ಜ್ಞಾನಭಾರತಿ ಗ್ಯಾಂಗ್ ರೇಪ್: ಆರೋಪಿಗಳು ಸಿಕ್ಕಿಬಿದ್ದರು

ಬಾಧಿತ ಯುವತಿ ನಗರದ ನಾಗರಬಾವಿಯಲ್ಲಿನ ರಾಷ್ಟ್ರೀಯ ಕಾನೂನು ಶಾಲೆಯ ವಿದ್ಯಾರ್ಥಿನಿ. ಈಕೆ ತನ್ನ ಪ್ರಿಯಕರ, IBM ಟೆಕ್ಕಿ, ಕೇರಳದ ಕೊಲ್ಲಂ ಮೂಲದ ನಿಖಿಲ್ ಜತೆ ಯಲ್ಲಿದ್ದಾಗ ದುಷ್ಕರ್ಮಿಗಳು ಕಳೆದ ಶನಿವಾರ ರಾತ್ರಿ 10 ಗಂಟೆ ವೇಳೆ ಸಾಮೂಹಿಕ ಅತ್ಯಾಚಾರ ಮಾಡಿದ್ದರು.
ಗುರುವಾರ ಸಂಜೆಯೇ ಈ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಸದ್ಯದಲ್ಲೇ ಇವರ ಸಹಚರರಾದ ಇನ್ನೂ ಮೂವರನ್ನು ಪ್ರಕರಣದ ಸಂಬಂಧ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರ ರಾಮನಗರದ ಬಳಿ ಗುಂಪೊಂದು ಶ್ರೀಗಂಧದ ಮರ ಕದಿಯುತ್ತಿದ್ದಾಗ ದಕ್ಷಿಣ ವಲಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ವಿಚಾರಣೆಯ ವೇಳೆ ಜ್ಞಾನಭಾರತಿ ಗ್ಯಾಂಗ್ ರೇಪ್ ತಮ್ಮದೇ ಕೃತ್ಯ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಕಳ್ಳತನ ಮಾಡುವುದೇ ಈ ತಂಡದ ಕಸುಬಾಗಿದ್ದು, ತಂಡದಲ್ಲಿರುವವರೆಲ್ಲ 20-25 ವರ್ಷದವರಾಗಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್ ಸುತ್ತಮುತ್ತ ಇವರು ಇನ್ನೂ ಹಲವು ಕುಕೃತ್ಯಗಳನ್ನು ನಡೆಸಿರುವ ಸಾಧ್ಯತೆಯಿದೆ ಪೊಲೀಸರು ಶಂಕಿಸಿದ್ದಾರೆ.
ಬಾಧಿತ ವಿದ್ಯಾರ್ಥಿನಿ ಆರೋಪಿಗಳ ಗುರುತು ಪತ್ತೆಹಚ್ಚಿರುವುದಾಗಿ ತಿಳಿದುಬಂದಿದೆ. ಬಾಧಿತ ವಿದ್ಯಾರ್ಥಿನಿಗೆ ಸುಮಾರು 600 ಕ್ಕೂ ಹೆಚ್ಚು ಫೋಟೋಗಳನ್ನು ತೋರಿಸಲಾಗಿ, ಆಕೆ ಸದರಿ ಆರೋಪಿಗಳನ್ನು ಪತ್ತೆಹಚ್ಚಿದ್ದಾಗಿ ತಿಳಿದುಬಂದಿದೆ.
ಈ ಮಧ್ಯೆ, ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದಾರೆ. ವರದಿ ಬಂದ ತಕ್ಷಣ ಪ್ರಕರಣದ ಬಗ್ಗೆ ಸಂಪೂರ್ಣ ವಿವರ ನೀಡುವುದಾಗಿ ಪೊಲೀಸರು ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications