಳೈ ಸ್ಟ್ರೀಟ್, ಜ್ಯುವೆಲ್ಲರಿ ಸ್ಟ್ರೀಟ್, ಧರ್ಮರಾಜ ದೇವಸ್ಥಾನ ಬೀದಿ, ಕ್ವಾರ್ಡಂಡ್ ಸರ್ಕಲ್, ಸೆಪ್ಟಿಂಗ್ಸ್ ರಸ್ತೆ, ತಿಮ್ಮಯ್ಯ ರಸ್ತೆ, ಕಾಮರಾಜ ರಸ್ತೆ, ಶಿವನಚೆಟ್ಟಿ ಗಾರ್ಡನ್, ಸೆಂಟ್ ಜಾನ್ಸ್ ರಸ್ತೆ ಮೂಲಕ ಹಾದು ಹಲಸೂರು ಕೆರೆಯವರೆಗೆ ನಡೆಯಲಿದೆ.
ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ರಾತ್ರಿ 10.30 ರವರೆಗೆ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಹಾಗೂ ಭಾರತೀನಗರ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮುಚ್ಚಬೇಕು ಎಂದು ಪೋಲೀಸ್ ಆಯುಕ್ತ ಮಿರ್ಜಿ ಸೂಚಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications