ಪ್ಯಾಸೆಂಜರ್ ರೈಲಿಗೆ ಬೆಂಕಿ, 2 ಸಜೀವ ದಹನ

ಗುಲಬರ್ಗದಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗಬೇಕಾಗಿದ್ದ ಫಲಕ್ನಾಮಾ ರೈಲಿನ ಎರಡು ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಒಂದು ಬೋಗಿಯಲ್ಲಿ ಕೆಲ ಯುವಕರು ಐದಾರು ಸೀಮೆಎಣ್ಣೆ ಡಬ್ಬಿಗಳನ್ನು ಇಟ್ಟಿದ್ದೇ ಅಗ್ನಿ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕೆಲ ಪ್ರಯಾಣಿಕರು ಕೂಡ ಸೀಮೆಎಣ್ಣೆ ಡಬ್ಬಿಗಳನ್ನು ನೋಡಿದ್ದಾಗಿ ಹೇಳಿದ್ದಾರೆ.
ಬೋಗಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬೆರಳೆಣಿಕೆಯಷ್ಟಿದ್ದ ಜನರಲ್ಲಿ ಕೆಲವರು ರೈಲಿನಿಂದ ಜಿಗಿದು ಪಾರಾಗಿದ್ದಾರೆ. ಬೆಂಕಿ ವೇಗವಾಗಿ ವ್ಯಾಪಿಸಲು ಪ್ರಾರಂಭಿಸಿದ್ದರಿಂದ ಕೆಲವರು ಸಿಲುಕಿಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಸತ್ತವರ ಗುರುತು ಇನ್ನೂ ಪತ್ತೆಯಾಗಿಲ್ಲ.
ರೈಲು ಸಂಜೆ 4 ಗಂಟೆಗೆ ಗುಲಬರ್ಗದಿಂದ ಸೊಲ್ಲಾಪುರಕ್ಕೆ ಹೊರಡಬೇಕಿತ್ತು. ಆದರೆ, ರೈಲಿನಲ್ಲಿ ಹೆಚ್ಚು ಜನ ಪ್ರಯಾಣಿಕರು ಇರದಿದ್ದರಿಂದ ಮತ್ತು ರಕ್ಷಣಾ ಸಿಬ್ಬಂದಿಗಳು ಉಳಿದ ಬೋಗಿಗಳನ್ನು ಬೆಂಕಿ ಹೊತ್ತಿಕೊಂಡ ಎರಡು ಬೋಗಿಗಳಿಂದ ಬೇರ್ಪಡಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಆದರೆ, ಆ ಎರಡು ಬೋಗಿಗಳು ಸುಟ್ಟು ಕರಕಲಾಗಿದ್ದರಿಂದ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದೆಂದು ಶಂಕಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಪ್ರಸನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರೇವೂ ನಾಯಕ್ ಬೆಳಮಗಿ ಅವರು ಕೂಡಲೆ ಧಾವಿಸಿ ರಕ್ಷಣಾ ಕಾರ್ಯ ಸುಗಮವಾಗುವಂತೆ ನೋಡಿದರು. ಆದರೆ, ಸತ್ತವನಿಗೆ ಮತ್ತು ಗಾಯಗೊಂಡವರಿಗೆ ರಾಜ್ಯ ಸರಕಾರದಿಂದ ಏನು ಪರಿಹಾರ ದೊರಕಲಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಲಿಲ್ಲ. ರೈಲು ಕೇಂದ್ರದ ಅಧೀನದಲ್ಲಿ ಬರುವುದರಿಂದ ಸತ್ತವರಿಗೆ ಮತ್ತು ಗಾಯಗೊಂಡವರಿಗೆ ರೈಲ್ವೆ ಇಲಾಖೆಯೇ ಪರಿಹಾರ ನೀಡಬೇಕು ಎಂದು ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications