ಕರ್ಣಾಟಕ ಬ್ಯಾಂಕ್ Q2 ನಿವ್ವಳ ಲಾಭ 186% ಏರಿಕೆ

ಕರ್ಣಾಟಕ ಬ್ಯಾಂಕಿನ ನಿವ್ವಳ ಬಡ್ಡಿ ಆದಾಯ ಶೇ 28 ರಷ್ಟು ಏರಿಕೆ ಕಂಡು 233 ಕೋಟಿ ರು ಬಂದಿದೆ. ಕಳೆದ ವರ್ಷ ಇದೇ ತ್ರೈಮಾಸಿಕ ಅವಧಿಯಲ್ಲಿ 182 ಕೋಟಿ ರು ಮಾತ್ರ ಗಳಿಸಲಾಗಿತ್ತು.
ಕಳೆದ ತ್ರೈಮಾಸಿಕದಲ್ಲಿ ಶೇ 12.5 ರಷ್ಟಿದ್ದ Capital adequacy ಅನುಪಾತ ಈ ತ್ರೈಮಾಸಿಕದಲ್ಲಿ ಶೇ 12.17ರಷ್ಟು ಏರಿಕೆಯಾಗಿದೆ.
ಈ ತ್ರೈಮಾಸಿಕದಲ್ಲಿ ಒಟ್ಟಾರೆ ಆದಾಯ ಶೇ 22.85 ರಷ್ಟು ಏರಿಕೆ ಕಂಡು 1032.37 ಕೋಟಿ ರು ದಾಖಲಾಗಿದೆ. ಕಳೆದ ತ್ರೈಮಾಸಿಕದಲ್ಲಿ ಆದಾಯ 840.33 ಕೋಟಿ ರು ಮಾತ್ರ ಗಳಿಸಿತ್ತು.
ಒಟ್ಟಾರೆ ಅನುತ್ಪಾದಕ ಆಸ್ತಿ (non performing assets) ದರ ಶೇ 3.22 ರಷ್ಟಾಗಿದ್ದು, ಕಳೆದ ತ್ರೈಮಾಸಿಕದಲ್ಲಿ 3.31% ಇತ್ತು. ನಿವ್ವಳ ಅನುತ್ಪಾದಕ ಆಸ್ತಿ ದರ 2.08% ರಷ್ಟಿದ್ದು, ಕಳೆದ ತ್ರೈಮಾಸಿಕದಲ್ಲಿ 1.99% ಇತ್ತು.
ಉತ್ತಮ ತ್ರೈಮಾಸಿಕ ವರದಿ ನಡುವೆಯೂ ಷೇರು ಮಾರುಕಟ್ಟೆಯಲ್ಲಿ ಕರ್ಣಾಟಕ ಬ್ಯಾಂಕಿನ ಷೇರುಗಳು ಬುಧವಾರ(ಆ.17) ಹೆಚ್ಚಿನ ಸಂಚಲನ ಮೂಡಿಸಿಲ್ಲ.
ಬಿಎಸ್ ಇನಲ್ಲಿ ಕರ್ನಾಟಕ ಬ್ಯಾಂಕ್ ಷೇರು ಗಳು 123.40 ರು ನಂತೆ ಶೇ 0.65 ರಷ್ಟು ಏರಿಕೆ ಕಂಡಿತ್ತು. ಎನ್ ಎಸ್ ಇನಲ್ಲಿ 123.40 ರು ನಂತೆ ಶೇ 0.82 ರಷ್ಟು ಏರಿತ್ತು.
ಮಂಗಳೂರು ಮೂಲದ ಪ್ರಮುಖ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಅನ್ನು ಐಸಿಐಸಿಐ ಖರೀದಿಸಲಿದೆ ಎಂಬ ಸುದ್ದಿ ಇತ್ತೀಚೆಗೆ ಹರಡಿತ್ತು. ಮಾಧ್ಯಮ ವರದಿಗಳನ್ನು ಬ್ಯಾಂಕ್ ಕರ್ಣಾಟಕ ಬ್ಯಾಂಕ್ ನ ಸಿಇಒ ಪಿ. ಜಯರಾಮ ಭಟ್ ಅಲ್ಲಗೆಳೆದಿದ್ದರು.
2015ರ ಹೊತ್ತಿಗೆ ಸಂಸ್ಥೆ ಔದ್ಯಮಿಕ ಟರ್ನ್ ಓವರ್ ಅನ್ನು 1 ಲಕ್ಷ ಕೋಟಿ ರು ಗೆ ಏರಿಸುವ ಗುರಿ ಹೊಂದಿರುವುದು. ಕರ್ಣಾಟಕ ಬ್ಯಾಂಕ್ ಕೆಬಿಎಲ್ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಆರಂಭಿಸಿ ಜನಪ್ರಿಯತೆ ಗಳಿಸಿದ್ದು, ತ್ರೈಮಾಸಿಕ ವರದಿ ಫಲಿತಾಂಶದಲ್ಲಿ ಉತ್ತಮ ಸಾಧನೆಗೆ ಕಾರಣವಾಗಿದೆ.
ಕೆಲ ತಿಂಗಳ ಹಿಂದೆ ಕೋಟಕ್ ಮಹೀಂದ್ರಾ ಬ್ಯಾಂಕ್ ಕೂಡಾ ಕರ್ನಾಟಕ ಬ್ಯಾಂಕ್ ಖರೀದಿಗೆ ಮುಂದಾಗಿದೆ ಎಂಬ ಸುದ್ದಿ ಹಬ್ಬಿತ್ತು. ನಂತರ ಈ ಪಟ್ಟಿಗೆ ಐಸಿಐಸಿಐ ಸೇರ್ಪಡೆಯಾಗಿತ್ತು. ಇದ್ಯಾವುದೂ ಕರ್ಣಾಟಕ ಬ್ಯಾಂಕ್ ತ್ರೈಮಾಸಿಕ ವರದಿ ಮೇಲೆ ಋಣಾತ್ಮಕ ಪರಿಣಾಮ ಬೀರಿಲ್ಲ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications