ಈಶ್ವರಪ್ಪ ಸ್ನೇಹಕ್ಕೆ ಎಳ್ಳು ನೀರು ಬಿಟ್ಟ ಬಿಎಸ್ವೈ

ಈಶ್ವರಪ್ಪ ತನ್ನನ್ನು ತಾನು ಮಹಾ ಮೇಧಾವಿ ಎಂದು ತಿಳಿದುಕೊಳ್ಳುವುದು ಬೇಡ. ಮಾಧ್ಯಮಗಳ ಮುಂದೆ ಯಡಿಯೂರಪ್ಪ ಪಕ್ಷ ಬಿಡಬಾರದೆಂದು ಹೇಳಿಕೆ ನೀಡುವ ಈಶ್ವರಪ್ಪ ಹಿಂದೆ ಯಡಿಯೂರಪ್ಪ ಪಕ್ಷ ಬಿಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಅಭಿವೃದ್ದಿ ವಿಚಾರದಲ್ಲಿ ಈಶ್ವರಪ್ಪ ರಾಜಕೀಯ ಮಾಡುತ್ತಿದ್ದಾರೆ. ಇನ್ನು ಮುಂದೆ ಈಶ್ವರಪ್ಪ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಆಗಿರುವ ತನಕ ಅವರ ಜೊತೆ ಯಾವುದೇ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಯಡಿಯೂರಪ್ಪ ಶಪಥ ಮಾಡಿದ್ದಾರೆ.
ನಾನು ಪಕ್ಷದಲ್ಲಿ ಯಾವುದೇ ಹುದ್ದೆ ಅಪೇಕ್ಷಿಸುವುದಿಲ್ಲ. ನನ್ನನ್ನು ಪಕ್ಷದಲ್ಲಿ ತುಳಿಯುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಲೇ ಇದೆ. ಹೈಕಮಾಂಡ್ ಗೆ ಈ ವಿಚಾರ ತಿಳಿದಿದ್ದರೂ ಅದು ಜಾಣ ಕುರುಡು ರಾಜಕಾರಣ ಮಾಡುತ್ತಿದೆ.
ಇದೇ ಡಿಸೆಂಬರ್ ಒಳಗೆ ನಾನು ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ. ಅರುಣ್ ಜೆಟ್ಲೇ ಮತ್ತು ಪ್ರಧಾನ ಜೊತೆ ಮಾತುಕತೆ ನಡೆಸುವ ಅವಶ್ಯಕತೆ ಬಿದ್ದರೆ ದೆಹಲಿ ಹೋಗಿ ಅವರನ್ನು ಭೇಟಿ ಮಾಡುವೆ ಎಂದು ಯಡಿಯೂರಪ್ಪ ಮಾಧ್ಯಮದವರಿಗೆ ಹೇಳಿದ್ದಾರೆ.
ಈ ಮಧ್ಯೆ ಇಬ್ಬರು ನಾಯಕರುಗಳ ಕಿತ್ತಾಟಕ್ಕೆ ಸರಕಾರೀ ಕಾರ್ಯಕ್ರಮವೊಂದು ರದ್ದಾಗಿದೆ. ಶಿವಮೊಗ್ಗದಲ್ಲಿ ಇಂದು ಉದ್ಘಾಟನೆ ಗೊಳ್ಳಬೇಕಾಗಿದ್ದ ಗಾಂಧೀ ಪಾರ್ಕ್ ಕಾರ್ಯಕ್ರಮ ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಜಿಲ್ಲಾಧಿಕಾರಿಗಳು ಪ್ರಕಟಿಸಲಿದ್ದಾರೆ ಎಂದು ಡಿಸಿಎಂ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications