ಕಸದ ಮೂಟೆ ಮೇಲೆ ಮೂಗು ಮುಚ್ಚಿ ಕೂತ ಸಿಲಿಕಾನ್ ಸಿಟಿ

ಆದರೆ, ಭಾನುವಾರ ಮಂಡೂರಿನ ಕಡೆ ತೆರಳುತ್ತಿದ್ದ ಕಸದ ಲಾರಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಬಳಿ ಬೆಟ್ಟದಾಸನಪುರ ಹಾಗೂ ಬಿಂಗಿಪುರದ ಗ್ರಾಮಸ್ಥರು ತಡೆದು ನಿಲ್ಲಿಸಿದ್ದಾರೆ. ಸುಮಾರು 50 ಲಾರಿಗಳು ರಸ್ತೆಯಲ್ಲೇ ನಿಂತಿದ್ದು, 100ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.
ಕಸದ ಸಮಸ್ಯೆ ಪರಿಹರಿಸಲು ಐಎಎಸ್ ದಂಪತಿ ರಜನೀಶ್ ಗೋಯಲ್ ಹಾಗೂ ಶಾಲಿನಿ ರಜನೀಶ್ ಅವರು ಶತಪ್ರಯತ್ನ ಪಡುತ್ತಿದ್ದರೆ, ಎಲ್ಲವೂ ಉಲ್ಟಾ ಹೊಡೆಯುತ್ತಿದೆ. ಮೊದಲಿಗೆ 'ಮನೆಯಲ್ಲಿಯೇ ಕಸ ವಿಂಗಡಿಸಿ' ಎಂದು ಕಸ ವಿಂಗಡನೆ ವಿಧಾನವನ್ನು ಶಾಲಿನಿ ರಜನೀಶ್ ಅವರು ಜಾರಿಗೊಳಿಸಿದರು.
ಮನೆಯಲ್ಲಿ ಹಸಿ ಮತ್ತು ಒಣ ಕಸ ವಿಂಗಡಿಸಬೇಕು. ಪಾಲಿಕೆಯ ಪೌರ ಕಾರ್ಮಿಕರಿಗೆ ಕಸವನ್ನು ನೇರವಾಗಿ ಹಸ್ತಾಂತರಿಸಬೇಕು ಎಂಬ ನಿಯಮ ಜಾರಿಗೆ ಬರುವಷ್ಟರಲ್ಲೇ ವಿಲೇವಾರಿ ಸಮಸ್ಯೆ ಎದುರಾಯಿತು.
ಬಿಬಿಎಂಪಿ ಆಯುಕ್ತ ರಜನೀಶ್ ಗೋಯಲ್ ಅವರು ಕಸ ವಿಲೇವಾರಿಗೆ ಚಾಲನೆ ನೀಡಿ ಟ್ರಕ್ ಗಳನ್ನು ಮಂಡೂರಿನತ್ತ ಕಳಿಸಿದರೆ, ಸ್ಥಳೀಯರು ಭಾರಿ ಪ್ರತಿರೋಧ ವ್ಯಕ್ತಪಡಿಸಿದರು. ಆದರೆ, ಈ ಸಂದರ್ಭದಲ್ಲಿ ಮೇಯರ್ ಡಿ ವೆಂಕಟೇಶ್ ಮೂರ್ತಿ ಅವರು ಮಧ್ಯ ಪ್ರವೇಶಿಸಿ, ಮಂಡೂರು ಜನತೆ ಜೊತೆ ಸಂಧಾನ ಮಾತುಕತೆ ನಡೆಸಲಾಗಿದೆ. ಶನಿವಾರ ರಾತ್ರಿಯಿಂದಲೇ ವಾಹನಗಳು ಮಂಡೂರಿಗೆ ತೆರಳಿದೆ ಎಂದು ಹೇಳಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಸುಮಾರು 14,000 ಮೆಟ್ರಿಕ್ ಟನ್ ಗಳಷ್ಟು ಕಸ ಉತ್ಪಾದನೆಯಾಗಿದೆ. ಬಿಬಿಎಂಪಿ ಕಚೇರಿ ಕಂಟ್ರೋಲ್ ರೂಮ್ ಗೆ ದೂರಿನ ಕರೆಗಳ ಮಹಾಪೂರವೇ ಹರಿದಿದೆ.
ಸಾಲು ಸಾಲು ರಜೆಯ ಜೊತೆ ಕಸದ ಸಮಸ್ಯೆಯಿಂದ ಸಿಕ್ಕಿರುವ ಸಾಂದರ್ಭಿಕ ಬಿಡುವಿನ ಲಾಭ ಪಡೆದಿರುವ ಪೌರ ಕಾರ್ಮಿಕರು ನಗರದ ಬಹುತೇಕ ವಾರ್ಡ್ ಗಳಲ್ಲಿ ತಳ್ಳುಗಾಡಿಯನ್ನು ಪಕ್ಕಕ್ಕೆ ಹಾಕಿ ಆರಾಮವಾಗಿ ಕುಳಿತುಬಿಟ್ಟಿದ್ದಾರೆ. ಜಯನಗರ, ಮಲ್ಲೇಶ್ವರ, ಭೂಪಸಂದ್ರ, ಸಂಜಯ ನಗರ, ಕೋರಮಂಗಲ, ಆನಂದ ನಗರ, ಬಸವನಗುಡಿ, ಹೊಸಕೆರೆಹಳ್ಳಿ ಸೇರಿದಂತೆ ಅನೇಕ ಕಡೆ ಮಳೆಯಲ್ಲಿ ಕಸದ ರಾಶಿ ನೆಂದು ತೊಪ್ಪೆಯಾಗುತ್ತಿದೆ.
ನಗರದಲ್ಲಿ ಈಗಾಗಲೇ ಡೆಂಘಿ ಜ್ವರದ ಭೀತಿ ಆವರಿಸಿದ್ದು, ಇಲಿಜ್ವರ, ಮಲೇರಿಯಾ, ಟೈಫಾಯ್ಡ್, ಜಾಂಡೀಸ್ ಮುಂತಾದ ಸಾಂಕ್ರಾಮಿಕ ರೋಗಗಳ ಭಯ ಆವರಿಸಿದೆ.
ಪ್ರಾಣಿಗಳ ಮಲಮೂತ್ರಗಳಿರುವ ಜಾಗದಲ್ಲಿ ಓಡಾಡುವಾಗ ಪಾದರಕ್ಷೆ ಹಾಗೂ ಕೈಚೀಲ ಉಪಯೋಗಿಸಬೇಕು, ಕುಡಿಯುವ ನೀರಿನ ಮೂಲದೊಂದಿಗೆ ಇಲಿ ಮತ್ತು ಇತರೆ ಪ್ರಾಣಿಗಳ ಮಲಮೂತ್ರ ವಿಶ್ರಣವಾಗದಂತೆ ಎಚ್ಚರವಹಿಸಬೇಕು, ಇಲಿಗಳ ನಿಯಂತ್ರಣ ಮಾಡಬೇಕು. ಶುದ್ಧ ನೀರು ಹಾಗೂ ಆಹಾರ ಸೇವಿಸಬೇಕು. ಕಸ ಹಾಗೂ ಕೊಳಚೆ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications