ದ್ವೇಷದಿಂದ ಹಾವು ಕಂಡಕಂಡವರಿಗೆ ಕಚ್ಚುತ್ತಿದೆಯಂತೆ!

ಈ ಎಲ್ಲ ಪ್ರಶ್ನೆಗಳಿಗೆ ನಿಖರವಾದ ಉತ್ತರ ಸಿಕ್ಕಿಲ್ಲ. ಆದರೆ, ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೀನಕೇರಾ ಎಂಬ ಗ್ರಾಮದಲ್ಲಿ ದಲಿತ ಕೇರಿಯ 25ಕ್ಕೂ ಹೆಚ್ಚು ಜನರು ಹಾವಿನ ಕಡಿತಕ್ಕೊಳಗಾಗಿದ್ದಾರೆ. ಹಾವು ನಾಗರವಾವಾ ಅಥವಾ ಕೆರೆ ಹಾವಾ? ಹಾವು ದಲಿತರ ಕೇರಿಯಲ್ಲಿ ಜನರಿಗೇ ಏಕೆ ಕಚ್ಚುತ್ತಿದೆ? ಹಾವು ಯಾರ ಕಣ್ಣಿಗೂ ಏಕೆ ಬಿದ್ದಿಲ್ಲ? ಎಂಬ ಪ್ರಶ್ನೆಗಳಿಗೆ ಕೂಡ ಉತ್ತರ ದಕ್ಕಿಲ್ಲ.
ಒಟ್ಟಿನಲ್ಲಿ, ಜನರು ಹಾವಿನ ಕಡಿತಕ್ಕೊಳಗಾಗುತ್ತಿದ್ದಾರೆ ಎಂಬ ಸುದ್ದಿ ಜ್ವರದಂತೆ ಹಬ್ಬುತ್ತಿದೆ. ಮೀನಕೇರಾ ಗ್ರಾಮದ ಪಕ್ಕದಲ್ಲಿರುವ ಚಾಂಗಲೇರಾ ಎಂಬ ಹಳ್ಳಿಯಲ್ಲಿ ದೊರೆಯುತ್ತಿರುವ ಮದ್ದು ಸೇವಿಸಿ ಇವರೆಲ್ಲ ಜೀವ ಉಳಿಸಿಕೊಂಡಿದ್ದಾರೆ. ಈ ವಿದ್ಯಮಾನದಿಂದಾಗಿ ಗ್ರಾಮದ ಜನರೆಲ್ಲ ರಾತ್ರಿ ನಿದ್ದೆಯಿಲ್ಲದೆ ಕಾಲ ಕಳೆಯುವಂತಾಗಿದೆ.
ಇದು ಹಾವಿನ ಕಡಿತವಲ್ಲ, ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದೂ ಕೆಲವರು ಹೇಳುತ್ತಿದ್ದಾರೆ. ಆದರೆ, ಕಡಿಸಿಕೊಂಡವರು ಮಾತ್ರ ಈ ಮಾತನ್ನು ಒಪ್ಪಲು ತಯಾರಿಲ್ಲ. ಹಿಂದೆ ಮಾಡಿದ ತಪ್ಪಿಗಾಗಿ ಹಾವುಗಳು ತಮ್ಮ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿವೆ ಎಂದು ಬಲವಾಗಿ ನಂಬಿದ್ದಾರೆ. ರಾತ್ರಿ ಸಮಯದಲ್ಲಿ ಮಲಗಲು ಮತ್ತು ಹೊಲಗದ್ದೆಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ.
ಇದಕ್ಕೆ ಕಾರಣವೇನು? : ಗ್ರಾಮಸ್ಥರ ಪ್ರಕಾರ, ಈಗಿರುವ ದಲಿತ ಕೇರಿಯಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರ ಇದ್ದ ಸ್ಥಳದಲ್ಲಿ ಹಿಂದೆ ನಾಗರಕಟ್ಟೆ ಮತ್ತು ನಂದಿಮೂರ್ತಿ ಇತ್ತು. ಈಗಲೂ ನಾಗರಕಟ್ಟೆ ಇದ್ದರೂ ಅದನ್ನು ನಿರ್ಲಕ್ಷಿಸಿದ್ದರಿಂದ ಪರಿಣಾಮ ಈ ಕೇರಿಯ ಜನರು ಎದುರಿಸಬೇಕಾಗುತ್ತಿದೆ ಎಂದು ಹೇಳುತ್ತಿದ್ದಾರೆ. ನಾಗರಕಟ್ಟೆಯನ್ನು ಸಂರಕ್ಷಿಸಿ ಮತ್ತೆ ನಾಗರ ಹಾವಿನ ಪೂಜೆ ಕೈಗೊಂಡರೆ ಮುಂದೆ ನಡೆಯುವ ಅನಾಹುತದಿಂದ ತಪ್ಪಿಸಿಕೊಳ್ಳಬಹುದು ಎಂದು ಗ್ರಾಮದ ಶಂಕ್ರಪ್ಪ ಅವರು ತಿಳಿಸಿದ್ದಾರೆ.
ಇದೆಲ್ಲದರ ಹಿಂದಿನ ಮರ್ಮವನ್ನು ತಿಳಿಯಲು ಪೊಲೀಸರು, ಮನಶ್ಶಾಸ್ತ್ರಜ್ಞರು, ವೈದ್ಯರು, ಉರಗತಜ್ಞರು ಈ ಗ್ರಾಮಕ್ಕೆ ತೆರಳಿ ಸತ್ಯವನ್ನು ತಿಳಿದುಕೊಳ್ಳಬೇಕಾಗಿದೆ. ಹಾಗೆಯೆ, ಗ್ರಾಮಸ್ಥರಿಗೆ ಧೈರ್ಯವನ್ನು ತುಂಬುವ ಕಾರ್ಯ ನಡೆಯಬೇಕಾಗಿದೆ. ಇದರ ಜೊತೆಗೆ, ಗ್ರಾಮದ ಧೈರ್ಯವಂತ, ವಿದ್ಯಾವಂತ ಯುವಕರು ಮುಂದೆಬಂದು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications