ನಾನು ಹೃದ್ರೋಗಿ,ಎಷ್ಟು ದಿನ ಬದುಕುತ್ತೇನೋ: ಎಚ್ಡಿಕೆ

 I am a heart patient, H D Kumaraswamy in Hubli
ಹುಬ್ಬಳ್ಳಿ, ಅ 20: ನನಗೆ ಹೃದಯದ ಕಾಯಿಲೆಯಿದೆ. ಈ ಹಿಂದೆ ಶಸ್ತ್ರಚಿಕಿತ್ಸೆ ಕೂಡಾ ನಡೆದಿದೆ. ಇನ್ನೆಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ಆದರೆ ನಾನು ಮಣ್ಣಾಗುವ ಮುನ್ನ ಈ ರಾಜ್ಯದ ಬಗ್ಗೆ ನಾನು ಕಂಡ ಕನಸು ನನಸಾಗ ಬೇಕೆನ್ನುವುದೇ ನನ್ನ ಗುರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ನಂದಗುಡಿಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ನಾನು ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ. ರಾಜ್ಯವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ದು ರೈತರ ಹಿತ ಕಾಪಾಡಬೇಕೆನ್ನುವುದು ನನ್ನ ಉದ್ದೇಶ. ನಾನು ಮುಖ್ಯಮಂತ್ರಿಯಾಗಿದ್ದಾಗ ಬಹಳಷ್ಟು ಅಭಿವೃದ್ದಿ ಕೆಲಸ ಮಾಡಿದ್ದೇನೆ ಎಂದರು.

ಆಪರೇಶನ್ ಕಮಲದ ಮೂಲಕ ಪಕ್ಷ ತೊರೆದ ಸಮಯಸಾಧಕ ಶಾಸಕರಿಗೆ ಮತ್ತೆ ಪಕ್ಷದ ಟಿಕೆಟ್ ನೀಡುವುದಿಲ್ಲ. ಕ್ಷೇತ್ರದಲ್ಲಿ ಅವರು ಎಷ್ಟು ಬಲಿಷ್ಠರಾಗಿದ್ದರೂ ಸರಿ ಅಂಥಹ ನಾಯಕರು ಜೆಡಿಎಸ್ ಪಕ್ಷಕ್ಕೆ ಬೇಕಿಲ್ಲ ಎಂದು ಕುಮಾರಸ್ವಾಮಿ ಪಕ್ಷಾಂತರಿಗಳಿಗೆ ಎಚ್ಚರಿಸಿದರು.

ಸಾರಿಗೆ ಸಂಸ್ಥೆಯ ನೌಕರರ ಪ್ರತಿಭಟನೆ ವಿಚಾರದಲ್ಲಾಗಲಿ ಅಥವಾ ಕಾವೇರಿ ವಿಚಾರದಲ್ಲಾಗಿ ಸಿಎಂ ಜಗದೀಶ್ ಶೆಟ್ಟರ್ ಸ್ವತಂತ್ರ ಅಧಿಕಾರ ಚಲಾವಣೆ ಮಾಡಿಲ್ಲ. ಅವರೇ ಹೇಳಿದಂತೆ ಅವರ ಮಾತನ್ನು ಯಾರೂ ಕೇಳುತ್ತಿಲ್ಲ. ಅವರೊಬ್ಬರು ಅಸಹಾಯಕ ಸಿಎಂ ಎಂದವರು ಲೇವಡಿ ಮಾಡಿದರು.

ಬೆಳಗಾವಿ ಸುವರ್ಣಸೌಧ ನಿರ್ಮಾಣದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಅವ್ಯವಹಾರದ ಬಗ್ಗೆ ಮಾಹಿತಿ ಕಲೆ ಹಾಕಿ ಜನತೆಯ ಮುಂದೆ ಬಿಜೆಪಿಯ ಬಣ್ಣ ಬಯಲು ಮಾಡುತ್ತೇನೆ ಎಂದು ಎಚ್ಡಿಕೆ ಅವರು ಬಿಜೆಪಿಗೆ ಎಚ್ಚರಿಕೆ ಗಂಟೆ ಬಾರಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳು ತಮ್ಮತಮ್ಮ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗ ಜೆಡಿಎಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ. ಈ ಎರಡೂ ಪಕ್ಷಗಳಿಗೆ ಮುಂದಿನ ದಿನ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಲು ಮರೆಯಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+