ಸಹೋದರರ ಕಿತ್ತಾಟಕ್ಕೆ ಹಾಲಪ್ಪ ತುಪ್ಪ, ಬಂಗಾರಪ್ಪ ಪುತ್ಥಳಿ ಅನಾಥ

ಅಭಿಮಾನಿಗಳು ನಿರ್ಮಿಸಿದ್ದ ಬಂಗಾರಪ್ಪ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸೊರಬ ಶಾಸಕ ಮತ್ತು ಬಂಗಾರಪ್ಪ ಅವರ ಶಿಷ್ಯ ಹರತಾಳು ಹಾಲಪ್ಪ ಮತ್ತು ಕುಮಾರ ಬಂಗಾರಪ್ಪ ಅವರಿಗೆ ಆಹ್ವಾನ ನೀಡಿದ್ದು ಇಬ್ಬರು ಸಹೋದರರು ಮತ್ತು ಅವರವರ ಬೆಂಬಲಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.
ಸೊರಬ ತಾಲೂಕು ವ್ಯಾಪ್ತಿಯಲ್ಲಿ ಬರುವ ಭದ್ರಾಪುರದಲ್ಲಿ ಅಭಿಮಾನಿಗಳು ನಿರ್ಮಿಸಿದ್ದ ಬಂಗಾರಪ್ಪ ಅವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮವನ್ನು ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದರಿಂದ ಶಿವಮೊಗ್ಗ ಜಿಲ್ಲಾಡಳಿತ ರದ್ದುಗೊಳಿಸಿದೆ. ಪುತ್ಥಳಿಯನ್ನು ಕೊಠಡಿಯಲ್ಲಿ ಇಟ್ಟು ಬೀಗ ಹಾಕಿ ಬೀಗವನ್ನು ತನ್ನ ಬಳಿಯೇ ಇಟ್ಟುಕೊಂಡಿದೆ.
ಬಂಗಾರಪ್ಪ ಅವರ ಮೂರು ಜನ ಅಭಿಮಾನಿಗಳು ಸುಮಾರು ಒಂದೂವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಬಂಗಾರಪ್ಪ ಪುತ್ಥಳಿ ನಿರ್ಮಿಸಿದ್ದರು. ಉದ್ಘಾಟನೆಗೆ ಬಂಗಾರಪ್ಪ ಅವರ ಪತ್ನಿ ಶಕುಂತಲಮ್ಮ ಮತ್ತು ಎರಡನೇ ಪುತ್ರ ಮಧು ಬಂಗಾರಪ್ಪ ಅವರನ್ನು ಆಹ್ವಾನಿಸಿದ್ದರು.
ಆದರೆ ಗ್ರಾಮಸ್ಥರು ಈಡಿಗ ಸಮುದಾಯದ ಎಲ್ಲಾ ರಾಜಕೀಯ ನಾಯಕರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಸೂಚಿಸಿದ್ದರಿಂದ ಈ ಅಭಿಮಾನಿಗಳು ಸ್ಥಳೀಯ ಶಾಸಕ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರನ್ನು ಆಹ್ವಾನಿಸಿದರು.
ಕುಮಾರ್ ಬಂಗಾರಪ್ಪ ಮತ್ತು ಹಾಲಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಕ್ಕೆ ಮಧು ಬಂಗಾರಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಾಲಪ್ಪ ಅವರಿಗೆ ನಿಯತ್ತು ಅನ್ನೋದೇ ಇಲ್ಲ. ಈ ಹಿಂದೆ ನನ್ನ ತಂದೆಯ ಫೋಟೋ ಕಿತ್ತು ಎಸೆದಿದ್ದರು. ನನ್ನ ತಂದೆಯ ಮೇಲೆ ಗೌರವ ಇಲ್ಲದವರು ಈ ಕಾರ್ಯಕ್ರಮಕ್ಕೆ ಬರಬಾರದು ಎಂದು ಮಧು ಕಿಡಿಕಾರಿದ್ದಾರೆ.
ಈ ನಡುವೆ, ಉದ್ಘಾಟನೆಯ ಮುನ್ನಾ ದಿನ ಬಂಗಾರಪ್ಪ ಪತ್ನಿ ಶಕುಂತಲಮ್ಮ ಅವರು, ಅಭಿಮಾನಿಗಳೆಂದು ಹೇಳಿಕೊಳ್ಳುವ ಕೆಲವರು ಬಂಗಾರಪ್ಪ ಅವರ ಪುತ್ಥಳಿ ಅನಾವರಣ ಮಾಡುತ್ತಿದ್ದಾರೆ. ಇದು ರಾಜಕೀಯ ಪ್ರೇರಿತ, ಪುತ್ಥಳಿ ಅನಾವರಣ ಮಾಡಲು ನನ್ನ ಅನುಮತಿ ಪಡೆದಿಲ್ಲ. ಹೀಗಾಗಿ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಈ ಪತ್ರದ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ರದ್ದು ಪಡಿಸಿ ಆದೇಶ ಹೊರಡಿಸಿ, ಪೋಲೀಸ್ ಇಲಾಖೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ತಿಳಿಸಿದ್ದರು.
ನನ್ನ ತಂದೆ ಯಾವುದೇ ಜಾತಿಗೆ ಸೇರಿದವರಲ್ಲ. ತಂದೆಯ ಪುತ್ಥಳಿ ಅನಾವರಣ ನಡೆಸದಂತೆ ತಾಯಿ ತಡೆದಿದ್ದಾರೆ. ನನ್ನ ತಾಯಿ ತಂದೆಯ ಹೆಸರಿಗೆ ಮಸಿ ಬಳೆಯುವ ಕೆಲಸಕ್ಕೆ ಮುಂದಾಗಿಲ್ಲ ಎನ್ನುವ ನಂಬಿಕೆಯಿದೆ. ಮಧುವಿನ ಅನುಭವ ಕೊರತೆಯಿಂದಾಗಿ ಕಾರ್ಯಕ್ರಮ ರದ್ದಾಗಿದೆ. ಅದಕ್ಕಾಗಿ ಎಲ್ಲರ ಬಳಿ ಕ್ಷಮೆ ಕೇಳುತ್ತೇನೆ ಎಂದು ಕುಮಾರ ಬಂಗಾರಪ್ಪ ಹೇಳಿದ್ದಾರೆ.
ಒಟ್ಟಿನಲ್ಲಿ ಸಹೋದರರ ಕಲಹದಿಂದ ಬಂಗಾರಪ್ಪ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದಾಗಿದೆ. ಜನತೆ ಆಕ್ರೋಶ ವ್ಯಕ್ತ ಪಡಿಸಿದ್ದರಿಂದ ಗ್ರಾಮದಲ್ಲಿ ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications