ವಕೀಲರು-ಪೊಲೀಸರ ಘರ್ಷಣೆ ತನಿಖೆಗೆ ಸುಪ್ರೀಂ ಆದೇಶ

ಹಲಸೂರು ಗೇಟ್ ಇನ್ಸ್ ಪೆಕ್ಟರ್ ನೇತೃತ್ವದ ತನಿಖಾ ತಂಡದಲ್ಲಿ ತಮಿಳುನಾಡು, ಕೇರಳ ಎಡಿಜಿಪಿ, ಸಿಐಡಿ ಮತ್ತು ಡಿಐಜಿ ಮಟ್ಟದ ಅಧಿಕಾರಿಗಳಿರುತ್ತಾರೆ. ಮೂರು ತಿಂಗಳೊಳಗೆ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆಯನ್ನು ಕೈಗೆತ್ತಿಕೊಂಡು ಮೇಲ್ಕಂಡ ಆದೇಶವನ್ನು ಹೊರಡಿಸಿದೆ. ಸುಪ್ರೀಂ ಆದೇಶ ಕುರಿತಂತೆ ಒಂದು ವಾರದೊಳಗೆ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಗಿದೆ.
ಮಾ.2, 2012ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಿಂದ ಹೊರಬಿದ್ದ ಎಎಂಸಿ ಗಣಿಗಾರಿಕೆ ಪ್ರಕರಣದ ಆರೋಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ....
ಕೋರ್ಟ್ ಪಾರ್ಕಿಂಗ್ ಸ್ಥಳದಲ್ಲಿ ಇಬ್ಬರು ವಕೀಲರ ನಡುವೆ ಗಾಡಿ ತೆಗೆಯುವ ವಿಚಾರಕ್ಕೆ ಜಗಳ ನಡೆದಿತ್ತು. ಇದನ್ನು ನೋಡಿದ ಖಾಸಗಿ ಮಾಧ್ಯಮ ವಾಹಿನಿ ಪ್ರತಿನಿಧಿಗಳು ವಕೀಲರ ಗಲಾಟೆಯನ್ನು ಕೆಮೆರಾದಲ್ಲಿ ಸೆರೆಹಿಡಿಯಲು ಹೋಗಿದ್ದಾರೆ. ಇದಕ್ಕೆ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ವಕೀಲರು ಪೊಲೀಸರ ನಡುವೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ದೊಡ್ಡ ಪ್ರತಿಭಟನೆ ನಡೆದಿತ್ತು. ಆ ವೇಳೆಯಲ್ಲಿ ವಕೀಲರನ್ನು ಗೂಂಡಾಗಳು ಎಂದು ಬಿಂಬಿಸಿ, ಅಪಮಾನ ಮಾಡಲಾಗಿದೆ ಎನ್ನುವ ಸಿಟ್ಟನ್ನು ಮನಸಿನಲ್ಲಿಟ್ಟುಕೊಂಡಿದ್ದ ವಕೀಲರು, ಮಾಧ್ಯಮದ ಮೇಲೆ ಹರಿಹಾಯ್ದರು.
ಇಬ್ಬರ ವಕೀಲರು ತಮ್ಮ ಗಾಡಿ ಜಗಳ ಮರೆತು ಕೆಮೆರಾಮ್ಯಾನ್ ಹಿಂದೆ ಬಿದ್ದರು. ವಕೀಲರ ಬೆಂಬಲಕ್ಕೆ ಇನ್ನಷ್ಟು ಕರಿಕೋಟುಗಳು ಸೇರಿಕೊಂಡು ಕೋರ್ಟ್ ಆವರಣದಲ್ಲಿದ್ದವರ ಬ್ಯಾಡ್ಜ್ ನೋಡಿ ಮಾಧ್ಯಮದವರು ಎಂದು ತಿಳಿದ ತಕ್ಷಣ ಯಕ್ಕಾ ಮಕ್ಕಾ ಬಾರಿಸಿದರು.
ಪರಿಸ್ಥಿತಿ ಕೈಮೀರಿ ಮಾಧ್ಯಮ ಸಂಸ್ಥೆಗಳ OB ವಾಹನಗಳು ಜಖಂಗೊಂಡಿದ್ದವು, ಅನೇಕರಿಗೆ ಗಾಯಗಳಾಯಿತು. ಕೋರ್ಟ್ ಬಹಿಷ್ಕರಿಸಿ ವಕೀಲರು ಮುಷ್ಕರ ಹೂಡಿದರು. ವಕೀಲರ ವರ್ತನೆ ವಿರುದ್ಧ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯಿತು.ಮಾಧ್ಯಮ ಸಂಸ್ಥೆಗಳು ಕೂಡಾ ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದರು.
ಸುಮಾರು 12 ದಿನಗಳ ಕೋರ್ಟ್ ಆವರಣಕ್ಕೆ ಕಾಲಿಡದ ವಕೀಲರು ಕೊನೆಗೂ ಕರಿಕೋಟು ಧರಿಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಆದರೆ, ಪೊಲೀಸ್ ಹಾಗೂ ವಕೀಲರ ನಡುವೆನ ಘರ್ಷಣೆ ಪ್ರಕರಣ ಕೊನೆಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಶುಕ್ರವಾರ(ಅ.18) ವಿಚಾರಣೆ ನಡೆದು ಆದೇಶ ಹೊರಬಿದ್ದಿದೆ.












Click it and Unblock the Notifications