ಯಡಿಯೂರಪ್ಪ ಪಕ್ಷದಲ್ಲಿ ವಾಟಾಳ್ ಪಕ್ಷ ವಿಲೀನ!

ಟಿವಿ9 ಚಕ್ರವ್ಯೂಹ ಕಾರ್ಯಕ್ರಮದಲ್ಲಿ ಲಕ್ಷ್ಮಣ್ ಹೂಗಾರ್ ಜೊತೆ ಮಾತನಾಡುತ್ತಿದ್ದ ವಾಟಾಳ್, ಮೊದಲು ಯಡಿಯೂರಪ್ಪ ಪಕ್ಷ ತೊರೆದು ಬರಲಿ. ಬಿಜೆಪಿ ತೊರೆದು ಹೊಸ ಪಕ್ಷ ರಚಿಸಿದರೆ ನಾವು ಅವರಿಗೆ ಬೆಂಬಲ ನೀಡುತ್ತೇವೆ ಅಲ್ಲದೆ ವಿಲೀನವಾಗುವ ಪರಿಸ್ಥಿತಿ ಬಂದರೆ ಅದಕ್ಕೂ ರೆಡಿ ಎಂದು ಘೋಷಿಸಿದ್ದಾರೆ.
ಯಡಿಯೂರಪ್ಪನವರು ಕಳೆದ ಒಂದು ವರ್ಷದಿಂದ ಇವತ್ತು ಬಿಜೆಪಿ ಬಿಡುತ್ತೇನೆ ನಾಳೆ ಬಿಡುತ್ತೇನೆ ಎಂದು ಹೇಳುತ್ತಲೇ ಇದ್ದಾರೆ. ಈಗ ಮತ್ತೆ ಡಿಸೆಂಬರ್ 10ರ ದಿನ ನಿಗದಿ ಮಾಡಿದ್ದಾರೆ. ಅವರು ಮೊದಲು ಪಕ್ಷ ಬಿಡಲಿ ಆಮೇಲೆ ನೋಡೋಣ ಎಂದು ವಾಟಾಳ್ ವ್ಯಂಗ್ಯವಾಡಿದ್ದಾರೆ.
ಕೆಲವೊಂದು ಸಮಸ್ಯೆಗಳನ್ನು ನಾವು ಸದನದಲ್ಲೇ ಮಾತನಾಡಬೇಕಾಗುತ್ತೆ. ಎಲ್ಲಾ ಪಕ್ಷದವರಿಗೂ ನನ್ನನ್ನು ವಿಧಾನಪರಿಷತ್ ಗೆ ಕಳುಹಿಸಲು ಬೆಂಬಲ ನೀಡಿ ಎಂದು ಕೇಳಿಕೊಂಡೆ. ಆದರೆ ಯಾರೂ ನನ್ನ ಮಾತಿಗೆ ಬೆಲೆ ಕೊಡಲಿಲ್ಲ. ಇದು ಬಹು ದೊಡ್ಡ ದುರಂತ ಎಂದು ವಾಟಾಳ್ ಕಾರ್ಯಕ್ರಮದಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ.
ವಾಟಾಳ್ ಅನ್ನೋದು ಒಂದು ಶಕ್ತಿ. ಈ ಶಕ್ತಿಯನ್ನು ಮಟ್ಟ ಹಾಕಲು ಯಾರಾದರೂ ಪ್ರಯತ್ನಿಸಿದರೆ ಅವರು ಭಸ್ಮವಾಗುತ್ತಾರೆ. ಚಾಮರಾಜನಗರ ನನ್ನ ಕರ್ಮಭೂಮಿ, ನಾನು ಮತ್ತೆ ಆ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಉಮೇಶ್ ಕತ್ತಿಯವರ ಪ್ರತ್ಯೇಕ ರಾಜ್ಯದ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ. 25 ವರ್ಷಗಳಿಂದ ಬೆಳಗಾವಿ ವಿಷಯದಲ್ಲಿ ಈ ವಾಟಾಳ್ ನಾಗರಾಜ್ ಹೋರಾಡಿದ್ದಾರೆ. ಮುಂದೇನೂ ಹೋರಾಡುತ್ತಾರೆ ಎಂದು ವಾಟಾಳ್ ಸಮಸ್ತ ಕನ್ನಡ ಜನತೆಗೆ ಭರವಸೆ ನೀಡಿದ್ದಾರೆ.
ನನಗಿನ್ನೂ 25 ವರ್ಷ ಕನ್ನಡ ಮತ್ತು ಕರ್ನಾಟಕಕ್ಕಾಗಿ ದುಡಿಯುವ ಶಕ್ತಿಯಿದೆ. ಯಾವತ್ತು ನನ್ನ ಶಕ್ತಿ ಬತ್ತುತ್ತೋ ಅಂದೇ ಪುರಭವನದ ಎದುರು ನನ್ನ ಜನ್ಮ ದಿನಾಂಕವನ್ನು ಬಹಿರಂಗ ಪಡಿಸುತ್ತೇನೆ ಎಂದು ವಾಟಾಳ್ ಲಕ್ಷ್ಮಣ್ ಹೂಗಾರ್ ಅವರಿಗೆ ಭರವಸೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications