ರಾಬರ್ಟ್ ವದ್ರಾ ಶುದ್ಧಹಸ್ತ : ಭಾರದ್ವಾಜ್ ಪ್ರಮಾಣಪತ್ರ

ಭ್ರಷ್ಟಾಚಾರದ ವಿರುದ್ಧ ಭಾರತ ಸಂಘಟನೆಯ ಸದಸ್ಯರಾದ ಅರವಿಂದ್ ಕೇಜ್ರಿವಾಲ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರು, ಸೋನಿಯಾ ಗಾಂಧಿ ಅವರ ಅಳಿಯ, ಪ್ರಿಯಾಂಕಾ ಗಾಂಧಿ ವದ್ರಾ ಗಂಡ ರಾಬರ್ಟ್ ವದ್ರಾ ಅವರು ಹರ್ಯಾಣಾದಲ್ಲಿ ಡಿಎಲ್ಎಫ್ ರಿಯಲ್ ಎಸ್ಟೇಟ್ ಸಂಸ್ಥೆಯ ಜೊತೆ ಕೈಜೋಡಿಸಿ ಕೋಟ್ಯಂತರ ಬೆಲೆ ಬಾಳುವ ಆಸ್ತಿಯನ್ನು ಅತ್ಯಂತ ಕಡಿಮೆ ಬೆಲೆಗೆ ಕಬಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಹಿಂದೆ ಕೇಂದ್ರ ಸಂಪುಟದಲ್ಲಿ ಕಾನೂನು ಸಚಿವರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಈ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು, ಇಂದಿರಾ ಗಾಂಧಿ ಕಾಲದಿಂದ ಸೋನಿಯಾ ಗಾಂಧಿಯ ಕಾಲದವರೆಗೆ ಗಾಂಧಿ ಕುಟುಂಬದ ವಿರುದ್ಧ ಅನೇಕರು ಅನೇಕ ರೀತಿಯ ಆರೋಪಗಳನ್ನು ಹೊರಿಸುತ್ತಲೇ ಬಂದಿದ್ದಾರೆ. ಆದರೆ, ಆ ಎಲ್ಲ ಆರೋಪಗಳು ಸುಳ್ಳಾಗಿ ಪರಿಣಮಿಸಿವೆ ಎಂದು ಅವರು ಹೇಳಿದ್ದಾರೆ.
"ಅರವಿಂದ್ ಕೇಜ್ರಿವಾಲ್ ಕಾನೂನು ತಜ್ಞರೇನು? ಶಾಸನ ರಚಿಸುವ ಕಾರ್ಯಕ್ಕೆ ಇವರೇಕೆ ಕೈ ಹಾಕುತ್ತಿದ್ದಾರೆ? ನಾನೇನಾದರೂ ಕಾನೂನು ಮಂತ್ರಿಯಾಗಿದ್ದರೆ ಅರವಿಂದ್ ಕೇಜ್ರಿವಾಲ್ ಅಂಥವರಿಗೆ ಯಾವುದೇ ಕಾನೂನು ರಚಿಸಲು ಅವಕಾಶವನ್ನೇ ನೀಡುತ್ತಿರಲಿಲ್ಲ" ಎಂದು ಅವರು ಕೇಜ್ರಿವಾಲ್ ಅವರನ್ನು ಹಂಸರಾಜ್ ಭಾರದ್ವಾಜ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಮತ್ತಷ್ಟು ಆರೋಪ : ರಾಬರ್ಟ್ ವದ್ರಾ ಅವರ ಮೇಲೆ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಮತ್ತಷ್ಟು ಆರೋಪಗಳನ್ನು ಹೊರಿಸಿ, ಇನ್ನಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ವಧ್ರಾ ಅವರಿಗೆ ಡಿಎಲ್ಎಫ್ ರಿಯಲ್ ಎಸ್ಟೇಟ್ ಸಂಸ್ಥೆ ಬಡ್ಡಿರಹಿತ ಸಾಲ ನೀಡಿದೆ ಎಂದು ಆರೋಪಿಸಿರುವ ಅವರು, ಈ ಹಗರಣಕ್ಕೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಹಗರಣದಲ್ಲಿ ಕಾಂಗ್ರೆಸ್ ನಾಯಕರ ನೇರ ಕೈವಾಡ ಇರದಿದ್ದರೆ, ಕಂಡಕಂಡ ಕಾಂಗ್ರೆಸ್ ನಾಯಕರೆಲ್ಲ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬರ್ಟ್ ವದ್ರಾ ಅವರನ್ನು ಬೆಂಬಲಿಸಿ ಹೇಳಿಕೆಗಳೇಕೆ ನೀಡುತ್ತಿದ್ದಾರೆ ಎಂದು ಕೇಜ್ರಿವಾಲ್ ಕಿಡಿ ಕಾರಿದ್ದಾರೆ. ಇಬ್ಬರು ಖಾಸಗಿ ವ್ಯಕ್ತಿಗಳ ನಡುವಿನ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಚಿದಂಬರಂ ಅವರು ರಾಬರ್ಟ್ ವದ್ರಾ ಅವರ ಆದಾಯ ತೆರಿಗೆ ಅಸೆಸ್ಮೆಂಟ್ ಅಧಿಕಾರಿಯೆ ಎಂದು ಪ್ರಶ್ನಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications