ಯಡಿಯೂರಪ್ಪ ಎಲ್ಲೋ ನಾನೂ ಅಲ್ಲೇ:ರೇಣುಕಾಚಾರ್ಯ

ಯಾವುದೇ ಮಾಧ್ಯಮ ಹೇಳಿಕೆಯ ಆರಂಭ ಮತ್ತು ಅಂತ್ಯದಲ್ಲಿ ಯಡಿಯೂರಪ್ಪನವರು ನಮ್ಮ ನಾಯಕರು, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದ್ದು ಎಂದು ಹೇಳಿಕೆ ನೀಡುತ್ತಲೇ ಬರುತ್ತಿದ್ದ ಅಬಕಾರಿ ಸಚಿವ ಎಂ ಪಿ ರೇಣುಕಾಚಾರ್ಯ, ಯಡಿಯೂರಪ್ಪನವರು ಎಲ್ಲಿ ಇರುತ್ತಾರೋ ಅಲ್ಲಿ ನಾವು. ಅವರ ಬೆಂಬಲಿಗರಾದ ನಾವು ಅವರೊಂದಿಗೆ ಹೆಜ್ಜೆ ಹಾಕುತ್ತೇವೆ ಎಂದು ಬಹಿರಂಗವಾಗಿ ಹೇಳಿದ್ದಾರೆ.
ರೇಣುಕಾಚಾರ್ಯ ಅವರ ಹೇಳಿಕೆಗೆ ಹರಿಹರ ಶಾಸಕ ಬಿ ಪಿ ಹರೀಶ್ ಮತ್ತು ತುಮಕೂರು ಸಂಸದ ಜಿ ಎಸ್ ಬಸವರಾಜ್ ಕೂಡಾ ಜೈ ಎಂದಿದ್ದಾರೆ. ಕಾಲಾಯ ತಸ್ಮೈ ನಮಃ ಎನ್ನುವ ಹಾಗೆ ಇನ್ನಷ್ಟು ಯಡಿಯೂರಪ್ಪ ಬೆಂಬಲಿಗರು ಡಿಸೆಂಬರ್ ನಲ್ಲಿ ಜೈ ಎನ್ನುವ ಸಾಧ್ಯತೆ ಇಲ್ಲದಿಲ್ಲ.
ಯಡಿಯೂರಪ್ಪ ಇಲ್ಲದೆ ಚುನಾವಣೆ ಎದುರಿಸುವುದು ಕಷ್ಟದ ಮಾತು. ಅವರೇ ನಮ್ಮ ನಾಯಕರು, ನಮ್ಮ ನಮ್ಮ ಕ್ಷೇತ್ರದ ಹಿರಿಯರ ಮತ್ತು ಮತದಾರರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಯಡಿಯೂರಪ್ಪ ಇಲ್ಲದ ಬಿಜೆಪಿಯನ್ನು ಕಲ್ಪಿಸಿ ಕೊಳ್ಳಲಾಗದು. ಅವರಿಗೆ ಇನ್ನೊಂದು ಪರ್ಯಾಯ ಶಕ್ತಿ ಪಕ್ಷದಲ್ಲಿ ಇನ್ನೂ ಹುಟ್ಟಿಲ್ಲ. ಜಗದೀಶ್ ಶೆಟ್ಟರ್ ಉತ್ತಮ ಅಭಿವೃದ್ದಿ ಕೆಲಸ ನಡೆಸಿಕೊಂಡು ಬಂದಿದ್ದಾರೆ. ಆದರೂ ಯಡಿಯೂರಪ್ಪ ಇಲ್ಲದೆ ಮತ ಕೇಳಲು ಸಾಧ್ಯವಾಗದು ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ತುಮಕೂರು ಸಂಸದ ಬಸವರಾಜ್ ಮಾತನಾಡಿ ಯಡಿಯೂರಪ್ಪನವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ದ ಎಂದು ಹೇಳಿದರೆ, ನಮ್ಮ ನಾಯಕರಾದ ಯಡಿಯೂರಪ್ಪ ಅವರ ನಡೆಯನ್ನು ಹಿಂಬಾಲಿಸುತ್ತೇವೆ. ಸದ್ಯಕ್ಕೆ ಯಡಿಯೂರಪ್ಪ ಬಿಜೆಪಿಯಲ್ಲಿದ್ದಾರೆ.
ಹಾಗಾಗಿ ನಾವೂ ಬಿಜೆಪಿಯಲ್ಲಿದ್ದೇವೆ. ಮುಂದೆ ಅವರು ಹೊಸ ಪಕ್ಷ ಸ್ಥಾಪಿಸಿದರೆ ಅವರೊಂದಿಗೆ ಹೋಗುತ್ತೇವೆ ಎಂದು ಬಿ ಪಿ ಹರೀಶ್ ಸ್ಪಷ್ಟವಾಗಿ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications