ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆ.6 : ಕರ್ನಾಟಕ ಬಂದ್ ಗೆ ಭಾರಿ ಬೆಂಬಲ ನಿರೀಕ್ಷೆ

By Mahesh
|
Google Oneindia Kannada News

Karnataka Bandh
ಬೆಂಗಳೂರು, ಅ.3: ತಮಿಳುನಾಡಿಗೆ ಕಾವೇರಿ ನೀರು ಹರಿಯಲು ಬಿಟ್ಟಿರುವ ಸರ್ಕಾರದ ವಿರುದ್ಧ ವಿವಿಧ ಕನ್ನಡ ಪರ ಸಂಘಟನೆಗಳು ಅ.6ರಂದು ನಡೆಸಲು ಉದ್ದೇಶಿಸಿರುವ ಕರ್ನಾಟಕ ಬಂದ್ ಗೆ ಭಾರಿ ಬೆಂಬಲ ಸಿಗುವ ನಿರೀಕ್ಷೆಯಿದೆ ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಅಕ್ಟೋಬರ್ 6 ರ ಕರ್ನಾಟಕ ಬಂದ್ ಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಂಸ್ಥೆಗಳು, ಕನ್ನಡ ಚಿತ್ರೋದ್ಯಮ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಶಾಲಾ, ಕಾಲೇಜು ರಜೆ ಘೋಷಿಸುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ ಅಯ್ಯಪ್ಪ ಅವರು ಇನ್ನೂ ಪ್ರಕಟಣೆ ನೀಡಿಲ್ಲ. ಕೆಲ ಖಾಸಗಿ ಶಾಲೆಗಳು ರಜೆ ನೀಡಲು ಮುಂದಾಗಿವೆ.

ಮೆಡಿಕಲ್ ಶಾಪ್, ಆಸ್ಪತ್ರೆ ತೆಗೆದಿರುತ್ತದೆ. ಹೋಟೆಲ್ ಗಳು, ಅಂಗಡಿ ಮುಂಗಟ್ಟುಗಳು ಬಹುತೇಕ ಮುಚ್ಚುವ ಸಾಧ್ಯತೆಯಿದೆ. ಬೆಳ್ಳಂಬೆಳ್ಳಗೆ ನಂದಿನ ಹಾಲು, ದಿನಪತ್ರಿಕೆ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ. ಕೆಲ ಆಟೋರಿಕ್ಷಾಗಳು ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದೆ.

ಐಟಿ ಬಿಟಿ ಹಾಗೂ ಬಹುತೇಕ ಖಾಸಗಿ ಸಂಸ್ಥೆಗಳಿಗೆ ಶನಿವಾರ ರಜೆ ದಿನವಾದ್ದರಿಂದ ಬಂದ್ ಬಿಸಿಯಿಂದ ಬಚಾವಾಗಿದ್ದಾರೆ. ಆದರೂ, ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ಸೌಲಭ್ಯ ಲಾಭ ಪಡೆದು ಕೆಲಸ ನಿರ್ವಹಿಸುವ ಸಾಧ್ಯತೆಯಿದೆ.

ಬಂದ್ ಗೆ ಬೆಂಬಲ: ಕಾವೇರಿ ವಿವಾದ ಬಗೆಹರಿಸದೆ ನದಿ ನೀರು ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅ.1ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕಿನಿಂದ ರಾಜಭವನದ ವರೆಗೆ ಬೃಹತ್ ರಾಜಭವನ್ ಚಲೋ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯ ಪ್ರತಿಕ್ಷಣದ ಮಾಹಿತಿಯನ್ನು ಫೇಸ್ ಬುಕ್ ನ ಪುಟದಲ್ಲಿ ಹಾಕುವ ಮೂಲಕ ಹೆಚ್ಚೆಚ್ಚು ಜನರಿಗೆ ಪ್ರತಿಭಟನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಅತ್ತ ಮೈಸೂರು ಮಂಡ್ಯ ಭಾಗದ ರೈತರು ಹಿರಿಯ ಮುಖಂಡ ಮಾದೇಗೌಡ ಅವರ ನೇತೃತ್ವದಲ್ಲಿ ಕೆಆರ್ ಎಸ್ ಮುತ್ತಿಗೆ, ಅಮರಣಾಂತ ಉಪವಾಸ ಮುಂತಾದ ಪ್ರತಿಭಟನೆ ಜಾರಿಗೊಳ್ಳಲಿದೆ.

ಕರ್ನಾಟಕ ರಸ್ತೆ ಸಾರಿಗೆ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಸಿ. ಚನ್ನೇಗೌಡ ಅವರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಕರಾರಸಾಸಂ ನ ನಾಲ್ಕುವಿಭಾಗಗಳು ಬಸ್ ಸಂಚಾರ ಸ್ಥಗಿತಗೊಳಿಸಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಲಿದೆ ಎಂದಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಕುಡಿಯುವ ನೀರಿನ ವಿಷಯದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಚಿತ್ರೋದ್ಯಮ ಅ.6 ರಂದು ಸಂಪೂರ್ಣ ಬಂದ್ ಆಚರಿಸಲಿದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಅವರು ಹೇಳಿದ್ದಾರೆ.

English summary
Pro Kannada Organization called Karnataka Bandh on Saturday(Oct 6) to protest against Cauvery tribunal decision to release water to Tamil Nadu. KSRTC, BMTC services are likely to be affected. KFCC has expressed support for the Statewide bandh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X