ಕಾಳಿ ಸ್ವಾಮಿ ವಿರುದ್ಧ ತನಿಖೆ, ಅಶೋಕ್ ಭರವಸೆ

ಮಂಗಳವಾರ ಮಧ್ಯಾಹ್ನ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಉಪ ಮುಖ್ಯಮಂತ್ರಿಯೂ ಆಗಿರುವ ಆರ್ ಅಶೋಕ್ ಅವರು, ಪೊಲೀಸರು ತಲೆಮರೆಸಿಕೊಂಡಿದ್ದ ಋಷಿಕುಮಾರನನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸದಿದ್ದರೆ ತಾವೇ ಸ್ವತಃ ಪೊಲೀಸ್ ವರಿಷ್ಠಾಧಿಕಾರಿ ಪಚಾವೋ ಅವರನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಹೇಳುವುದಾಗಿ ನುಡಿದರು.
ಸ್ವಾಮಿ ವೇಷಧಾರಿಯಲ್ಲಿ ಯಾರೇ ಇರಬಹುದು, ಜನರಿಗೆ ಮೋಸ ಮಾಡಿದರೆ ಸುಮ್ಮನಿರುವುದಿಲ್ಲ. ಕಾನೂನು ಎಲ್ಲರಿಗೂ ಒಂದೆ. ನಿತ್ಯಾನಂದನಿಗೂ ಒಂದೇ, ಇನ್ನಾವುದೇ ಸ್ವಾಮೀಜಿಗೂ ಒಂದೇ. ತಪ್ಪು ಮಾಡಿದರೆ ತಪ್ಪಿಸಿಕೊಳ್ಳುವುದು ಸಾಧ್ಯವೇ ಇಲ್ಲ. ಕಾಳಿ ಸ್ವಾಮಿಯ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಋಷಿಕುಮಾರನ ವಿರುದ್ಧ ದೂರು ಈಗಾಗಲೆ ದಾಖಲಾಗಿದೆ. ಸ್ಥಳೀಯ ಪೊಲೀಸರು ಆತನ ಕ್ರಮ ಕೈಗೊಳ್ಳಲೇಬೇಕು. ಅವರು ವಿಫಲರಾದರೆ ಅವರು ಡಿಜಿಗೆ ಬರುತ್ತದೆ, ನಂತರ ನನಗೆ ಬರುತ್ತದೆ. ಪೊಲೀಸರಿಗೆ ಈಗಾಗಲೆ ಸೂಚನೆ ನೀಡಲಾಗಿದೆ. ಅವರು ಮುಂದಿನ ಕ್ರಮ ಜರುಗಿಸುತ್ತಾರೆಂದು ನಂಬಿದ್ದೇನೆ ಎಂದು ಅವರು ಹೇಳಿದರು.
ಋಷಿಕುಮಾರನ ಹಗರಣ ಹೊರಬೀಳುತ್ತಿದ್ದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆತನ ಮನೆ, ಮಠದ ಮೇಲೆ ಕನ್ನಡ ಚಳವಳಿಗಾರರು ದಾಳಿ ಮಾಡಿ ಹೂಕುಂಡ, ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಜನರ ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆ ತನ್ನ ಹೆಂಡತಿ ಮಗಳೊಂದಿಗೆ ಋಷಿಕುಮಾರ ಕೇರಳಕ್ಕೆ ಪರಾರಿಯಾಗಿದ್ದಾನೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಂಗಳವಾರ ಸುವರ್ಣ 24/7 ಸುದ್ದಿವಾಹಿನಿಯಲ್ಲಿ ಪ್ರತ್ಯಕ್ಷನಾಗಿರುವ ಕಾಳಿಸ್ವಾಮಿ ತನಗೂ ಆಗ ಹಗರಣಗಳಿಗೂ ಸಂಬಂಧವೇ ಇಲ್ಲ ಎಂದು ಹೇಳುತ್ತಿದ್ದಾನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications