ಟಿವಿ ರಿಮೋಟ್ ಗಾಗಿ ಜಗಳ ಸಾವಿನಲ್ಲಿ ಅಂತ್ಯ

ಸಾಣೆಗೊರವನಹಳ್ಳಿ 3ನೇ ಹಂತ 3ನೇ ಬ್ಲಾಕ್, 7ನೇ ಮುಖ್ಯರಸ್ತೆ ನಿವಾಸಿ ಶ್ರೀನಿವಾಸ್ (24) ಮೃತಪಟ್ಟ ದುರ್ದೈವಿ.
ಶ್ರೀನಿವಾಸ್ ಶಾಲೆಯೊಂದರಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶ್ರೀನಿವಾಸ್ ಅಣ್ಣ ನವೀನ್ ಅವರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕಳೆದ ರಾತ್ರಿ 9.30 ರ ಸಮಯದಲ್ಲಿ ಶ್ರೀನಿವಾಸ್, ನವೀನ್ ಹಾಗೂ ಬಾಲರಾಜು ಎಂಬುವರು ತಮ್ಮ ತಾಯಿಯೊಂದಿಗೆ ಟಿವಿ ವೀಕ್ಷಿಸುತ್ತ ಕುಳಿತಿದ್ದರು.
ಈ ಸಂದರ್ಭದಲ್ಲಿ ಅಣ್ಣ ನವೀನ್ ಮತ್ತು ತಮ್ಮ ಶ್ರೀನಿವಾಸನ ನಡುವೆ ಟಿವಿ ಚಾನೆಲ್ ಬದಲಾವಣೆ ಮಾಡುವ ವಿಚಾರದಲ್ಲಿ ಜಗಳವಾಗಿದೆ.
ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಒಳಗೆ ಎದ್ದು ಹೋದ ನವೀನ್, ಚಾಕುವಿನೊಂದಿಗೆ ಬಂದು ಶ್ರೀನಿವಾಸ್ ರನ್ನು ಹೆದರಿಸಿದ್ದಾರೆ.
ಶ್ರೀನಿವಾಸ್ ತಪ್ಪಿಸಿಕೊಳ್ಳಲು ಯತ್ನಿಸಿ ಮನೆಯಿಂದ ಹೊರ ಹೋಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನವೀನ್ ಬೀಸಿದ ಚಾಕು ಶ್ರೀನಿವಾಸ್ ತೊಡೆಗೆ ಭಾರಿ ಗಾಯ ಮಾಡಿದೆ. ನೋವಿನಿಂದ ಮನೆಯಿಂದ ಹೊರಬಿದ್ದ ಶ್ರೀನಿವಾಸ್ ಆಯತಪ್ಪಿ ಮೊದಲನೆ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.
ತಕ್ಷಣ ಬಾಲರಾಜು ಹಾಗೂ ನವೀನ್ ಸ್ಥಳಕ್ಕೆ ಆಗಮಿಸಿ ಶ್ರೀನಿವಾಸ್ ರನ್ನು ಸಮೀಪದ ಖಾಸಗಿ ಆಸ್ಪತೆಗೆ ಸೇರಿಸಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ರಕ್ತಸ್ರಾವ ಅಧಿಕವಾಗಿ ಶ್ರೀನಿವಾಸ್ ಅವರು ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಇನ್ನೂ ಬರಬೇಕಿದೆ. ಆಯುಧಪೂಜೆ ದಿನ ನವೀನ್ ಅವರ ಕುಟುಂಬ ಸಾವಿನ ಸೂತಕದಲ್ಲಿ ತುಂಬಿದೆ. ಬಸವೇಶ್ವರನಗರ ಪೊಲೀಸರು ಪ್ರಕರಣ ದಾಖಲಿಸಿಕೊಂದು ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ಟಿವಿ ರಿಮೋಟ್ ಗಾಗಿ ನಡೆದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಆಚಾರ್ಯ ಇನ್ಸ್ ಸ್ಟಿಟ್ಯೂಟ್ ನ ಆರ್ಕಿಟೆಕ್ಚರ್ ವಿಭಾಗದ ವಿದ್ಯಾರ್ಥಿಗಳಿಬ್ಬರು ಐಪಿಎಲ್ ಪಂದ್ಯವಾಳಿ ನೋಡಲು ಕಿತ್ತಾಟ ನಡೆಸಿದ್ದಾರೆ. ರಿಚರ್ಡ್ ಎಂಬ ವಿದ್ಯಾರ್ಥಿಯನ್ನು ಆತನ ಹಾಸ್ಟೆಲ್ ಮೇಟ್ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications