ತಂದೆಯ ಅಂತ್ಯಕ್ರಿಯೆ ನೆನೆಸಿಕೊಂಡು ಕಣ್ಣೀರಿಟ್ಟ ದೇವೇಗೌಡ

ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಕಷ್ಟು ಕಷ್ಟ ಅನುಭವಿಸಬೇಕಾಗಿ ಬಂತು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದಾರೆ.
ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾನು ಪೆರೋಲ್ ಕೇಳಬೇಕಾಗಿ ಬಂತು. ನನ್ನ ಸಂಪುಟಕ್ಕೆ ನೀವು ಸೇರಿಕೊಳ್ಳಿ, ನಿಮ್ಮನ್ನು ಬೇಷರತ್ತಾಗಿ ಜೈಲಿನಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸು ನನ್ನಲ್ಲಿ ಪ್ರಸ್ತಾಪಿಸಿದ್ದರು.
ಆದರೆ ಅದನ್ನು ನಾನು ನಿರಾಕರಿಸಿದ್ದೆ ಎಂದು ತುರ್ತು ಪರಿಸ್ಥಿತಿ ಸಂಕಷ್ಟವನ್ನು ನೆನೆಸಿ ದೇವೇಗೌಡರು ದುಃಖಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ 110ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಿದ್ದ ದೇವೇಗೌಡ, ಕಾವೇರಿ ವಿಚಾರದಲ್ಲಿ ಸತ್ಯಾಂಶ ಮಾತನಾಡುವುದು ಸಂಸತ್ತಿನಲ್ಲಿ ಕಷ್ಟವಾಗುತ್ತಿದೆ.
ತಮಿಳುನಾಡು ಸಂಸದರು ಈ ವಿಚಾರದಲ್ಲಿ ಬೇರೊಬ್ಬರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ದೇವೇಗೌಡ ಬೇಸರ ವ್ಯಕ್ತ ಪಡಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ತಮಿಳುನಾಡು ನಾಯಕರು ನೀಡುತ್ತಿರುವ ಹೇಳಿಕೆಗಳು ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಡಿಎಂಕೆ ನಾಯಕರುಗಳು ಮೊದಲಿನಿಂದಲೂ 356 ವಿಧೇಯಕವನ್ನು ವಿರೋಧಿಸುತ್ತಾ ಬಂದಿದ್ದಾರೆ.
ಆದರೆ ಈಗ ಅದರ ಲಾಭ ಪಡೆಯಲು ಕರ್ನಾಟಕ ಸರಕಾರವನ್ನು ಕಿತ್ತು ಹಾಕಲು 356 ವಿಧೇಯಕವನ್ನು ಬಳಸಿಕೊಳ್ಳಿ ಎಂದು ಒತ್ತಡ ತರುತ್ತಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.
ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ನಡೆಯುತ್ತಿದೆ. ಜ್ವಲಂತ ಸಮಸ್ಯೆಗಳನ್ನು ಕೇಳುವವರಿಲ್ಲ. ಇದೆಲ್ಲಾ ನೋಡಿದರೆ ತುರ್ತು ಪರಿಸ್ಥಿತಿ ಮರುಕಳಿಸುವಂತಿದೆ ಎಂದು ದೇವೇಗೌಡ ವಿಷಾದ ವ್ಯಕ್ತ ಪಡಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications