ಗಾಯಕಿ ಆಶಾ ಭೋಂಸ್ಲೆ ಪುತ್ರಿ ವರ್ಷಾ ದುರಂತ ಅಂತ್ಯ

ವರ್ಷಾ ಅವರಿದ್ದ ನಿವಾಸದಿಂದ ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಗುಂಡು ಹಾರಿಸಿದ ಶಬ್ದ ಕೇಳಿಸಿದೆ. ತಕ್ಷಣವೇ ನೆರೆಮನೆಯವರು ವರ್ಷಾ ಮನೆಗೆ ಧಾವಿಸಿದ್ದಾರೆ. ಆದರೆ, ಮನೆ ಒಳಗಿನಿಂದ ಬಾಗಿಲು ಹಾಕಿರುವುದು ಕಂಡು ಬಂದಿದೆ. ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಪೊಲೀಸರು ಬಂದು ಬಾಗಿಲು ಒಡೆದು ಒಳಗೆ ಬಂದು ನೋಡಿದರೆ, ವರ್ಷಾ ಅವರು ರಕ್ತದ ಮಡುವಿನಲ್ಲಿ ಶವವಾಗಿ ಮಲಗಿರುವುದು ಕಂಡು ಬಂದಿದೆ. ಘಟನೆ ನಡೆದ ಸ್ಥಳದಲ್ಲಿ ಅತ್ಮಹತ್ಯಾ ಪತ್ರವೊಂದು ಸಿಕ್ಕಿದೆ. 'ಜೀವನದಲ್ಲಿ ಜಿಗುಪ್ಸೆ ಹೊಂದಿ, ಮಾನಸಿಕ ತೊಳಲಾಟ ಅನುಭವಿಸಲು ಸಾಧ್ಯವಾಗದೆ ಸಾಯಲು ನಿರ್ಧರಿಸಿದೆ' ಎಂದು ಪತ್ರದಲ್ಲಿ ಬರೆಯಲ್ಪಟ್ಟಿದೆ.
ಆದರೆ, ವರ್ಷಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಿಂಗಾಪುರದಲ್ಲಿ ಮರಾಠಿ ಸಾಂಸ್ಕೃತಿಕ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಶಾ ಭೋಂಸ್ಲೆ ಅವರು ತೆರಳಿದ್ದಾರೆ. 2008ರಲ್ಲಿ ಆತ್ಮಹತ್ಯೆಗೆ ಯತ್ನಿಸಿ ಸಾವಿನ ದವಡೆಯಿಂದ ವರ್ಷಾ ಪಾರಾಗಿದ್ದರು.
ಮುಂಬೈನ ಪ್ರತಿಷ್ಠಿತ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ವರ್ಷಾ ಅವರು ಹವ್ಯಾಸಿ ಬರಹಗಾರ್ತಿ ವರ್ಷಾ ಅವರು ಈ ಮುಂಚೆ ನಿದ್ದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ವರ್ಷಾ ತಮ್ಮ ತಾಯಿ ಆಶಾ ಜೊತೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ವರ್ಷಾರನ್ನು ಗಮನಿಸಿದ ಪರಿಚಾರಕಿ ಮನೆಯವರಿಗೆ ಸುದ್ದಿ ತಿಳಿಸಿದರು. ಆ ಕೂಡಲೆ ಆಕೆಯನ್ನು ಮುಂಬೈನ ಜಲ್ಸೋಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
'ರೀಡೀಫ್' ಮತ್ತು 'ದಿ ಸಂಡೇ ಅಬ್ಸರ್ವರ್' ಪತ್ರಿಕೆಗಳಲ್ಲಿ ಆಕೆ ಅಂಕಣಕಾರ್ತಿಯಾಗಿ ವರ್ಷಾ ಕಾರ್ಯನಿರ್ವಹಿಸುತ್ತಿದ್ದರು. ಮರಾಠಿ ಸಿನಿಮಾಗಳಲ್ಲಿ ಗಾಯಕಿಯಾಗಿ ಕೂಡಾ ಪರಿಚಿತರಾಗಿದ್ದಾರೆ. ಹೇಮಂತ್ ಕೆಂಕ್ರೆ ಎಂಬುವವರನ್ನು ಮದುವೆಯಾಗಿದ್ದ ವರ್ಷಾ ಅವರು ವಿವಾಹ ವಿಚ್ಛೇದನ ಪಡೆದಿದ್ದರು.
ವರ್ಷಾ ಅವರು ಗಾಯಕಿ ಆಶಾ ಭೋಂಸ್ಲೆ ಹಾಗೂ ಗಣಪತ್ ರಾವ್ (ಆಶಾ ಅವರ ಮೊದಲ ಪತಿ) ದಂಪತಿಯ ಎರಡನೇ ಪುತ್ರಿಯಾಗಿದ್ದಾರೆ. 2008, 2010 ರಲ್ಲಿ ವರ್ಷಾ ಅವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಗ್ಗೆ ತಿಳಿದಿದ್ದರೂ ವರ್ಷಾ ಅವರ ಮನೆ ಕೆಲಸಗಾರರು ಪಿಸ್ತೂಲ್ ಸಿಗದಂತೆ ಇಡುವಲ್ಲಿ ವಿಫಲವಾಗಿದ್ದೇ ವರ್ಷಾ ಸಾವಿಗೆ ಕಾರಣ ಎಂಬ ಸುದ್ದಿಯೂ ಇದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications