ರಾಜ್ಯ ಸರಕಾರಿ ನೌಕರರಿಗೆ ಭರ್ಜರಿ ದಸರಾ ಗಿಫ್ಟ್

ರಾಜ್ಯ ಸರಕಾರ ಪರಿಷ್ಕೃತ ವೇತನ ಶ್ರೇಣಿಗೆ ಅನುಗುಣವಾಗಿ ಜುಲೈ1 ರಿಂದ ಪೂರ್ವಾನ್ವಯವಾಗುವಂತೆ ಶೇ. 4ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ನೀಡಲು ಸರಕಾರ ತೀರ್ಮಾನಿಸಿದ್ದು, ಈ ಸಂಬಂಧ ಬುಧವಾರ ಆದೇಶ ಹೊರಡಿಸಿದೆ. ಪರಿಷ್ಕೃತ ವೇತನ ರಚನೆಯು 2012ಕ್ಕೆ ಲಭ್ಯವಿದ್ದ ಶೇ. 76.75 ತುಟ್ಟಿಭತ್ಯೆ ವಿಲೀನಕ್ಕೆ ಸಂಬಂಧಿಸಿರುತ್ತದೆ.
ಕೇಂದ್ರ ಬೆಲೆ ಸೂಚ್ಯಂಕವನ್ನು ಆಧರಿಸಿ ತನ್ನ ನೌಕರರಿಗೆ ಜುಲೈ1 ರಿಂದ ಪೂರ್ವಾನ್ವಯವಾಗುತಂತೆ ತುಟ್ಟಿ ಭತ್ಯೆ ನೀಡಿದ್ದು, ರಾಜ್ಯ ಸರಕಾರ ಕೂಡ ಅದೇ ಮಾದರಿಯಲ್ಲಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಶೇ. 7 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದನ್ನು ಸ್ವಾಗತಿಸಿರುವ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ಅವರು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ನೌಕರ ವೃಂದದ ಪರವಾಗಿ ಅಭಿನಂದಿಸಿದ್ದಾರೆ.












Click it and Unblock the Notifications