ಆರ್ಥಿಕ ಬಿಕ್ಕಟ್ಟಿಗೆ ಕಿಂಗ್ ಫಿಷರ್ ಉದ್ಯೋಗಿ ಪತ್ನಿ ಬಲಿ

ದೆಹಲಿಯ ಮಂಗಳಪುರಿ ಪ್ರದೇಶದ ನಿವಾಸಿ 45 ವರ್ಷದ ಸುಶ್ಮಿತಾ ಚಕ್ರವರ್ತಿ ಅವರು ತಮ್ಮ ನಿವಾಸದಲ್ಲಿ ಗುರುವಾರ (ಅ.4) ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಾಳಿ ಭಾಷೆಯಲ್ಲಿ ಆತ್ಮಹತ್ಯೆ ಪತ್ರವನ್ನು ಬರೆದಿರುವ ಸುಶ್ಮಿತಾ,
'ನನ್ನ ಪತಿ ಹಾಗೂ ಪುತ್ರನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಆದರೆ, ಕಳೆದ ಆರು ತಿಂಗಳಿನಿಂದ ನನ್ನ ಪತಿ ಸಂಬಳವಿಲ್ಲದೆ ಮನೆ ನಡೆಸಲು ಆಗದೆ ಪಟ್ಟ ಕಷ್ಟ ನೆನೆದಾಗ ನನ್ನ ನಿರ್ಧಾರ ಸರಿ ಎನಿಸುತ್ತದೆ. ತೀವ್ರವಾದ ಆರ್ಥಿಕ ಸಂಕಷ್ಟದಲ್ಲಿ ನರಳಿ ನರಳಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಸುಶ್ಮಿತಾ ಅವರ ಪತಿ ಮನಸ್ ಚಕ್ರವರ್ತಿ ಅವರು ಕಿಂಗ್ ಫಿಷಶ್ ಏರ್ ಲೈನ್ಸ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದಾರೆ. ಆರ್ಥಿಕ ಸಂಕಷ್ಟದ ಸುಳಿಯಲ್ಲಿರುವ ಕಿಂಗ್ ಫಿಷರ್ ನ ಸುಮಾರು 270 ಇಂಜಿನಿಯರ್ ಗಳ ಜೊತೆ ಮನಸ್ ಚಕ್ರವರ್ತಿ ಕೂಡಾ ಕಳೆದ ಶನಿವಾರದಿಂದ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಸೋಮವಾರ ಕಿಂಗ್ ಫಿಷರ್ ಪಾರ್ಶ್ವ ಲಾಕ್ ಔಟ್ ಎಂದು ಘೋಷಿಸಿದೆ. ಕಳೆದ ಮೂರು ದಿನಗಳಿಂದ ಕಿಂಗ್ ಫಿಷರ್ ವಿಮಾನಗಳು ನೆಲಕಚ್ಚಿ ನಿಂತಿದೆ.
ಕಿಂಗ್ ಫಿಷರ್ ವಿಮಾನಯಾನ ಸಂಸ್ಥೆ ತನ್ನ 4000 ಉದ್ಯೋಗಿಗಳ ಪೈಕಿ 2000 ಉದ್ಯೋಗಿಗಳಿಗೆ ಈ ವರ್ಷದ ಮಾರ್ಚ್ ತಿಂಗಳಿನ ತನಕ ಸಂಬಳ ನೀಡಿದೆ. ನಂತರ ಯಾರೊಬ್ಬರಿಗೂ ಸಂಬಳ ನೀಡುವಲ್ಲಿ ವಿಫಲವಾಗಿದೆ.
ಸುಮಾರು 7000 ಕೋಟಿ ರು.ಗೂ ಅಧಿಕ ಸಾಲವನ್ನು ಕಿಂಗ್ ಫಿಷರ್ ಸಂಸ್ಥೆ ತಲೆಮೇಲೆ ಹೊತ್ತುಕೊಂಡಿದೆ. ಉದ್ಯೋಗಿಗಳಿಗೆ ಸಂಬಳ ನೀಡದೆ, ಬ್ಯಾಂಕ್ ಸಾಲ ನೀಡದಿರುವ ಕಿಂಗ್ ಫಿಷರ್ ಸಂಸ್ಥೆ ಮತ್ತೊಮ್ಮೆ ವಿಮಾನಯಾನ ಆರಂಭಿಸುವುದು ಕಷ್ಟ ಎನಿಸಿದೆ.
ಕಿಂಗ್ ಫಿಷರ್ ಸಂಸ್ಥೆ ವಿಮಾನ ಹಾರಾಟ ಆರಂಭಿಸಲು Directorate General of Civil Aviation (DGCA) ನಿಂದ ಮತ್ತೊಮ್ಮೆ ಅನುಮತಿ ಪಡೆಯಬೇಕಾಗುತ್ತದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ಸೂಚಿಸಿದೆ. ಈ ನಡುವೆ ಒಂದು ತಿಂಗಳ ಸಂಬಳ ನೀಡುವ ಆಫರ್ ನೊಂದಿಗೆ ಉದ್ಯೋಗಿಗಳ ಜೊತೆ ಸಂಧಾನ ನಡೆಸಲು ಯತ್ನಿಸಿದ ಕಿಂಗ್ ಫಿಷರ್ ಸೋತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications