ಜಯನಗರ: ಜಲಮಂಡಳಿ ಬಿಡಿಎ ಬಿಬಿಎಂಪಿ 'ಸಕಾಲ'ಕ್ಕೆ

ಸಚಿವ ಸುರೇಶ್ ಕುಮಾರ್ ಹೇಳಿರುವುದೇನು?: ಅಕ್ಟೋಬರ್ 15 ರಿಂದ ಪ್ರಾಯೋಗಿಕವಾಗಿ ಜಯನಗರ ಕ್ಷೇತ್ರದಲ್ಲಿ ಈ ಸೇವೆಗಳನ್ನು ಪ್ರಾರಂಭಿಸಿ ನವೆಂಬರ್ 2ರಿಂದ ಎಲ್ಲ ಕೇಂದ್ರಗಳಲ್ಲಿ ಆರಂಭಿಸಲಾಗುವುದು.
ಸಕಾಲ ಸೇವೆಗಳು ಯಾವುವು?: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಖಾತೆಗಳ ನೋಂದಣಿ ಮತ್ತು ವರ್ಗಾವಣೆ, ಬಹುಮಹಡಿ ಕಟ್ಟಡಗಳ ಯೋಜನೆಯ ಮಂಜೂರಾತಿ, ಖಾತಾ ಪತ್ರ ನೀಡಿಕೆ, ಅನುಮೋದಿತ ಬಡಾವಣೆಗೆ ಖಾತಾ ಪತ್ರ ನೀಡುವುದು, ಮರಣ ಪ್ರಕರಣಗಳಲ್ಲಿ ಖಾತಾ ಬದಲಾವಣೆ, ಹಂಚಿಕೆಯಾದ ನಿವೇಶನದ ಖಾತಾ ಬದಲಾವಣೆ, ಸ್ವಾಧೀನಾನುಭವ ಪ್ರಮಾಣ ಪತ್ರ, ನಿವೇಶನಗಳ ಭಾಗ ಮತ್ತು ಒಗ್ಗೂಡಿಸುವಿಕೆ, ಭೂ ಪರಿವರ್ತನೆ ಸೇರಿದಂತೆ ಒಟ್ಟು 12 ಸೇವೆಗಳನ್ನು ಸಾರ್ವಜನಿಕರ ಬೇಡಿಕೆ ಮೇರೆಗೆ ಸೇರ್ಪಡೆ ಗೊಳಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಾಲ್ಕು ಹೊಸ ಸೇವೆಗಳನ್ನು ಸಕಾಲದಡಿ ಸೇರ್ಪಡೆಗೊಳಿಸಲಾಗುತ್ತಿದೆ. ಇದರಿಂದ ಒಟ್ಟು 265 ಸೇವೆಗಳು ಸಕಾಲ ವ್ಯಾಪ್ತಿಗೆ ಒಳ ಪಟ್ಟಂತಾಗಿದೆ.
ಜಲಮಂಡಳಿಗೆ ಜೀವ: ನೀರು ಸರಬರಾಜು ಮತ್ತು ಒಳಚರಂಡಿಯ ಹಳೆಯ ಪೈಪುಗಳನ್ನು ಹಂತ-ಹಂತವಾಗಿ ಬದಲಾವಣೆ ಮಾಡುವಂತೆ ಜಲಮಂಡಳಿಗೆ ಸೂಚನೆ ನೀಡಲಾಗಿದ್ದು, ಹಲವು ಪ್ರದೇಶಗಳಲ್ಲಿ ಈಗಾಗಲೆ ಈ ಕಾಮಗಾರಿ ಚಾಲನೆಯಲ್ಲಿದೆ ಎಂದು ನಗರಾಭಿವೃದ್ಧಿ, ಬೆಂಗಳೂರು ಜಲಮಂಡಳಿ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಪ್ರಸ್ತುತ ಇರುವ ನೀರಿನ ಪೈಪು ಮತ್ತು ಒಳಚರಂಡಿ ಪೈಪುಗಳ ಗಾತ್ರ ಇಂದಿನ ಜನಸಾಂದ್ರತೆಯ ಪ್ರಮಾಣಕ್ಕೆ ಸಾಲದು. ಜತೆಗೆ ತೀರಾ ಹಳೆಯದೂ ಆಗಿರುವುದರಿಂದ ಅವುಗಳ ಸಾಮರ್ಥ್ಯ ಕುಗ್ಗಿದೆ. ಹಂತ ಹಂತವಾಗಿ ಇಂತಹ ಹಳೆಯ ಪೈಪುಗಳನ್ನು ಬದಲಾವಣೆ ಮಾಡಲು ಜಲಮಂಡಳಿ ಕ್ರಮ ಕೈಗೊಂಡಿದೆ.
ಇದುವರೆಗೆ ಸಕಾಲ ಯೋಜನೆಯಡಿ 1,12,95,000 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1,07,65,000 ವಿಲೇವಾರಿ ಮಾಡಲಾಗಿದೆ. ಸಕಾಲ ಯೋಜನೆಯಡಿ ಅರ್ಜಿ ವಿಲೇವಾರಿ ಮಾಡಿದ ಜಿಲ್ಲೆಗಳ ಪೈಕಿ ಆಗಸ್ಟ್- 2012ರ ಮಾಹೆಯಲ್ಲಿ ಕೊಡಗು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾವೇರಿ ಮತ್ತು ಕೋಲಾರ ಜಿಲ್ಲೆಗಳು ಅರ್ಜಿಗಳ ವಿಲೇವಾರಿಯಲ್ಲಿ ಉತ್ತಮ ಸ್ಥಾನ ಕಾಯ್ದು ಕೊಂಡಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications