ನೀರು ಸಾಲುತ್ತಿಲ್ಲ ತಂಜಾವೂರಲ್ಲಿ ತಮಿಳರ ಆಕ್ರೋಶ

9 ಸಾವಿರ ಕ್ಯೂಸೆಕ್ಸ್ (cubic feet per second) ಯಾವ ಮೂಲೆಗೂ ಸಾಲುವುದಿಲ್ಲ 2 ಟಿಎಂಸಿ (thousand million cubic feet) ನೀರು ಹರಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿದೆ.
ಎಂಡಿಎಂಕೆ,, ವಿಡುದಲೈ ಸಿರುಥೈಗಳ್ ಅಮೈಪ್ಪು ಹಾಗೂ ನಾಮ್ ತಮಿಳರ್ ಇಯಾಕ್ಕಮ್ ಮುಂತಾದ ಸಂಘಟನೆಗಳು ತಂಜಾವೂರು, ತಿರುವರೂರು, ಕುಂಭಕೋಣಂ, ನಾಗಪಟ್ಟಣ್ಣಂ ಹಾಗೂ ಇನ್ನಿತರ ಕಾವೇರಿ ಜಲಾನಯನ ಪ್ರದೇಶದ ಹತ್ತಿರ ಪ್ರತಿಭಟನೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಕಾವೇರಿ ನೀರನ್ನು ಹರಿಸಿರುವುದರಿಂದ ಮೆಟ್ಟೂರು ಅಣೆಕಟ್ಟಿನಲ್ಲಿ ಒಳ ಹರಿವು ಹೆಚ್ಚಿರುವುದು ಒಳ್ಳೆ ಸಂಗತಿ ಅದರೆ, ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಕಾಲುವೆಗಳಿಗೆ ಇನ್ನೂ ನೀರು ಹರಿದು ಬಂದಿಲ್ಲ.
ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬಂದರೆ ಎಲ್ಲೆಡೆ ರೈತರು ತಮ್ಮ ಚಟುವಟಿಕೆ ಆರಂಭಿಸಬಹುದು ಇಲ್ಲದಿದ್ದರೆ ಕಷ್ಟ. ಸುಮಾರು 15 ಲಕ್ಷ ಎಕರೆ ಭೂಮಿಗೆ ನೀರು ಬೇಕಾಗಿದೆ ಎಂದು ಸಂಘಟನೆಗಳು ಹೇಳಿದೆ.
ತಂಜಾವೂರಿನಲ್ಲಿ ಮರಳು ಗಣಿಗಾರಿಕೆ ಮಾಫಿಯಾದಿಂದ ಅನೇಕ ಕಡೆ ನೀರು ಸರಿಯಾಗಿ ಹರಿಯದೆ ತೊಂದರೆ ಉಂಟಾಗಿರುವುದನ್ನು ಜಲಮಂಡಳಿ ಅಧಿಕಾರಿಗಳು ಕೂಡಾ ಒಪ್ಪಿಕೊಂಡಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ನೀರು ಬಿಡಲಾಗಿದೆ. ಆದರೆ ಕಾವೇರಿ ನೀರು ಆ ಭಾಗದ ರೈತರ ಉಪಯೋಗಕ್ಕೆ ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ
.
ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ಮುಖ್ಯ ನಾಲೆಗಳು ಗುಂಡಿ ಬಿದ್ದಿವೆ. ಮುಖ್ಯ ನಾಲೆಗಳ ಮಟ್ಟ ಎರಡರಿಂದ ಮೂರು ಅಡಿಗಳಷ್ಟು ಆಳಕ್ಕೆ ಕುಸಿದಿದೆ.
ಪರಿಣಾಮವಾಗಿ ಮುಖ್ಯ ನಾಲೆಯಲ್ಲಿ ಎರಡು ಅಡಿ ಕೆಳಗೆ ನೀರು ಹರಿಯುತ್ತಿರುವುದರಿಂದ ಅದು ನೀರಾವರಿ ನಾಲೆಗಳಿಗೆ ತಲುಪುತ್ತಿಲ್ಲ. ನೀರು ಪೋಲಾಗುತ್ತಿರುವುದರಿಂದ ರೈತರೂ ಕಂಗಾಲಾಗಿದ್ದಾರೆ. ಎಂದು ಡಿಎಂಕೆ ಮುಖಂಡ ಕರುಣಾನಿಧಿ ಕೂಡಾ ಕಳವಳ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications