ಕಾವೇರಿಗಾಗಿ ಕ್ಯಾತೆ: ಸುಪ್ರೀಂಗೆ ಪುದುಚೇರಿ ಅರ್ಜಿ

ಕಾವೇರಿ ನದಿ ನೀರು ತಮಿಳುನಾಡು ಮಾತ್ರವಲ್ಲದೆ ಪುದುಚೇರಿ ಹಾಗೂ ಕೇರಳಕ್ಕೂ ಹಂಚಿಕೆಯಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದ ಪುದುಚೇರಿ ಈಗ ನಮಗೂ 1000 ಕ್ಯೂಸೆಕ್ಸ್ ನೀರಿನ ಅವಶ್ಯಕತೆ ಇದೆ ತಮಿಳುನಾಡು ಸಹಕಾರರಿಂದ ನಮಗೆ ನೀರು ಒದಗಿಸಿಕೊಡಿ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ಅರ್ಜಿ ಸ್ವೀಕರಿಸಿದ ಎನ್ ಕೆ ಜೈನ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ಮುಂದೂಡಿದೆ. ಆದರೆ, ತಮಿಳುನಾಡು ಬೆಂಬಲಿತ ಪುದುಚೇರಿ ಅಲ್ಲಿ ತನಕ ಸುಮ್ಮನೆ ಕೂರುವ ಸಾಧ್ಯತೆ ಕಮ್ಮಿ ಎನ್ನಲಾಗಿದೆ.
ತಮಿಳುನಾಡು ಕುಮ್ಮಕ್ಕು?: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಕಾವೇರಿ ನದಿಯ ಕೊನೆಯ ಅಂಚನ್ನು ಹಿಡಿದು ಎಳೆಯದೆ ಸುಮ್ಮನಿದ್ದದ್ದು ಈಗ ಏಕಾಏಕಿ ನೀರು ಬಿಡು ಎನ್ನುತ್ತಿರುವುದು ಏಕೆ? ಎಂಬ ಪ್ರಶ್ನೆ ಕಾಡುತ್ತದೆ. ಕಾವೇರಿ ನದಿ ಪ್ರಾಧಿಕಾರದ ಸಭೆಗೂ ಮುನ್ನ ಸೆಪ್ಟೆಂಬರ್ ತಿಂಗಳಿನಲ್ಲೇ ಪುದುಚೇರಿ ಉಸ್ತುವಾರಿ ರಾಮಸ್ವಾಮಿ ಅವರು ತಮ್ಮ ರಾಜ್ಯದ ಕಾರೈಕಲ್ ಪ್ರದೇಶದ ಬೆಳೆಗೆ ನೀರು ಬೇಕು ಎಂದು ಹೇಳಿದ್ದರು.
ಆದರೆ, ಇಂತಿಷ್ಟೇ ನೀರು ಬೇಕು. ತಮಿಳುನಾಡು ಸಹಾಯ ಬೇಕು ಎಂದು ಕೇಳಿರಲಿಲ್ಲ. ಅಲ್ಲದೆ, ಕರ್ನಾಟಕದಿಂದ ಕಾವೇರಿ ನೀರಿಗಾಗಿ ಒತ್ತಾಯಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ, ಈಗ ತಮಿಳುನಾಡು ಬೆಂಬಲದಿಂದ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ನಡುವೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಿರುವ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿಯನ್ನು ಬುಧವಾರ(ಅ.10) ಸಲ್ಲಿಸಲಿದೆ ಎಂದು ತಮಿಳುನಾಡು ಪರ ವಕೀಲ ವೈದ್ಯನಾಥನ್ ಹೇಳಿದ್ದಾರೆ.
ಕಾವೇರಿ ನದಿ ಪ್ರಾಧಿಕಾರ ನೀಡಿರುವ ಆದೇಶವನ್ನು ಪಾಲಿಸಿ ಕರ್ನಾಟಕ ಸರ್ಕಾರ 9 ಸಾವಿರ ಕ್ಯೂಸೆಕ್ಸ್ ಗೂ ಅಧಿಕ ನೀರು ಬಿಟ್ಟಿರುವುದರಿಂದ ಮಧ್ಯಂತರ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತ್ತು.
ಈ ನಡುವೆ ಪ್ರಾಧಿಕಾರ ನೇಮಿಸಿದ ನೀರಾವರಿ ಅಧ್ಯಯನ ತಂಡ ತನ್ನ ವರದಿಯನ್ನು ಅಕ್ಟೋಬರ್ 11 ರಂದು CRAಗೆ ಸಲ್ಲಿಸುವ ಸಾಧ್ಯತೆಯಿದ್ದು, ನಂತರವಷ್ಟೇ ಪ್ರಧಾನಿ ಮನಮೋಹನ್ ಸಿಂಗ್ ಅವರು ಎರಡೂ ರಾಜ್ಯಗಳ ಮುಖಂಡರೊಡನೆ ಸಭೆ ನಡೆಸಲಿದ್ದಾರೆ ಎಂಬ ಸುದ್ದಿಯಿದೆ.
ಈ ಸಭೆಯಲ್ಲಿ ತಮಿಳುನಾಡು ಜೊತೆಗೂಡಿ ಪುದುಚೇರಿ ಕೂಡಾ ತನ್ನ ಪಾಲಿನ ನೀರಿಗಾಗಿ ಹಾಹಾಕಾರ ಎಬ್ಬಿಸುವ ಲಕ್ಷಣಗಳು ಗೋಚರಿಸಿದೆ. ಕೇರಳ ರಾಜ್ಯದ ಕಡೆಯಿಂದ ಯಾವುದೇ ಕೂಗು ಎದ್ದಿಲ್ಲದಿರುವುದು ಕರ್ನಾಟಕದ ಪಾಲಿಗೆ ನಿರಾಳವಾದ ಸಂಗತಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications