ಬೆಳಗಾವಿ ಸುವರ್ಣ ವಿಧಾನ ಸೌಧ ಉದ್ಘಾಟನೆ ಸಜ್ಜು
ಬೆಳಗಾವಿ, ಅ.9: ಇಲ್ಲಿನ ಹಲಗಾ ಬಳಿ ನೂತನವಾಗಿ ನಿರ್ಮಿಸಲಾಗಿರುವ ಸುವರ್ಣಸೌಧ ಕಟ್ಟಡದ ಉದ್ಘಾಟನಾ ಸಮಾರಂಭ ಅಕ್ಟೋಬರ್ 11 ಗುರುವಾರ ಮಧ್ಯಾಹ್ನ 12-30 ಗಂಟೆಗೆ ನಡೆಯಲಿದೆ. ರಾಷ್ಟ್ರಪತಿಯ ಪ್ರಣಬ್ ಮುಖರ್ಜಿ ಅವರು ಸುವರ್ಣ ವಿಧಾನ ಸೌಧವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಷ್ಟ್ರಪತಿಯವರು ಗುರುವಾರ(ಅ.11) ಮಧ್ಯಾಹ್ನ 01-55 ಗಂಟೆಗೆ ನೂತನ ಸುವರ್ಣ ಸೌಧದ ವಿಧಾನ ಸಭೆ ಸಭಾಂಗಣದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವಿಧಾನ ಸಭೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕಂಬಾರ ಅವರಿಗೆ ಜ್ಞಾನಪೀಠ: ಕನ್ನಡದ ಹಿರಿಯ ಸಾಹಿತಿ ಡಾ: ಚಂದ್ರಶೇಖರ ಕಂಬಾರ ಅವರಿಗೆ ದೇಶದ ಅತ್ಯುನ್ನುತ ಸಾಹಿತ್ಯದ ಗೌರವವಾದ, 2010 ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಯನ್ನು ಅಕ್ಟೋಬರ್ 11 ರಂದು ಸಂಜೆ 5-30 ಕ್ಕೆ ಬೆಳಗಾವಿಯ ಗಾಂಧಿ ಭವನ ಸಭಾಂಗಣದಲ್ಲಿ ನೀಡಲಾಗುತ್ತದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮುಖ್ಯ ಅತಿಥಿಗಳಾಗಿ ಈ ಸಮಾರಂಭದಲ್ಲಿ ಪಾಲ್ಗೊಂಡು ಜ್ಞಾನಪೀಠ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಇಂಧನ ಕಾರ್ಪೋರೇಟ್ ವ್ಯವಹಾರಗಳ ಸಚಿವ ಡಾ. ಎಂ. ವೀರಪ್ಪ ಮೊಯಿಲಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಗೋವಿಂದ ಎಂ. ಕಾರಜೋಳ ಮುಂತಾದ ಗಣ್ಯರು ಉಪಸ್ಥಿತರಿರುತ್ತಾರೆ.
ಈ ಕಾರ್ಯಕ್ರಮದ ಭಾಗವಾಗಿ ಡಾ: ಚಂದ್ರಶೇಖರ್ ಕಂಬಾರ ಅವರ ಕುರಿತು ವಾರ್ತಾ ಇಲಾಖೆ ನಿರ್ಮಿಸಿರುವ 28 ನಿಮಿಷಗಳ ಸಾಕ್ಷ್ಯಚಿತ್ರವನ್ನು ಅಕ್ಟೋಬರ್ 10 ರಂದು ರಾತ್ರಿ 9-30 ಗಂಟೆಯಿಂದ 10-00 ಗಂಟೆಯವರೆಗೆ ಬೆಂಗಳೂರು ದೂರದರ್ಶನ ಕೇಂದ್ರದ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಸುಮಾರು 391.00 ಕೋಟಿ ವೆಚ್ಚದ ಸುವರ್ಣ ಸೌಧ ನಿರ್ಮಾಣ ಕಾಮಗಾರಿಯನ್ನು ಮೆ: ಬಿ.ಜಿ.ಶಿರ್ಕೆ ಕನ್ಸ್ಟ್ರಕ್ಸನ್ ಟೆಕ್ನಾಲಜಿ ಪ್ರೈ.ಲಿ. ಪುಣೆ ಸಂಸ್ಥೆ ಅಚ್ಚುಕಟ್ಟಾಗಿ ಪೂರೈಸಿದೆ.
ಈ ಸುವರ್ಣ ಸೌಧದಲ್ಲಿ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಹಾಗೂ ಉಪಸಭಾಪತಿಗಳ ಕೊಠಡಿಗಳು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸಚಿವಾಲಯಗಳು, ಮುಖ್ಯಮಂತ್ರಿಗಳ ಕೊಠಡಿ ಹಾಗೂ ಕಚೇರಿ, ಸಚಿವರುಗಳಿಗಾಗಿ 38 ಕೊಠಡಿಗಳು ಕ್ಯಾಬಿನೇಟ್ ಹಾಲ್, ಮೀಟಿಂಗ್ ಹಾಲ್ ಹಾಗೂ ಆಡಳಿತ ಕಚೇರಿಗಳನ್ನು ಹೊಂದಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications