ದೇವೇಗೌಡರ ಪಾದರಕ್ಷೆ ಹೊತ್ತು ಜೆಡಿಎಸ್ ಪಕ್ಷಕ್ಕೆ ದುಡಿಯುವೆ

ಇಲ್ಲಿನ ಪ್ರವಾಸಿ ಮಂದಿರದ ಬಳಿ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಿದ್ದ ಚೆನ್ನಿಗಪ್ಪ, ಬಹಳ ವರ್ಷಗಳಿಂದ ನಾನು ಜೆಡಿಎಸ್ ನಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದೇನೆ. ಮಾಜಿ ಸಿಎಂ ಕುಮಾರಸ್ವಾಮಿಯವರ ಅಧಿಕಾರದ ಅವಧಿಯಲ್ಲಿ ಕೂಡಾ ನಾನು ಸಚಿವನಾಗಿ ದುಡಿದಿದ್ದೆ. ಕೆಲವು ಕಾಲ ಕಾರಣಾಂತರದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿರಬೇಕಾಯಿತು ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಬೇಕೆನ್ನುವ ಇರಾದೆ ಹೊಂದಿದ್ದೇನೆ. ಬಿಜೆಪಿ ಮತ್ತು ಕಾಗ್ರೆಸ್ ಪಕ್ಷದ ಇದುವರೆಗಿನ ದುರಾಡಳಿತದಿಂದ ಈ ಕ್ಷೇತ್ರದ ಜನತೆ ಬೇಸತ್ತಿದ್ದಾರೆ. ಈ ಬಾರಿ ಜೆಡಿಎಸ್ ಬಗ್ಗೆ ದೊಡ್ಡಬಳ್ಳಾಪುರದ ಜನತೆ ವಿಶ್ವಾಸ ಹೊಂದಿದ್ದಾರೆ ಎಂದು ಚೆನ್ನಿಗಪ್ಪ ಹೇಳಿದ್ದಾರೆ.
ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಕಾಲಭೈರವೇಶ್ವರ ಕ್ಷೇತ್ರದಲ್ಲಿ ದೇವೇಗೌಡ ದಂಪತಿಗಳ ಹೆಸರಿನಲ್ಲಿ ನಿರ್ಮಿಸಲಾಗಿರುವ ಅತಿಥಿಗೃಹ ಉದ್ಘಾಟಿಸಿದ ಚೆನ್ನಿಗಪ್ಪ ಮಾನವ ಧರ್ಮ ದೊಡ್ಡದು. ದುರಾಸೆ ಸಲ್ಲದು, ನೊಂದವರಿಗೆ ಸಹಾಯ ಮಾಡುವ ಬುದ್ದಿಯನ್ನು ಜನತೆ ಕಲಿಯಬೇಕೆಂದು ತಿಳಿಸಿದರು. ಈ ಅತಿಥಿಗೃಹವನ್ನು ಚೆನ್ನಿಗಪ್ಪ ತನ್ನ ಸ್ವಂತ ಖರ್ಚಿನಲ್ಲಿ ನಿರ್ಮಿಸಿದ್ದಾರೆ.
ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಅವರು ಇಂಥಹ ಕೆಲಸಕ್ಕೆ ಮುಂದಾಗಬಾರದಿತ್ತು. ಇದರ ಪ್ರತಿಫಲವನ್ನು ಒಂದಲ್ಲಾ ಒಂದು ದಿನ ಅವರು ಅನುಭವಿಸುತ್ತಾರೆ ಎಂದು ಚೆನ್ನಿಗಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.
ಹಣ ಮತ್ತು ಅಧಿಕಾರ ಎಂದೂ ಶಾಶ್ವತವಲ್ಲ. ಅದು ಇದ್ದಾಗ ಎಷ್ಟು ಜನರಿಗೆ ಸಹಾಯ ಮಾಡಿದ್ದೇವೆ ಎನ್ನುವುದಷ್ಟೇ ಮುಖ್ಯ. ದೇವೇಗೌಡ ಮತ್ತು ಕುಮಾರಸ್ವಾಮಿಯವರು ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷದ ಬಲಾಭಿವೃದ್ದಿಯ ಜವಾಬ್ದಾರಿ ನೀಡಿದರೆ ಶಿರಸಾ ವಹಿಸಿ ಮಾಡುತ್ತೇನೆ ಎಂದು ಚೆನ್ನಿಗಪ್ಪ ಸ್ವಾಮಿ ಮತ್ತು ಪಕ್ಷ ನಿಷ್ಠೆ ಮೆರೆದಿದ್ದಾರೆ.
ಆಪರೇಷನ್ ಕಮಲದ ಮೂಲಕ ಜೆಡಿಎಸ್ ನಿಂದ ಬಿಜೆಪಿಗೆ ಹಾರಿ ಮಧುಗಿರಿಯಲ್ಲಿ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ವಿರುದ್ದ ಚೆನ್ನಿಗಪ್ಪ ಹೀನಾಯವಾಗಿ ಪರಾಭಾವಗೊಂದಿದ್ದನ್ನು ಇಲ್ಲಿ ನಾವು ಸ್ಮರಿಸಿಕೊಳ್ಳಬಹುದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications