ಕಸದ ಮೂಟೆ ಮೇಲೆ ಮೂಗು ಮುಚ್ಚಿ ಕೂತ ಸಿಲಿಕಾನ್ ಸಿಟಿ

ಆದರೆ, ಭಾನುವಾರ ಮಂಡೂರಿನ ಕಡೆ ತೆರಳುತ್ತಿದ್ದ ಕಸದ ಲಾರಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಬಳಿ ಬೆಟ್ಟದಾಸನಪುರ ಹಾಗೂ ಬಿಂಗಿಪುರದ ಗ್ರಾಮಸ್ಥರು ತಡೆದು ನಿಲ್ಲಿಸಿದ್ದಾರೆ. ಸುಮಾರು 50 ಲಾರಿಗಳು ರಸ್ತೆಯಲ್ಲೇ ನಿಂತಿದ್ದು, 100ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.
ಕಸದ ಸಮಸ್ಯೆ ಪರಿಹರಿಸಲು ಐಎಎಸ್ ದಂಪತಿ ರಜನೀಶ್ ಗೋಯಲ್ ಹಾಗೂ ಶಾಲಿನಿ ರಜನೀಶ್ ಅವರು ಶತಪ್ರಯತ್ನ ಪಡುತ್ತಿದ್ದರೆ, ಎಲ್ಲವೂ ಉಲ್ಟಾ ಹೊಡೆಯುತ್ತಿದೆ. ಮೊದಲಿಗೆ 'ಮನೆಯಲ್ಲಿಯೇ ಕಸ ವಿಂಗಡಿಸಿ' ಎಂದು ಕಸ ವಿಂಗಡನೆ ವಿಧಾನವನ್ನು ಶಾಲಿನಿ ರಜನೀಶ್ ಅವರು ಜಾರಿಗೊಳಿಸಿದರು.
ಮನೆಯಲ್ಲಿ ಹಸಿ ಮತ್ತು ಒಣ ಕಸ ವಿಂಗಡಿಸಬೇಕು. ಪಾಲಿಕೆಯ ಪೌರ ಕಾರ್ಮಿಕರಿಗೆ ಕಸವನ್ನು ನೇರವಾಗಿ ಹಸ್ತಾಂತರಿಸಬೇಕು ಎಂಬ ನಿಯಮ ಜಾರಿಗೆ ಬರುವಷ್ಟರಲ್ಲೇ ವಿಲೇವಾರಿ ಸಮಸ್ಯೆ ಎದುರಾಯಿತು.
ಬಿಬಿಎಂಪಿ ಆಯುಕ್ತ ರಜನೀಶ್ ಗೋಯಲ್ ಅವರು ಕಸ ವಿಲೇವಾರಿಗೆ ಚಾಲನೆ ನೀಡಿ ಟ್ರಕ್ ಗಳನ್ನು ಮಂಡೂರಿನತ್ತ ಕಳಿಸಿದರೆ, ಸ್ಥಳೀಯರು ಭಾರಿ ಪ್ರತಿರೋಧ ವ್ಯಕ್ತಪಡಿಸಿದರು. ಆದರೆ, ಈ ಸಂದರ್ಭದಲ್ಲಿ ಮೇಯರ್ ಡಿ ವೆಂಕಟೇಶ್ ಮೂರ್ತಿ ಅವರು ಮಧ್ಯ ಪ್ರವೇಶಿಸಿ, ಮಂಡೂರು ಜನತೆ ಜೊತೆ ಸಂಧಾನ ಮಾತುಕತೆ ನಡೆಸಲಾಗಿದೆ. ಶನಿವಾರ ರಾತ್ರಿಯಿಂದಲೇ ವಾಹನಗಳು ಮಂಡೂರಿಗೆ ತೆರಳಿದೆ ಎಂದು ಹೇಳಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಸುಮಾರು 14,000 ಮೆಟ್ರಿಕ್ ಟನ್ ಗಳಷ್ಟು ಕಸ ಉತ್ಪಾದನೆಯಾಗಿದೆ. ಬಿಬಿಎಂಪಿ ಕಚೇರಿ ಕಂಟ್ರೋಲ್ ರೂಮ್ ಗೆ ದೂರಿನ ಕರೆಗಳ ಮಹಾಪೂರವೇ ಹರಿದಿದೆ.
ಸಾಲು ಸಾಲು ರಜೆಯ ಜೊತೆ ಕಸದ ಸಮಸ್ಯೆಯಿಂದ ಸಿಕ್ಕಿರುವ ಸಾಂದರ್ಭಿಕ ಬಿಡುವಿನ ಲಾಭ ಪಡೆದಿರುವ ಪೌರ ಕಾರ್ಮಿಕರು ನಗರದ ಬಹುತೇಕ ವಾರ್ಡ್ ಗಳಲ್ಲಿ ತಳ್ಳುಗಾಡಿಯನ್ನು ಪಕ್ಕಕ್ಕೆ ಹಾಕಿ ಆರಾಮವಾಗಿ ಕುಳಿತುಬಿಟ್ಟಿದ್ದಾರೆ. ಜಯನಗರ, ಮಲ್ಲೇಶ್ವರ, ಭೂಪಸಂದ್ರ, ಸಂಜಯ ನಗರ, ಕೋರಮಂಗಲ, ಆನಂದ ನಗರ, ಬಸವನಗುಡಿ, ಹೊಸಕೆರೆಹಳ್ಳಿ ಸೇರಿದಂತೆ ಅನೇಕ ಕಡೆ ಮಳೆಯಲ್ಲಿ ಕಸದ ರಾಶಿ ನೆಂದು ತೊಪ್ಪೆಯಾಗುತ್ತಿದೆ.
ನಗರದಲ್ಲಿ ಈಗಾಗಲೇ ಡೆಂಘಿ ಜ್ವರದ ಭೀತಿ ಆವರಿಸಿದ್ದು, ಇಲಿಜ್ವರ, ಮಲೇರಿಯಾ, ಟೈಫಾಯ್ಡ್, ಜಾಂಡೀಸ್ ಮುಂತಾದ ಸಾಂಕ್ರಾಮಿಕ ರೋಗಗಳ ಭಯ ಆವರಿಸಿದೆ.
ಪ್ರಾಣಿಗಳ ಮಲಮೂತ್ರಗಳಿರುವ ಜಾಗದಲ್ಲಿ ಓಡಾಡುವಾಗ ಪಾದರಕ್ಷೆ ಹಾಗೂ ಕೈಚೀಲ ಉಪಯೋಗಿಸಬೇಕು, ಕುಡಿಯುವ ನೀರಿನ ಮೂಲದೊಂದಿಗೆ ಇಲಿ ಮತ್ತು ಇತರೆ ಪ್ರಾಣಿಗಳ ಮಲಮೂತ್ರ ವಿಶ್ರಣವಾಗದಂತೆ ಎಚ್ಚರವಹಿಸಬೇಕು, ಇಲಿಗಳ ನಿಯಂತ್ರಣ ಮಾಡಬೇಕು. ಶುದ್ಧ ನೀರು ಹಾಗೂ ಆಹಾರ ಸೇವಿಸಬೇಕು. ಕಸ ಹಾಗೂ ಕೊಳಚೆ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications