ಮಿಲಿಟರಿ ಅಲ್ಲ ಸುಪ್ರೀಂ ಆದೇಶಕ್ಕೂ ಜಗ್ಗಲ್ಲ : ಮಾದೇಗೌಡ

ನೀರು ಬಿಡುವಂತೆ ಸೂಚಿಸಲು ಸಿಎಂಸಿಗೆ ಯಾವುದೇ ಅಧಿಕಾರವಿಲ್ಲ. ಮಿಲಿಟರಿ ಪಡೆ ಬರಲಿ, ಪ್ರಧಾನಿ ಆದೇಶವಿರಲಿ, ಸುಪ್ರೀಂ ಆದೇಶ ಆಗಲಿ ನಾವು ಜಗ್ಗುವುದಿಲ್ಲ. ಒಂದು ಹನಿ ನೀರು ಹೊರ ಹೋಗುವುದಿಲ್ಲ ಎಂದು ಮಾದೇಗೌಡರು ಗುಡುಗಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ಸಿದ್ಧವಿಲ್ಲ. ಪ್ರಧಾನ ಮಂತ್ರಿ ಹಾಗೂ ಸುಪ್ರೀಂಕೋರ್ಟ್ ನೀರು ಬಿಡುವಂತೆ ಸೂಚಿಸಿದರೂ ನೀಡು ಬಿಡಲು ಸಾಧ್ಯವಿಲ್ಲ. ಇಂದು ರಾತ್ರಿಯಿಂದಲೇ ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ರೈತರನ್ನು ಕಾವಲು ಹಾಕಲಾಗುವುದು. ಕೇಂದ್ರ ಸರ್ಕಾರ ಮಿಲಿಟರಿ ಪಡೆ ಕಳಿಸಿದರು ನಾವು ಬಗ್ಗುವುದಿಲ್ಲ ಎಂದು ಮಾದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಗುರುವಾರ(ಅ.11) ಮಧ್ಯಾಹ್ನ ಕರ್ನಾಟಕಕ್ಕೆ ಲಿಖಿತ ಆದೇಶ ನೀಡಿದೆ.
ಅ.16 ರಿಂದ ಅ.31ರವರೆಗೂ ನೀರು ಬಿಡುವಂತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಹೇಳಿದ್ದಾರೆ.
15 ಟಿಎಂಸಿ ಅಥವಾ ಪ್ರತಿದಿನ 1 ಟಿಎಂಸಿಯಂತೆ ನೀರು ಬಿಡಬೇಕು ಎಂದು ತಮಿಳುನಾಡು ಮನವಿ ಸಲ್ಲಿಸಿತ್ತು. ಅದರೆ, 9 ಟಿಎಂಸಿ (8.745) ನೀರು ಬಿಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶದಲ್ಲಿ ಹೇಳಲಾಗಿದೆ.
ಕರ್ನಾಟಕದಿಂದ ಈವರೆಗೂ 13, 000 ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಕಾವೇರಿ ಕೊಳ್ಳದಲ್ಲಿ ಮಂಗಳವಾರ ಹಾಗೂ ಬುಧವಾರ ಒಳ್ಳೆ ಮಳೆಯಾದ ಕಾರಣ ಗಡಿಭಾಗದ ಬಿಳಿಗುಂಡ್ಲು ಜಲಾಗಾರದಿಂದ ಹೊರಹರಿವು ಹೆಚ್ಚಾಗಿದೆ.
ರಾಜ್ಯದ ಬಳಿ 14 ಟಿಎಂಸಿ ನೀರು ಮಾತ್ರ ಇದ್ದು ಅದರಲ್ಲಿ 8.75 ಟಿಎಂಸಿ ನೀರು ತಮಿಳುನಾಡಿಗೆ ಬಿಟ್ಟರೆ ಮುಂದೆ ಗತಿ ಏನು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 30 ಟಿಎಂಸಿ ಬೇಕು ಎಂದು ಅಂಕಿ ಅಂಶ ತೋರಿಸುತ್ತದೆ. ಅದರೂ, ಕರ್ನಾಟಕಕ್ಕೆ ಮತ್ತೆ ಮತ್ತೆ ಅನ್ಯಾಯವಾಗುತ್ತಿದೆ ಎಂದು ಮಂಡ್ಯ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಬಗ್ಗೆ ಕರ್ನಾಟಕ ಸಲ್ಲಿರುವ ಅಕ್ಷೇಪ ಅರ್ಜಿ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರುವ ಮುನ್ನವೇ ರಾಜ್ಯಕ್ಕೆ ಹಿನ್ನೆಡೆಯಾಗಿದೆ. ಕಾವೇರಿ ಕೊಳ್ಳದ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿದ ಅಧ್ಯಯನ ತಂಡ ಕೂಡಾ ಶುಕ್ರವಾರ (ಅ.11) ತನ್ನ ವರದಿಯನ್ನು ಕಾವೇರಿ ನದಿ ಪ್ರಾಧಿಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications