ಕರ್ನಾಟಕ ಬಂದ್:ಅಭೂತಪೂರ್ವ ಕಟ್ಟೆಚ್ಚರ,ಭದ್ರತೆ

ಬಂದ್ ಶಾಂತಿಯುತವಾಗಿ ನಡೆಯಲು ಪೋಲೀಸ್ ಇಲಾಖೆ ಟೊಂಕ ಕಟ್ಟಿ ನಿಂತಿದ್ದು ಬೆಂಗಳೂರು ನಗರದಲ್ಲಿ ಕಿರಿಯ ಅಧಿಕಾರಿಯಿಂದ ಹಿಡಿದು ಕಮಿಷನರ್ ವರೆಗೆ ಎಲ್ಲರೂ ಕರ್ತವ್ಯದಲ್ಲಿರುತ್ತಾರೆ ಎಂದು ಬೆಂಗಳೂರು ಪೋಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಹೇಳಿದ್ದಾರೆ.
ಮುಖ್ಯವಾಗಿ ಬೆಂಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿರುವುದರಿಂದ BSF ನ ಎರಡು ತುಕುಡಿ ಮತ್ತು RAF ನ ಒಂದು ತುಕುಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಪೋಲೀಸ್ ಮಹಾ ನಿರ್ದೇಶಕ ಬಿಪಿನ್ ಗೋಪಾಲಕೃಷ್ಣ ತಿಳಿಸಿದ್ದಾರೆ.
ಇದಲ್ಲದೆ ರಾಜ್ಯಾದ್ಯಂತ ರಾಜ್ಯ ಮೀಸಲು ಪಡೆ, ಸಶಸ್ತ್ರ ಪಡೆ, ಗೃಹರಕ್ಷಕ ದಳ, ಸಿವಿಲ್ ಪೋಲೀಸ್ ಸೇರಿ ಸುಮಾರು 90 ಸಾವಿರ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಗೋಪಾಲಕೃಷ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಿರ್ಜಿ ಪತ್ರಿಕಾಘೋಷ್ಠಿಯ ಆಯ್ದ ಮುಖ್ಯಾಂಶಗಳು
* ಬಂದ್ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ 15 ಸಾವಿರ ಪೋಲೀಸರನ್ನು ನಿಯೋಜಿಸಲಾಗಿದೆ.
* 36 ಕೆಎಸ್ಆರ್ಪಿ ತುಕುಡಿಯನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲಾಗುತ್ತದೆ.
* ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ
* ಪ್ರತಿಭಟನೆಯ ವಿಡಿಯೋ ಚಿತ್ರೀಕರಣ ತೆಗೆಯಲಾಗುವುದು.
* ಬಸ್ ಸಂಚಾರ ವ್ಯವಸ್ಥೆ ಸಾರಿಗೆ ಇಲಾಖೆಯ ವಿವೇಚನೆಗೆ ಬಿಟ್ಟಿದ್ದು. ಪೋಲೀಸ್ ಇಲಾಖೆ ಭದ್ರತೆ ನೀಡಲು ಸಿದ್ದ.
* ನಗರದ ಎಲ್ಲಾ ಮೂಲೆಗಳಲ್ಲೂ ಪೋಲೀಸ್ ಬಂದೋಬಸ್ತ್ ನೀಡಲಾಗುವುದು.
* ಇಂದು (ಅ 5) ರಾತ್ರಿಯಿಂದಲೇ ಪೊಲೀಸರು ಗಸ್ತು ತಿರುಗಲಿದ್ದಾರೆ.
* ಯಾವುದೇ ವದಂತಿಗಳಿಗೆ ಭಯ ಪಡಬೇಡಿ.
* ಬಂದ್ ವೇಳೆ ಹಿಂಸಾಚಾರಕ್ಕೆ ಮುಂದಾಗುವವರ ಅಥವಾ ಪ್ರಚೋದಿಸುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications