ಜಯನಗರ: ಜಲಮಂಡಳಿ ಬಿಡಿಎ ಬಿಬಿಎಂಪಿ 'ಸಕಾಲ'ಕ್ಕೆ

ಸಚಿವ ಸುರೇಶ್ ಕುಮಾರ್ ಹೇಳಿರುವುದೇನು?: ಅಕ್ಟೋಬರ್ 15 ರಿಂದ ಪ್ರಾಯೋಗಿಕವಾಗಿ ಜಯನಗರ ಕ್ಷೇತ್ರದಲ್ಲಿ ಈ ಸೇವೆಗಳನ್ನು ಪ್ರಾರಂಭಿಸಿ ನವೆಂಬರ್ 2ರಿಂದ ಎಲ್ಲ ಕೇಂದ್ರಗಳಲ್ಲಿ ಆರಂಭಿಸಲಾಗುವುದು.
ಸಕಾಲ ಸೇವೆಗಳು ಯಾವುವು?: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಖಾತೆಗಳ ನೋಂದಣಿ ಮತ್ತು ವರ್ಗಾವಣೆ, ಬಹುಮಹಡಿ ಕಟ್ಟಡಗಳ ಯೋಜನೆಯ ಮಂಜೂರಾತಿ, ಖಾತಾ ಪತ್ರ ನೀಡಿಕೆ, ಅನುಮೋದಿತ ಬಡಾವಣೆಗೆ ಖಾತಾ ಪತ್ರ ನೀಡುವುದು, ಮರಣ ಪ್ರಕರಣಗಳಲ್ಲಿ ಖಾತಾ ಬದಲಾವಣೆ, ಹಂಚಿಕೆಯಾದ ನಿವೇಶನದ ಖಾತಾ ಬದಲಾವಣೆ, ಸ್ವಾಧೀನಾನುಭವ ಪ್ರಮಾಣ ಪತ್ರ, ನಿವೇಶನಗಳ ಭಾಗ ಮತ್ತು ಒಗ್ಗೂಡಿಸುವಿಕೆ, ಭೂ ಪರಿವರ್ತನೆ ಸೇರಿದಂತೆ ಒಟ್ಟು 12 ಸೇವೆಗಳನ್ನು ಸಾರ್ವಜನಿಕರ ಬೇಡಿಕೆ ಮೇರೆಗೆ ಸೇರ್ಪಡೆ ಗೊಳಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಾಲ್ಕು ಹೊಸ ಸೇವೆಗಳನ್ನು ಸಕಾಲದಡಿ ಸೇರ್ಪಡೆಗೊಳಿಸಲಾಗುತ್ತಿದೆ. ಇದರಿಂದ ಒಟ್ಟು 265 ಸೇವೆಗಳು ಸಕಾಲ ವ್ಯಾಪ್ತಿಗೆ ಒಳ ಪಟ್ಟಂತಾಗಿದೆ.
ಜಲಮಂಡಳಿಗೆ ಜೀವ: ನೀರು ಸರಬರಾಜು ಮತ್ತು ಒಳಚರಂಡಿಯ ಹಳೆಯ ಪೈಪುಗಳನ್ನು ಹಂತ-ಹಂತವಾಗಿ ಬದಲಾವಣೆ ಮಾಡುವಂತೆ ಜಲಮಂಡಳಿಗೆ ಸೂಚನೆ ನೀಡಲಾಗಿದ್ದು, ಹಲವು ಪ್ರದೇಶಗಳಲ್ಲಿ ಈಗಾಗಲೆ ಈ ಕಾಮಗಾರಿ ಚಾಲನೆಯಲ್ಲಿದೆ ಎಂದು ನಗರಾಭಿವೃದ್ಧಿ, ಬೆಂಗಳೂರು ಜಲಮಂಡಳಿ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಪ್ರಸ್ತುತ ಇರುವ ನೀರಿನ ಪೈಪು ಮತ್ತು ಒಳಚರಂಡಿ ಪೈಪುಗಳ ಗಾತ್ರ ಇಂದಿನ ಜನಸಾಂದ್ರತೆಯ ಪ್ರಮಾಣಕ್ಕೆ ಸಾಲದು. ಜತೆಗೆ ತೀರಾ ಹಳೆಯದೂ ಆಗಿರುವುದರಿಂದ ಅವುಗಳ ಸಾಮರ್ಥ್ಯ ಕುಗ್ಗಿದೆ. ಹಂತ ಹಂತವಾಗಿ ಇಂತಹ ಹಳೆಯ ಪೈಪುಗಳನ್ನು ಬದಲಾವಣೆ ಮಾಡಲು ಜಲಮಂಡಳಿ ಕ್ರಮ ಕೈಗೊಂಡಿದೆ.
ಇದುವರೆಗೆ ಸಕಾಲ ಯೋಜನೆಯಡಿ 1,12,95,000 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1,07,65,000 ವಿಲೇವಾರಿ ಮಾಡಲಾಗಿದೆ. ಸಕಾಲ ಯೋಜನೆಯಡಿ ಅರ್ಜಿ ವಿಲೇವಾರಿ ಮಾಡಿದ ಜಿಲ್ಲೆಗಳ ಪೈಕಿ ಆಗಸ್ಟ್- 2012ರ ಮಾಹೆಯಲ್ಲಿ ಕೊಡಗು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾವೇರಿ ಮತ್ತು ಕೋಲಾರ ಜಿಲ್ಲೆಗಳು ಅರ್ಜಿಗಳ ವಿಲೇವಾರಿಯಲ್ಲಿ ಉತ್ತಮ ಸ್ಥಾನ ಕಾಯ್ದು ಕೊಂಡಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications